ಬ್ರೇಕಿಂಗ್ ನ್ಯೂಸ್
12-07-23 02:10 pm Source: News18 Kannada ಸಿನಿಮಾ
ಚೆನ್ನೈನ ಅಕ್ಕರೈ ಜಂಕ್ಷನ್ನಲ್ಲಿ ನಟ ವಿಜಯ್ ಅವರ ಕಾರು ರೆಡ್ ಸಿಗ್ನಲ್ ಜಂಪ್ ಮಾಡಿದೆ. ನಟನ ಕಾರಿ ಡ್ರೈವರ್ ರೂಲ್ಸ್ ಬ್ರೇಕ್ ಮಾಡಿದ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪೊಲೀಸ್ ಇಲಾಖೆ ಗಮನಕ್ಕೂ ಬಂದಿದೆ. ವಿಡಿಯೋ ನೋಡಿದ ಚೆನ್ನೈ ಸಂಚಾರ ಪೊಲೀಸರು ವಿಜಯ್ ಕಾರಿಗೆ 500 ರೂ. ದಂಡ ಹಾಕಿದ್ದಾರೆ. ನಿನ್ನೆ ಚೆನ್ನೈನ ಪನೈಯೂರಿನಲ್ಲಿ ನಡೆದ ಕಾರ್ಯಕಾರಿಣಿ ಸಭೆಗೆ ವಿಜಯ್ ತೆರಳಿದ್ರು. ಕಾರ್ಯಕ್ರಮಕ್ಕೆ ಹೋಗುವಾಗ ನಟ ಟ್ರಾಫಿಕ್ ಸಿಗ್ನಲ್ ಉಲ್ಲಂಘಿಸಿದ್ದಾರೆ.
ಕಳೆದ ವರ್ಷ ವಿಜಯ್ ಅವರ ಅದೇ ವಾಹನಕ್ಕೆ ನಿಯಮ ಉಲ್ಲಂಘಿಸಿ ಕಪ್ಪು ಸ್ಟಿಕ್ಕರ್ ಅಂಟಿಸಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಪೊಲೀಸರು 500 ರೂಪಾಯಿ ದಂಡ ವಿಧಿಸಿದ್ದರು. ಇದೀಗ ಮತ್ತೆ ದಂಡ ವಿಧಿಸಿಲಾಗಿದೆ. ನಟನೆಯ ಜೊತೆಗೆ ರಾಜಕೀಯದತ್ತ ಮನಸ್ಸು ಮಾಡಿರುವ ನಟ ವಿಜಯ್, ತಾಲೂಕು ಮಟ್ಟದಲ್ಲಿ ಪಕ್ಷ ಸಂಘಟನೆಯ ಮಾಡಲು ಮುಂದಾಗಿದ್ದಾರೆ. ತಮ್ಮ ಜನಾಂದೋಲನ ಕಾರ್ಯಕಾರಿಣಿಗಳೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ.


ತಮಿಳು ಚಿತ್ರರಂಗದ ಖ್ಯಾತ ನಟ ವಿಜಯ್ ಸಿನಿಮಾ ನಟನೆಯಿಂದ ವಿರಾಮ ತೆಗೆದುಕೊಳ್ಳುತ್ತಿದ್ದಾರೆ ಎಂದು ತಮಿಳಿ ಮಾಧ್ಯಮಗಳಲ್ಲಿ ವರದಿಯಾಗಿದೆ. ವಿಜಯ್ ರಾಜಕೀಯ ಪ್ರವೇಶದ ಚರ್ಚೆಗಳು ಜೋರಾಗಿದ್ದು, ನಟ ನಟನೆಯಿಂದ ವಿರಾಮ ತೆಗೆದುಕೊಂಡು ರಾಜಕೀಯದಲ್ಲಿ ಆ್ಯಕ್ಟಿವ್ ಆಗಿದ್ದಾರೆ. ಇತ್ತೀಚೆಗಷ್ಟೇ ತಮಿಳುನಾಡಿನ ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಲ್ಲಿ 10 ಮತ್ತು 12 ನೇ ತರಗತಿ ಪರೀಕ್ಷೆಗಳಲ್ಲಿ ಅಗ್ರಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲು ವಿಜಯ್ ಕಾರ್ಯಕ್ರಮ ಆಯೋಜಿಸಿದ್ರು. ವಿಜಯ್ ಅಭಿಮಾನಿ ಸಂಘಟನೆಯಾದ ಮಕ್ಕಳ್ ಇಯಕ್ಕಂ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಜಯ್ ರಾಜಕೀಯ ಪ್ರವೇಶದ ಸುಳಿವು ನೀಡಿದರು.

ಹಣ ಪಡೆದು ಮತದಾನ ಮಾಡದಂತೆ ಪೋಷಕರಿಗೆ ಸಲಹೆ ನೀಡಬೇಕು ಎಂದು ಮಕ್ಕಳಿಗೆ ತಿಳಿಸಿದ ವಿಜಯ್, ವಿದ್ಯಾರ್ಥಿಗಳನ್ನು ಭವಿಷ್ಯದ ಮತದಾರರು ಎಂದು ಬಣ್ಣಿಸಿದರು. ತಮ್ಮ ಸಿನಿಮಾಗಳ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ರಾಜಕೀಯದ ಬಗ್ಗೆ ಹಲವು ಬಾರಿ ಮಾತನಾಡಿರುವ ವಿಜಯ್ ಇದೇ ಮೊದಲ ಬಾರಿಗೆ ಸಾರ್ವಜನಿಕ ಸಮಾರಂಭದಲ್ಲಿ ರಾಜಕೀಯದ ಬಗ್ಗೆ ಮಾತಾಡಿದ್ದರು.
ವಿಜಯ್ ರಾಜಕೀಯಕ್ಕೆ ಬರುತ್ತಿದ್ದಾರೆ ಎಂಬುದಕ್ಕೆ ಇದೇ ಸಾಕ್ಷಿಯಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ವಿಜಯ್ ಮಾತುಗಳು ವೈರಲ್ ಆಗಿದೆ. ತಮಿಳು ನಾಡಿನ ರಾಜಕೀಯದಲ್ಲಿ ವಿಜಯ್ ಶೈನ್ ಆಗಲು ತಯಾರಾಗಿದ್ದಾರೆ.
Cinema Car Violated Signal Actor Vijay Fined by Traffic Police.
13-04-26 09:49 pm
HK News Staffer
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
13-04-26 10:35 pm
HK News Staffer
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm