ಬ್ರೇಕಿಂಗ್ ನ್ಯೂಸ್
21-07-23 01:21 pm Source: Vijayakarnataka ಸಿನಿಮಾ
ಇಂದು ( ಜುಲೈ 21 ) ಶುಕ್ರವಾರ ವಿವಿಧ ಭಾಷೆಗಳ ಹಲವಾರು ಚಿತ್ರಗಳು ತೆರೆಗೆ ಬರುತ್ತಿದ್ದು, ಕನ್ನಡದ ಪರ ಬಹು ನಿರೀಕ್ಷಿತ ಸಿನಿಮಾ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ರಿಲೀಸ್ ಆಗಿದೆ. ಇಂದು ಬೆಳಗ್ಗೆ 7 ಗಂಟೆಗೆ ಬೆಂಗಳೂರಿನ ವೀರೇಶ್ ಸಿನಿಮಾಸ್ ಚಿತ್ರಮಂದಿರದಲ್ಲಿ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರದ ಮೊದಲ ಪ್ರದರ್ಶನ ಆರಂಭಗೊಂಡಿದೆ.
ಇನ್ನು ಚಿತ್ರ ಸೆಟ್ಟೇರಿದಾಗಿನಿಂದಲೂ ಭಿನ್ನ ವಿಭಿನ್ನ ಪ್ರಚಾರದ ಉಪಾಯಗಳಿಂದಾಗಿ ಸದ್ದು ಮಾಡುತ್ತಾ ಬಂದಿರುವ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರತಂಡ ಚಂದನವನದ ಹಲವಾರು ಸ್ಟಾರ್ಗಳನ್ನು ಪ್ರಚಾರ ಕಾರ್ಯಗಳಿಗೆ ಬಳಸಿಕೊಂಡು ಸಿನಿ ರಸಿಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿತ್ತು.
ಹೀಗೆ ದೊಡ್ಡ ದೊಡ್ಡ ಕಲಾವಿದರನ್ನು ತಮ್ಮ ಪ್ರೋಮೊಗಳಿಗಾಗಿ ಬಳಸಿಕೊಂಡು ಯಶಸ್ವಿಯಾಗಿದ್ದ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರವನ್ನು ಫಸ್ಟ್ ಡೇ ಫಸ್ಟ್ ಶೋ ವೀಕ್ಷಿಸಲು ಸಿನಿ ರಸಿಕರು ಕಾತರರಾಗಿ ಕಾಯುತ್ತಿದ್ರು. ಆದರೆ ನಟಿ ರಮ್ಯಾ ಚಿತ್ರ ಬಿಡುಗಡೆಗೆ ಇನ್ನು ಎರಡು ದಿನಗಳು ಮಾತ್ರ ಬಾಕಿ ಇದೆ ಎನ್ನುವಾಗ ಚಿತ್ರತಂಡದ ವಿರುದ್ಧ ಲೀಗಲ್ ನೋಟಿಸ್ ಕಳುಹಿಸಿದ್ದರು.

ಚಿತ್ರತಂಡ ತನ್ನ ವಿಡಿಯೊ ಹಾಗೂ ಫೋಟೊಗಳನ್ನು ತನ್ನ ಅನುಮತಿ ಇಲ್ಲದೇ ಬಳಸಿಕೊಂಡಿದೆ ಎಂದು ಆರೋಪಿಸಿದ ರಮ್ಯಾ ಒಂದು ಕೋಟಿ ಪರಿಹಾರಕ್ಕೆ ಒತ್ತಾಯಿಸಿದ್ದರು. ರಮ್ಯಾ ಅವರ ಈ ನಡೆ ಚಿತ್ರತಂಡಕ್ಕೆ ಹಿನ್ನಡೆಯನ್ನು ಉಂಟುಮಾಡಿತ್ತು. ಚಿತ್ರ ಬಿಡುಗಡೆಯಾಗುತ್ತಾ ಎಂಬ ಅನುಮಾವನ್ನು ಹುಟ್ಟುಹಾಕಿತ್ತು. ಆದರೆ ನಿನ್ನೆ ಕೋರ್ಟ್ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರದ ಬಿಡುಗಡೆಗೆ ಯಾವುದೇ ತಡೆ ಇಲ್ಲ ಎಂದು ತೀರ್ಪನ್ನು ನೀಡಿದ್ದು ರಮ್ಯಾ ದೃಶ್ಯಗಳಿಗೂ ಸಹ ಕತ್ತರಿ ಹಾಕುವ ಅಗತ್ಯವಿಲ್ಲ ಎಂದಿದೆ.

ಹೀಗೆ ರಮ್ಯಾ ವಿರುದ್ಧ ಗೆದ್ದು ಬಿಡುಗಡೆಗೆ ಅನುಮತಿಯನ್ನು ಪಡೆದುಕೊಂಡ ಬಳಿಕ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರದ ನಿರ್ದೇಶಕ ಹಾಗೂ ನಿರ್ಮಾಪಕರು ಸೇರಿದಂತೆ ಇಡೀ ತಂಡ ಪತ್ರಿಕಾಗೋಷ್ಠಿ ನಡೆಸಿತು. ಈ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚಿತ್ರದ ನಿರ್ದೇಶಕ ನಿತಿನ್ ಕೃಷ್ಣಮೂರ್ತಿ ನಾಳೆ ಚಿತ್ರ ರಿಲೀಸ್ ಆಗ್ತಿದೆ ಎಂಬ ಖುಷಿಯನ್ನು ಹಂಚಿಕೊಂಡು ನಾನು ಏನೇ ಮಾಡಿದ್ರೂ ಮೊದಲು ಅಪ್ಪು ಸರ್ ಅವರನ್ನ ನೆನಪಿಸಿಕೊಂಡೇ ಮಾಡೋದು, ಅವರು ಇದನ್ನೆಲ್ಲಾ ನೋಡುತ್ತಿದ್ದಾರೆ ಎಂಬ ನಂಬಿಕೆ ಇದೆ ಎಂದರು. ಬಳಿಕ ಚಿತ್ರವನ್ನು ಬಿಡುಗಡೆ ಮಾಡಲು ಅನುಮತಿ ಸಿಕ್ಕಿದೆ, ಸೆನ್ಸಾರ್ ಮಂಡಳಿಯಲ್ಲಿ ಸೆನ್ಸಾರ್ ಆಗಿದ್ದ ಚಿತ್ರವನ್ನೇ ಪ್ರದರ್ಶಿಸಲಿದ್ದೇವೆ, ಯಾವುದೇ ದೃಶ್ಯಕ್ಕೂ ಕತ್ತರಿ ಹಾಕುವುದಿಲ್ಲ ಎಂದರು. ಇನ್ನು ರಮ್ಯಾ ಅವರನ್ನು ಲೇಡಿ ಸೂಪರ್ಸ್ಟಾರ್ ಎಂದು ಕರೆದ ನಿತಿನ್ ಕೃಷ್ಣಮೂರ್ತಿ ಅವರ ಮೇಲೆ ಗೌರವ ಇದೆ, ಆದರೆ ಸಾವಿರ ಕಲಾವಿದರು ಸೇರಿ ಎರಡೂವರೆ ವರ್ಷಗಳ ಕಾಲ ಕಷ್ಟಪಟ್ಟು ಮಾಡಿರುವ ಚಿತ್ರದ ಮೇಲೆ ಈ ಥರ ಮಾಡಿದ್ದು ಬೇಸರ ತಂದಿದೆ ಎಂದರು.
ಇನ್ನು ಕೆಲವರು ಈ ವಿವಾದವನ್ನು ಚಿತ್ರಕ್ಕೆ ಪ್ರಚಾರ ಸಿಗಲಿ ಎಂದು ಮಾಡಿದ ಗಿಮಿಕ್ ಎಂದುಕೊಂಡಿದ್ದಾರೆ, ಇದು ಗಿಮಿಕ್ ಅಲ್ಲ, ರಮ್ಯಾ ಅವರು ನಿಜವಾಗಿಯೂ ದೂರನ್ನು ಕೊಟ್ಟಿದ್ರು ಎಂಬುದನ್ನೂ ಸಹ ಸ್ಪಷ್ಟಪಡಿಸಿದರು. ಅಲ್ಲದೇ ನೋಟಿಸ್ ಎರಡು ದಿನಗಳ ಹಿಂದೆ ಮೇಲ್ ಮೂಲಕ ಬಂದಿತ್ತು ಹಾಗೂ ಬಳಿಕ ಮನೆಗೆ ಪೋಸ್ಟ್ ಮೂಲಕ ಬಂದಿತ್ತು ಎಂದು ನಿತಿನ್ ತಿಳಿಸಿದರು.
Hostel Hudugaru Bekagiddare director Nithin Krishnamurthy reacts about Ramya case.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm