ಬ್ರೇಕಿಂಗ್ ನ್ಯೂಸ್
17-07-23 02:16 pm Source: Filmy Beat ಸಿನಿಮಾ
2018ರಲ್ಲಿ ತೆರೆಗೆ ಬಂದಿದ್ದ ಅಯೋಗ್ಯ ಚಿತ್ರದ ಮೂಲಕ ಸಿನಿ ರಸಿಕರ ಮನ ಗೆದ್ದಿದ್ದ ರಚಿತಾ ರಾಮ್ ಹಾಗೂ ನೀನಾಸಂ ಸತೀಶ್ ಜೋಡಿ ಎರಡನೇ ಬಾರಿಗೆ ಒಂದಾಗುತ್ತಿರುವ ಈ ಚಿತ್ರಕ್ಕೆ ಮನೋಹರ್ ಕಾಂಪಳ್ಳಿ ಆಕ್ಷನ್ ಕಟ್ ಹೇಳಿದ್ದಾರೆ.
ಅಂದಹಾಗೆ ಮ್ಯಾಟ್ನಿ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯಗೊಂಡಿದ್ದು, ಕಳೆದ ವರ್ಷದ ಪ್ರೇಮಿಗಳ ದಿನಾಚರಣೆಯ ದಿನದಂದು ಚಿತ್ರದ ವಿಶೇಷ ಟೀಸರ್ ಸಹ ಬಿಡುಗಡೆಗೊಂಡಿತ್ತು. ರಚಿತಾ ರಾಮ್ ಹುಟ್ಟುಹಬ್ಬದ ಪ್ರಯುಕ್ತ ಹಾಗೂ ಹಬ್ಬಗಳ ಪ್ರಯುಕ್ತ ಸಹ ವಿಶೇಷ ಪೋಸ್ಟರ್ಗಳನ್ನು ಹಂಚಿಕೊಂಡಿದ್ದ ಮ್ಯಾಟ್ನಿ ಚಿತ್ರತಂಡ ಆದಷ್ಟು ಬೇಗ ಚಿತ್ರವನ್ನು ಬಿಡುಗಡೆ ಮಾಡಲಿದ್ದೇವೆ ಎಂಬ ಸೂಚನೆಯನ್ನು ನೀಡಿತ್ತು.

ಆದರೆ ಅದ್ಯಾಕೋ ಹೋದ ವರ್ಷದ ಯುಗಾದಿ ಹಬ್ಬದ ಬಳಿಕ ಮ್ಯಾಟ್ನಿ ಚಿತ್ರತಂಡ ಸೈಲೆಂಟ್ ಆಗಿಬಿಟ್ಟಿತ್ತು. ಚಿತ್ರದ ಯಾವುದೇ ಅಪ್ಡೇಟ್ ಸಹ ಹೊರಬಿದ್ದಿರಲಿಲ್ಲ. ಅರೇ... ಒಳ್ಳೆಯ ಗುಣಮಟ್ಟದ ಪೋಸ್ಟರ್ಗಳನ್ನು ಹಂಚಿಕೊಳ್ಳುತ್ತಿದ್ದ ಮ್ಯಾಟ್ನಿ ಚಿತ್ರತಂಡ ಹೀಗೆ ಸುಮ್ಮನೆ ಏಕಾಯಿತು, ಚಿತ್ರವೇನಾದ್ರೂ ನಿಂತು ಹೋಯ್ತಾ ಎಂಬ ಬೇಸರದ ಪ್ರಶ್ನೆ ರಚಿತಾ ರಾಮ್ ಹಾಗೂ ಸತೀಶ್ ನೀನಾಸಂ ಅಭಿಮಾನಿ ಬಳಗದಲ್ಲಿ ಮೂಡಿತ್ತು.
ಆದರೆ ಇದೀಗ ಮ್ಯಾಟ್ನಿ ಚಿತ್ರತಂಡ ಅಪ್ಡೇಟ್ ಒಂದನ್ನು ಹಂಚಿಕೊಳ್ಳುವುದರ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಸುದ್ದಿ ಮಾಡಲು ಆರಂಭಿಸಿದೆ. ಹೌದು, ನಿನ್ನೆ ಚಿತ್ರದ ಪೋಸ್ಟರ್ ಹಂಚಿಕೊಂಡಿರುವ ಚಿತ್ರತಂಡ ಇಂದು ( ಜುಲೈ 17 ) ಸಂಜೆ 6.03ಕ್ಕೆ ಚಿತ್ರದ ಮುಂದಿನ ಅಪ್ಡೇಟ್ ಅನ್ನು ಅನಾವರಣ ಮಾಡಲಿದ್ದೇವೆ ಎಂದು ಬರೆದುಕೊಂಡಿದೆ.

ಈ ಮೂಲಕ ಮ್ಯಾಟ್ನಿ ಚಿತ್ರತಂಡ ತನ್ನ ಟ್ರೈಲರ್ ಬಿಡುಗಡೆ ದಿನಾಂಕವನ್ನೇದಾರೂ ಘೋಷಿಸುತ್ತಾ ಅಥವಾ ಚಿತ್ರ ಚಿತ್ರಮಂದಿರಗಳಿಗೆ ಯಾವಾಗ ಲಗ್ಗೆ ಇಡಲಿದೆ ಎಂಬ ಮಾಹಿತಿಯನ್ನೇದರೂ ಹಂಚಿಕೊಳ್ಳುತ್ತಾ ಎಂಬುದನ್ನು ಕಾದು ನೋಡಬೇಕಿದೆ. ಇನ್ನು ಕಳೆದ ವರ್ಷದ ಪ್ರೇಮಿಗಳ ದಿನಾಚರಣೆಯ ದಿನದಂದು ಬಿಡುಗಡೆಯಾಗಿದ್ದ ಟೀಸರ್ನಲ್ಲಿನ ಕಂಟೆಂಟ್ ನೋಡಿದರೆ ಇದೊಂದು ಪಕ್ಕಾ ಪ್ರೇಮ ಕಥೆಯುಳ್ಳ ಚಿತ್ರ ಎಂಬುದು ತಿಳಿದುಬಂದಿತ್ತು.
ನಾಯಕಿಯ ಅಂದ ಹಾಗೂ ಸ್ನೇಹದ ಕುರಿತು ಸಾಲು ಸಾಲು ಮೆಚ್ಚುಗೆಯ ಕವನಗಳನ್ನು ಹೇಳಿದ್ದ ನಾಯಕ ಆಕೆಯ ಕಾಲಿಗೆ ಗೆಜ್ಜೆ ಕಟ್ಟಿ ತನ್ನ ಒಲವನ್ನು ಹೇಳಿಕೊಂಡಿದ್ದ. ಪ್ರೇಮಿಗಳ ದಿನಾಚರಣೆಯ ವಿಶೇಷ ದಿನದಂದು ಬಂದಿದ್ದ ಈ ಟೀಸರ್ ಹಾಗೂ ಅದರಲ್ಲಿನ ಕಂಟೆಂಟ್ ಅಂದಿನ ದಿನಕ್ಕೆ ತಕ್ಕನಾಗಿತ್ತು ಹಾಗೂ ಸಿನಿ ರಸಿಕರ ಮನ ಗೆದ್ದಿತ್ತು. ಅಯೋಗ್ಯ ಚಿತ್ರದ ಮೂಲಕ ಮೋಡಿ ಮಾಡಿದ್ದ ಈ ಜೋಡಿ ಮ್ಯಾಟ್ನಿ ಮೂಲಕ ಮತ್ತೊಮ್ಮೆ ಗೆಲ್ಲಲಿದೆಯಾ ಕಾದ ನೋಡಬೇಕಿದೆ.
Satish ninasam and Rachita ram starrer matinee update to be out today at 6 pm.
15-04-26 07:05 pm
HK News Staffer
ಸಿಎಂ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಬೆನ್ನಲ್ಲೇ ಪರ...
15-04-26 03:15 pm
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
15-04-26 11:40 pm
HK News Desk
ಬಾಲಕನ ಜೀವ ತೆಗೆದ ಕ್ರಿಕೆಟ್ ಆಟ ; ಚೆಂಡು ಹೆಕ್ಕಲು ಹ...
15-04-26 05:29 pm
ಚಿಕ್ಕೋಡಿಯಲ್ಲಿ ಮಾನಗೇಡಿ ಹತ್ಯೆ; ಪತಿಯನ್ನು ಬಿಟ್ಟು...
15-04-26 05:03 pm
ಕೌಟುಂಬಿಕ ಕಲಹ ; 14 ವರ್ಷದ ಮಗಳನ್ನು ಉಸಿರುಗಟ್ಟಿಸಿ...
14-04-26 11:16 pm
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am