ಬ್ರೇಕಿಂಗ್ ನ್ಯೂಸ್
12-07-23 02:10 pm Source: News18 Kannada ಸಿನಿಮಾ
ಚೆನ್ನೈನ ಅಕ್ಕರೈ ಜಂಕ್ಷನ್ನಲ್ಲಿ ನಟ ವಿಜಯ್ ಅವರ ಕಾರು ರೆಡ್ ಸಿಗ್ನಲ್ ಜಂಪ್ ಮಾಡಿದೆ. ನಟನ ಕಾರಿ ಡ್ರೈವರ್ ರೂಲ್ಸ್ ಬ್ರೇಕ್ ಮಾಡಿದ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪೊಲೀಸ್ ಇಲಾಖೆ ಗಮನಕ್ಕೂ ಬಂದಿದೆ. ವಿಡಿಯೋ ನೋಡಿದ ಚೆನ್ನೈ ಸಂಚಾರ ಪೊಲೀಸರು ವಿಜಯ್ ಕಾರಿಗೆ 500 ರೂ. ದಂಡ ಹಾಕಿದ್ದಾರೆ. ನಿನ್ನೆ ಚೆನ್ನೈನ ಪನೈಯೂರಿನಲ್ಲಿ ನಡೆದ ಕಾರ್ಯಕಾರಿಣಿ ಸಭೆಗೆ ವಿಜಯ್ ತೆರಳಿದ್ರು. ಕಾರ್ಯಕ್ರಮಕ್ಕೆ ಹೋಗುವಾಗ ನಟ ಟ್ರಾಫಿಕ್ ಸಿಗ್ನಲ್ ಉಲ್ಲಂಘಿಸಿದ್ದಾರೆ.
ಕಳೆದ ವರ್ಷ ವಿಜಯ್ ಅವರ ಅದೇ ವಾಹನಕ್ಕೆ ನಿಯಮ ಉಲ್ಲಂಘಿಸಿ ಕಪ್ಪು ಸ್ಟಿಕ್ಕರ್ ಅಂಟಿಸಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಪೊಲೀಸರು 500 ರೂಪಾಯಿ ದಂಡ ವಿಧಿಸಿದ್ದರು. ಇದೀಗ ಮತ್ತೆ ದಂಡ ವಿಧಿಸಿಲಾಗಿದೆ. ನಟನೆಯ ಜೊತೆಗೆ ರಾಜಕೀಯದತ್ತ ಮನಸ್ಸು ಮಾಡಿರುವ ನಟ ವಿಜಯ್, ತಾಲೂಕು ಮಟ್ಟದಲ್ಲಿ ಪಕ್ಷ ಸಂಘಟನೆಯ ಮಾಡಲು ಮುಂದಾಗಿದ್ದಾರೆ. ತಮ್ಮ ಜನಾಂದೋಲನ ಕಾರ್ಯಕಾರಿಣಿಗಳೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ.


ತಮಿಳು ಚಿತ್ರರಂಗದ ಖ್ಯಾತ ನಟ ವಿಜಯ್ ಸಿನಿಮಾ ನಟನೆಯಿಂದ ವಿರಾಮ ತೆಗೆದುಕೊಳ್ಳುತ್ತಿದ್ದಾರೆ ಎಂದು ತಮಿಳಿ ಮಾಧ್ಯಮಗಳಲ್ಲಿ ವರದಿಯಾಗಿದೆ. ವಿಜಯ್ ರಾಜಕೀಯ ಪ್ರವೇಶದ ಚರ್ಚೆಗಳು ಜೋರಾಗಿದ್ದು, ನಟ ನಟನೆಯಿಂದ ವಿರಾಮ ತೆಗೆದುಕೊಂಡು ರಾಜಕೀಯದಲ್ಲಿ ಆ್ಯಕ್ಟಿವ್ ಆಗಿದ್ದಾರೆ. ಇತ್ತೀಚೆಗಷ್ಟೇ ತಮಿಳುನಾಡಿನ ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಲ್ಲಿ 10 ಮತ್ತು 12 ನೇ ತರಗತಿ ಪರೀಕ್ಷೆಗಳಲ್ಲಿ ಅಗ್ರಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲು ವಿಜಯ್ ಕಾರ್ಯಕ್ರಮ ಆಯೋಜಿಸಿದ್ರು. ವಿಜಯ್ ಅಭಿಮಾನಿ ಸಂಘಟನೆಯಾದ ಮಕ್ಕಳ್ ಇಯಕ್ಕಂ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಜಯ್ ರಾಜಕೀಯ ಪ್ರವೇಶದ ಸುಳಿವು ನೀಡಿದರು.

ಹಣ ಪಡೆದು ಮತದಾನ ಮಾಡದಂತೆ ಪೋಷಕರಿಗೆ ಸಲಹೆ ನೀಡಬೇಕು ಎಂದು ಮಕ್ಕಳಿಗೆ ತಿಳಿಸಿದ ವಿಜಯ್, ವಿದ್ಯಾರ್ಥಿಗಳನ್ನು ಭವಿಷ್ಯದ ಮತದಾರರು ಎಂದು ಬಣ್ಣಿಸಿದರು. ತಮ್ಮ ಸಿನಿಮಾಗಳ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ರಾಜಕೀಯದ ಬಗ್ಗೆ ಹಲವು ಬಾರಿ ಮಾತನಾಡಿರುವ ವಿಜಯ್ ಇದೇ ಮೊದಲ ಬಾರಿಗೆ ಸಾರ್ವಜನಿಕ ಸಮಾರಂಭದಲ್ಲಿ ರಾಜಕೀಯದ ಬಗ್ಗೆ ಮಾತಾಡಿದ್ದರು.
ವಿಜಯ್ ರಾಜಕೀಯಕ್ಕೆ ಬರುತ್ತಿದ್ದಾರೆ ಎಂಬುದಕ್ಕೆ ಇದೇ ಸಾಕ್ಷಿಯಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ವಿಜಯ್ ಮಾತುಗಳು ವೈರಲ್ ಆಗಿದೆ. ತಮಿಳು ನಾಡಿನ ರಾಜಕೀಯದಲ್ಲಿ ವಿಜಯ್ ಶೈನ್ ಆಗಲು ತಯಾರಾಗಿದ್ದಾರೆ.
Cinema Car Violated Signal Actor Vijay Fined by Traffic Police.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm