ಬ್ರೇಕಿಂಗ್ ನ್ಯೂಸ್
17-07-23 02:16 pm Source: Filmy Beat ಸಿನಿಮಾ
2018ರಲ್ಲಿ ತೆರೆಗೆ ಬಂದಿದ್ದ ಅಯೋಗ್ಯ ಚಿತ್ರದ ಮೂಲಕ ಸಿನಿ ರಸಿಕರ ಮನ ಗೆದ್ದಿದ್ದ ರಚಿತಾ ರಾಮ್ ಹಾಗೂ ನೀನಾಸಂ ಸತೀಶ್ ಜೋಡಿ ಎರಡನೇ ಬಾರಿಗೆ ಒಂದಾಗುತ್ತಿರುವ ಈ ಚಿತ್ರಕ್ಕೆ ಮನೋಹರ್ ಕಾಂಪಳ್ಳಿ ಆಕ್ಷನ್ ಕಟ್ ಹೇಳಿದ್ದಾರೆ.
ಅಂದಹಾಗೆ ಮ್ಯಾಟ್ನಿ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯಗೊಂಡಿದ್ದು, ಕಳೆದ ವರ್ಷದ ಪ್ರೇಮಿಗಳ ದಿನಾಚರಣೆಯ ದಿನದಂದು ಚಿತ್ರದ ವಿಶೇಷ ಟೀಸರ್ ಸಹ ಬಿಡುಗಡೆಗೊಂಡಿತ್ತು. ರಚಿತಾ ರಾಮ್ ಹುಟ್ಟುಹಬ್ಬದ ಪ್ರಯುಕ್ತ ಹಾಗೂ ಹಬ್ಬಗಳ ಪ್ರಯುಕ್ತ ಸಹ ವಿಶೇಷ ಪೋಸ್ಟರ್ಗಳನ್ನು ಹಂಚಿಕೊಂಡಿದ್ದ ಮ್ಯಾಟ್ನಿ ಚಿತ್ರತಂಡ ಆದಷ್ಟು ಬೇಗ ಚಿತ್ರವನ್ನು ಬಿಡುಗಡೆ ಮಾಡಲಿದ್ದೇವೆ ಎಂಬ ಸೂಚನೆಯನ್ನು ನೀಡಿತ್ತು.

ಆದರೆ ಅದ್ಯಾಕೋ ಹೋದ ವರ್ಷದ ಯುಗಾದಿ ಹಬ್ಬದ ಬಳಿಕ ಮ್ಯಾಟ್ನಿ ಚಿತ್ರತಂಡ ಸೈಲೆಂಟ್ ಆಗಿಬಿಟ್ಟಿತ್ತು. ಚಿತ್ರದ ಯಾವುದೇ ಅಪ್ಡೇಟ್ ಸಹ ಹೊರಬಿದ್ದಿರಲಿಲ್ಲ. ಅರೇ... ಒಳ್ಳೆಯ ಗುಣಮಟ್ಟದ ಪೋಸ್ಟರ್ಗಳನ್ನು ಹಂಚಿಕೊಳ್ಳುತ್ತಿದ್ದ ಮ್ಯಾಟ್ನಿ ಚಿತ್ರತಂಡ ಹೀಗೆ ಸುಮ್ಮನೆ ಏಕಾಯಿತು, ಚಿತ್ರವೇನಾದ್ರೂ ನಿಂತು ಹೋಯ್ತಾ ಎಂಬ ಬೇಸರದ ಪ್ರಶ್ನೆ ರಚಿತಾ ರಾಮ್ ಹಾಗೂ ಸತೀಶ್ ನೀನಾಸಂ ಅಭಿಮಾನಿ ಬಳಗದಲ್ಲಿ ಮೂಡಿತ್ತು.
ಆದರೆ ಇದೀಗ ಮ್ಯಾಟ್ನಿ ಚಿತ್ರತಂಡ ಅಪ್ಡೇಟ್ ಒಂದನ್ನು ಹಂಚಿಕೊಳ್ಳುವುದರ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಸುದ್ದಿ ಮಾಡಲು ಆರಂಭಿಸಿದೆ. ಹೌದು, ನಿನ್ನೆ ಚಿತ್ರದ ಪೋಸ್ಟರ್ ಹಂಚಿಕೊಂಡಿರುವ ಚಿತ್ರತಂಡ ಇಂದು ( ಜುಲೈ 17 ) ಸಂಜೆ 6.03ಕ್ಕೆ ಚಿತ್ರದ ಮುಂದಿನ ಅಪ್ಡೇಟ್ ಅನ್ನು ಅನಾವರಣ ಮಾಡಲಿದ್ದೇವೆ ಎಂದು ಬರೆದುಕೊಂಡಿದೆ.

ಈ ಮೂಲಕ ಮ್ಯಾಟ್ನಿ ಚಿತ್ರತಂಡ ತನ್ನ ಟ್ರೈಲರ್ ಬಿಡುಗಡೆ ದಿನಾಂಕವನ್ನೇದಾರೂ ಘೋಷಿಸುತ್ತಾ ಅಥವಾ ಚಿತ್ರ ಚಿತ್ರಮಂದಿರಗಳಿಗೆ ಯಾವಾಗ ಲಗ್ಗೆ ಇಡಲಿದೆ ಎಂಬ ಮಾಹಿತಿಯನ್ನೇದರೂ ಹಂಚಿಕೊಳ್ಳುತ್ತಾ ಎಂಬುದನ್ನು ಕಾದು ನೋಡಬೇಕಿದೆ. ಇನ್ನು ಕಳೆದ ವರ್ಷದ ಪ್ರೇಮಿಗಳ ದಿನಾಚರಣೆಯ ದಿನದಂದು ಬಿಡುಗಡೆಯಾಗಿದ್ದ ಟೀಸರ್ನಲ್ಲಿನ ಕಂಟೆಂಟ್ ನೋಡಿದರೆ ಇದೊಂದು ಪಕ್ಕಾ ಪ್ರೇಮ ಕಥೆಯುಳ್ಳ ಚಿತ್ರ ಎಂಬುದು ತಿಳಿದುಬಂದಿತ್ತು.
ನಾಯಕಿಯ ಅಂದ ಹಾಗೂ ಸ್ನೇಹದ ಕುರಿತು ಸಾಲು ಸಾಲು ಮೆಚ್ಚುಗೆಯ ಕವನಗಳನ್ನು ಹೇಳಿದ್ದ ನಾಯಕ ಆಕೆಯ ಕಾಲಿಗೆ ಗೆಜ್ಜೆ ಕಟ್ಟಿ ತನ್ನ ಒಲವನ್ನು ಹೇಳಿಕೊಂಡಿದ್ದ. ಪ್ರೇಮಿಗಳ ದಿನಾಚರಣೆಯ ವಿಶೇಷ ದಿನದಂದು ಬಂದಿದ್ದ ಈ ಟೀಸರ್ ಹಾಗೂ ಅದರಲ್ಲಿನ ಕಂಟೆಂಟ್ ಅಂದಿನ ದಿನಕ್ಕೆ ತಕ್ಕನಾಗಿತ್ತು ಹಾಗೂ ಸಿನಿ ರಸಿಕರ ಮನ ಗೆದ್ದಿತ್ತು. ಅಯೋಗ್ಯ ಚಿತ್ರದ ಮೂಲಕ ಮೋಡಿ ಮಾಡಿದ್ದ ಈ ಜೋಡಿ ಮ್ಯಾಟ್ನಿ ಮೂಲಕ ಮತ್ತೊಮ್ಮೆ ಗೆಲ್ಲಲಿದೆಯಾ ಕಾದ ನೋಡಬೇಕಿದೆ.
Satish ninasam and Rachita ram starrer matinee update to be out today at 6 pm.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm