ಬ್ರೇಕಿಂಗ್ ನ್ಯೂಸ್
21-07-23 01:21 pm Source: Vijayakarnataka ಸಿನಿಮಾ
ಇಂದು ( ಜುಲೈ 21 ) ಶುಕ್ರವಾರ ವಿವಿಧ ಭಾಷೆಗಳ ಹಲವಾರು ಚಿತ್ರಗಳು ತೆರೆಗೆ ಬರುತ್ತಿದ್ದು, ಕನ್ನಡದ ಪರ ಬಹು ನಿರೀಕ್ಷಿತ ಸಿನಿಮಾ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ರಿಲೀಸ್ ಆಗಿದೆ. ಇಂದು ಬೆಳಗ್ಗೆ 7 ಗಂಟೆಗೆ ಬೆಂಗಳೂರಿನ ವೀರೇಶ್ ಸಿನಿಮಾಸ್ ಚಿತ್ರಮಂದಿರದಲ್ಲಿ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರದ ಮೊದಲ ಪ್ರದರ್ಶನ ಆರಂಭಗೊಂಡಿದೆ.
ಇನ್ನು ಚಿತ್ರ ಸೆಟ್ಟೇರಿದಾಗಿನಿಂದಲೂ ಭಿನ್ನ ವಿಭಿನ್ನ ಪ್ರಚಾರದ ಉಪಾಯಗಳಿಂದಾಗಿ ಸದ್ದು ಮಾಡುತ್ತಾ ಬಂದಿರುವ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರತಂಡ ಚಂದನವನದ ಹಲವಾರು ಸ್ಟಾರ್ಗಳನ್ನು ಪ್ರಚಾರ ಕಾರ್ಯಗಳಿಗೆ ಬಳಸಿಕೊಂಡು ಸಿನಿ ರಸಿಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿತ್ತು.
ಹೀಗೆ ದೊಡ್ಡ ದೊಡ್ಡ ಕಲಾವಿದರನ್ನು ತಮ್ಮ ಪ್ರೋಮೊಗಳಿಗಾಗಿ ಬಳಸಿಕೊಂಡು ಯಶಸ್ವಿಯಾಗಿದ್ದ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರವನ್ನು ಫಸ್ಟ್ ಡೇ ಫಸ್ಟ್ ಶೋ ವೀಕ್ಷಿಸಲು ಸಿನಿ ರಸಿಕರು ಕಾತರರಾಗಿ ಕಾಯುತ್ತಿದ್ರು. ಆದರೆ ನಟಿ ರಮ್ಯಾ ಚಿತ್ರ ಬಿಡುಗಡೆಗೆ ಇನ್ನು ಎರಡು ದಿನಗಳು ಮಾತ್ರ ಬಾಕಿ ಇದೆ ಎನ್ನುವಾಗ ಚಿತ್ರತಂಡದ ವಿರುದ್ಧ ಲೀಗಲ್ ನೋಟಿಸ್ ಕಳುಹಿಸಿದ್ದರು.

ಚಿತ್ರತಂಡ ತನ್ನ ವಿಡಿಯೊ ಹಾಗೂ ಫೋಟೊಗಳನ್ನು ತನ್ನ ಅನುಮತಿ ಇಲ್ಲದೇ ಬಳಸಿಕೊಂಡಿದೆ ಎಂದು ಆರೋಪಿಸಿದ ರಮ್ಯಾ ಒಂದು ಕೋಟಿ ಪರಿಹಾರಕ್ಕೆ ಒತ್ತಾಯಿಸಿದ್ದರು. ರಮ್ಯಾ ಅವರ ಈ ನಡೆ ಚಿತ್ರತಂಡಕ್ಕೆ ಹಿನ್ನಡೆಯನ್ನು ಉಂಟುಮಾಡಿತ್ತು. ಚಿತ್ರ ಬಿಡುಗಡೆಯಾಗುತ್ತಾ ಎಂಬ ಅನುಮಾವನ್ನು ಹುಟ್ಟುಹಾಕಿತ್ತು. ಆದರೆ ನಿನ್ನೆ ಕೋರ್ಟ್ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರದ ಬಿಡುಗಡೆಗೆ ಯಾವುದೇ ತಡೆ ಇಲ್ಲ ಎಂದು ತೀರ್ಪನ್ನು ನೀಡಿದ್ದು ರಮ್ಯಾ ದೃಶ್ಯಗಳಿಗೂ ಸಹ ಕತ್ತರಿ ಹಾಕುವ ಅಗತ್ಯವಿಲ್ಲ ಎಂದಿದೆ.

ಹೀಗೆ ರಮ್ಯಾ ವಿರುದ್ಧ ಗೆದ್ದು ಬಿಡುಗಡೆಗೆ ಅನುಮತಿಯನ್ನು ಪಡೆದುಕೊಂಡ ಬಳಿಕ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರದ ನಿರ್ದೇಶಕ ಹಾಗೂ ನಿರ್ಮಾಪಕರು ಸೇರಿದಂತೆ ಇಡೀ ತಂಡ ಪತ್ರಿಕಾಗೋಷ್ಠಿ ನಡೆಸಿತು. ಈ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚಿತ್ರದ ನಿರ್ದೇಶಕ ನಿತಿನ್ ಕೃಷ್ಣಮೂರ್ತಿ ನಾಳೆ ಚಿತ್ರ ರಿಲೀಸ್ ಆಗ್ತಿದೆ ಎಂಬ ಖುಷಿಯನ್ನು ಹಂಚಿಕೊಂಡು ನಾನು ಏನೇ ಮಾಡಿದ್ರೂ ಮೊದಲು ಅಪ್ಪು ಸರ್ ಅವರನ್ನ ನೆನಪಿಸಿಕೊಂಡೇ ಮಾಡೋದು, ಅವರು ಇದನ್ನೆಲ್ಲಾ ನೋಡುತ್ತಿದ್ದಾರೆ ಎಂಬ ನಂಬಿಕೆ ಇದೆ ಎಂದರು. ಬಳಿಕ ಚಿತ್ರವನ್ನು ಬಿಡುಗಡೆ ಮಾಡಲು ಅನುಮತಿ ಸಿಕ್ಕಿದೆ, ಸೆನ್ಸಾರ್ ಮಂಡಳಿಯಲ್ಲಿ ಸೆನ್ಸಾರ್ ಆಗಿದ್ದ ಚಿತ್ರವನ್ನೇ ಪ್ರದರ್ಶಿಸಲಿದ್ದೇವೆ, ಯಾವುದೇ ದೃಶ್ಯಕ್ಕೂ ಕತ್ತರಿ ಹಾಕುವುದಿಲ್ಲ ಎಂದರು. ಇನ್ನು ರಮ್ಯಾ ಅವರನ್ನು ಲೇಡಿ ಸೂಪರ್ಸ್ಟಾರ್ ಎಂದು ಕರೆದ ನಿತಿನ್ ಕೃಷ್ಣಮೂರ್ತಿ ಅವರ ಮೇಲೆ ಗೌರವ ಇದೆ, ಆದರೆ ಸಾವಿರ ಕಲಾವಿದರು ಸೇರಿ ಎರಡೂವರೆ ವರ್ಷಗಳ ಕಾಲ ಕಷ್ಟಪಟ್ಟು ಮಾಡಿರುವ ಚಿತ್ರದ ಮೇಲೆ ಈ ಥರ ಮಾಡಿದ್ದು ಬೇಸರ ತಂದಿದೆ ಎಂದರು.
ಇನ್ನು ಕೆಲವರು ಈ ವಿವಾದವನ್ನು ಚಿತ್ರಕ್ಕೆ ಪ್ರಚಾರ ಸಿಗಲಿ ಎಂದು ಮಾಡಿದ ಗಿಮಿಕ್ ಎಂದುಕೊಂಡಿದ್ದಾರೆ, ಇದು ಗಿಮಿಕ್ ಅಲ್ಲ, ರಮ್ಯಾ ಅವರು ನಿಜವಾಗಿಯೂ ದೂರನ್ನು ಕೊಟ್ಟಿದ್ರು ಎಂಬುದನ್ನೂ ಸಹ ಸ್ಪಷ್ಟಪಡಿಸಿದರು. ಅಲ್ಲದೇ ನೋಟಿಸ್ ಎರಡು ದಿನಗಳ ಹಿಂದೆ ಮೇಲ್ ಮೂಲಕ ಬಂದಿತ್ತು ಹಾಗೂ ಬಳಿಕ ಮನೆಗೆ ಪೋಸ್ಟ್ ಮೂಲಕ ಬಂದಿತ್ತು ಎಂದು ನಿತಿನ್ ತಿಳಿಸಿದರು.
Hostel Hudugaru Bekagiddare director Nithin Krishnamurthy reacts about Ramya case.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
17-08-26 05:02 pm
HK News Staffer
ಬಂಟ್ವಾಳ ಪೊಲೀಸರ ಭರ್ಜರಿ ಬೇಟೆ; ಬೆಂಗಳೂರಿನಿಂದ ಕಾರಿ...
17-08-26 10:54 am
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm