ಬ್ರೇಕಿಂಗ್ ನ್ಯೂಸ್
12-07-23 02:10 pm Source: News18 Kannada ಸಿನಿಮಾ
ಚೆನ್ನೈನ ಅಕ್ಕರೈ ಜಂಕ್ಷನ್ನಲ್ಲಿ ನಟ ವಿಜಯ್ ಅವರ ಕಾರು ರೆಡ್ ಸಿಗ್ನಲ್ ಜಂಪ್ ಮಾಡಿದೆ. ನಟನ ಕಾರಿ ಡ್ರೈವರ್ ರೂಲ್ಸ್ ಬ್ರೇಕ್ ಮಾಡಿದ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪೊಲೀಸ್ ಇಲಾಖೆ ಗಮನಕ್ಕೂ ಬಂದಿದೆ. ವಿಡಿಯೋ ನೋಡಿದ ಚೆನ್ನೈ ಸಂಚಾರ ಪೊಲೀಸರು ವಿಜಯ್ ಕಾರಿಗೆ 500 ರೂ. ದಂಡ ಹಾಕಿದ್ದಾರೆ. ನಿನ್ನೆ ಚೆನ್ನೈನ ಪನೈಯೂರಿನಲ್ಲಿ ನಡೆದ ಕಾರ್ಯಕಾರಿಣಿ ಸಭೆಗೆ ವಿಜಯ್ ತೆರಳಿದ್ರು. ಕಾರ್ಯಕ್ರಮಕ್ಕೆ ಹೋಗುವಾಗ ನಟ ಟ್ರಾಫಿಕ್ ಸಿಗ್ನಲ್ ಉಲ್ಲಂಘಿಸಿದ್ದಾರೆ.
ಕಳೆದ ವರ್ಷ ವಿಜಯ್ ಅವರ ಅದೇ ವಾಹನಕ್ಕೆ ನಿಯಮ ಉಲ್ಲಂಘಿಸಿ ಕಪ್ಪು ಸ್ಟಿಕ್ಕರ್ ಅಂಟಿಸಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಪೊಲೀಸರು 500 ರೂಪಾಯಿ ದಂಡ ವಿಧಿಸಿದ್ದರು. ಇದೀಗ ಮತ್ತೆ ದಂಡ ವಿಧಿಸಿಲಾಗಿದೆ. ನಟನೆಯ ಜೊತೆಗೆ ರಾಜಕೀಯದತ್ತ ಮನಸ್ಸು ಮಾಡಿರುವ ನಟ ವಿಜಯ್, ತಾಲೂಕು ಮಟ್ಟದಲ್ಲಿ ಪಕ್ಷ ಸಂಘಟನೆಯ ಮಾಡಲು ಮುಂದಾಗಿದ್ದಾರೆ. ತಮ್ಮ ಜನಾಂದೋಲನ ಕಾರ್ಯಕಾರಿಣಿಗಳೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ.
ತಮಿಳು ಚಿತ್ರರಂಗದ ಖ್ಯಾತ ನಟ ವಿಜಯ್ ಸಿನಿಮಾ ನಟನೆಯಿಂದ ವಿರಾಮ ತೆಗೆದುಕೊಳ್ಳುತ್ತಿದ್ದಾರೆ ಎಂದು ತಮಿಳಿ ಮಾಧ್ಯಮಗಳಲ್ಲಿ ವರದಿಯಾಗಿದೆ. ವಿಜಯ್ ರಾಜಕೀಯ ಪ್ರವೇಶದ ಚರ್ಚೆಗಳು ಜೋರಾಗಿದ್ದು, ನಟ ನಟನೆಯಿಂದ ವಿರಾಮ ತೆಗೆದುಕೊಂಡು ರಾಜಕೀಯದಲ್ಲಿ ಆ್ಯಕ್ಟಿವ್ ಆಗಿದ್ದಾರೆ. ಇತ್ತೀಚೆಗಷ್ಟೇ ತಮಿಳುನಾಡಿನ ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಲ್ಲಿ 10 ಮತ್ತು 12 ನೇ ತರಗತಿ ಪರೀಕ್ಷೆಗಳಲ್ಲಿ ಅಗ್ರಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲು ವಿಜಯ್ ಕಾರ್ಯಕ್ರಮ ಆಯೋಜಿಸಿದ್ರು. ವಿಜಯ್ ಅಭಿಮಾನಿ ಸಂಘಟನೆಯಾದ ಮಕ್ಕಳ್ ಇಯಕ್ಕಂ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಜಯ್ ರಾಜಕೀಯ ಪ್ರವೇಶದ ಸುಳಿವು ನೀಡಿದರು.
ಹಣ ಪಡೆದು ಮತದಾನ ಮಾಡದಂತೆ ಪೋಷಕರಿಗೆ ಸಲಹೆ ನೀಡಬೇಕು ಎಂದು ಮಕ್ಕಳಿಗೆ ತಿಳಿಸಿದ ವಿಜಯ್, ವಿದ್ಯಾರ್ಥಿಗಳನ್ನು ಭವಿಷ್ಯದ ಮತದಾರರು ಎಂದು ಬಣ್ಣಿಸಿದರು. ತಮ್ಮ ಸಿನಿಮಾಗಳ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ರಾಜಕೀಯದ ಬಗ್ಗೆ ಹಲವು ಬಾರಿ ಮಾತನಾಡಿರುವ ವಿಜಯ್ ಇದೇ ಮೊದಲ ಬಾರಿಗೆ ಸಾರ್ವಜನಿಕ ಸಮಾರಂಭದಲ್ಲಿ ರಾಜಕೀಯದ ಬಗ್ಗೆ ಮಾತಾಡಿದ್ದರು.
ವಿಜಯ್ ರಾಜಕೀಯಕ್ಕೆ ಬರುತ್ತಿದ್ದಾರೆ ಎಂಬುದಕ್ಕೆ ಇದೇ ಸಾಕ್ಷಿಯಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ವಿಜಯ್ ಮಾತುಗಳು ವೈರಲ್ ಆಗಿದೆ. ತಮಿಳು ನಾಡಿನ ರಾಜಕೀಯದಲ್ಲಿ ವಿಜಯ್ ಶೈನ್ ಆಗಲು ತಯಾರಾಗಿದ್ದಾರೆ.
Cinema Car Violated Signal Actor Vijay Fined by Traffic Police.
18-04-25 05:38 pm
HK News Desk
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
Shamanur, CM Siddaramaiah: ರಾಜ್ಯದಲ್ಲಿ ಲಿಂಗಾಯತ...
16-04-25 11:03 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
18-04-25 10:17 pm
Mangalore Correspondent
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
ಸುರತ್ಕಲ್ ಎನ್ಐಟಿಕೆ ಸಂಸ್ಥೆಯಲ್ಲಿ ಮಹತ್ತರ ಫೈಲ್ ಡಿಲ...
17-04-25 04:39 pm
18-04-25 10:59 pm
Mangalore Correspondent
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm
Ullal Gang rape, Mangalore, Arrest: ಪಶ್ಚಿಮ ಬಂ...
17-04-25 09:56 pm
Gang Rape, Mangalore, Ullal, Crime: ಪಶ್ಚಿಮ ಬಂ...
17-04-25 03:19 pm