ಬ್ರೇಕಿಂಗ್ ನ್ಯೂಸ್
09-08-23 02:23 pm Source: News18 Kannada ಸಿನಿಮಾ
ಸ್ಯಾಂಡಲ್ವುಡ್ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಂತಿಮ ದರ್ಶನ ನಡೆಯುತ್ತಿದ್ದು ಸಂಜೆ ನಾಲ್ಕು ಗಂಟೆಯ ವೇಳೆಗೆ ಅಂತಿಮ ಸಂಸ್ಕಾರ ನಡೆಯಲಿದೆ. ಈ ಮಧ್ಯೆ ಸ್ಪಂದನಾ ಅವರ ಹಳೆಯ ಕೆಲವು ಫೋಟೋಗಳು ವೈರಲ್ ಆಗಿವೆ. ಸ್ಪಂದನಾ ತಮ್ಮ ಶೈಕ್ಷಣಿಕ ಜೀವನದ ಸಮಯದಲ್ಲಿ ಗೆಳತಿಯರೊಂದಿಗೆ ಹೋದ ಪ್ರವಾಸದ ಫೋಟೋ ಕೂಡಾ ವೈರಲ್ ಆಗಿದೆ. ಇದರಲ್ಲಿ ನದಿಯೊಂದರ ತಡದಲ್ಲಿ ಗೆಳತಿಯರೊಂದಿಗೆ ಸ್ಪಂದನಾ ನಿಂತಿರುವುದುನ್ನು ಕಾಣಬಹುದು.
ಆಕಾಶ ನೀಲಿ ಬಣ್ಣ ಹಾಗೂ ನೇರಳೆ ಬಣ್ಣದ ಕಾಂಬಿನೇಷನ್ನ ಸೀರೆ ಉಟ್ಟು ಫೋಟೋಗೆ ಪೋಸ್ ಕೊಟ್ಟ ಸ್ಪಂದನಾ ಅವರ ಹಳೆಯ ಫೋಟೋ ವೈರಲ್ ಆಗಿದೆ. ಇದರಲ್ಲಿ ಸ್ಪಂದನಾ ಸಿಂಪಲ್ ಆಗಿ ಸುಂದರವಾಗಿ ಕಾಣಿಸಿದ್ದಾರೆ. ಸ್ಪಂದನಾ ವಿಜಯ್ ರಾಘವೇಂದ್ರ ಅವರ ಗೆಳತಿಯರೂ ಅವರ ಅಂತಿಯ ದರ್ಶನ ಪಡೆದರು. ಸ್ಯಾಂಡಲ್ವುಡ್ ಗಣ್ಯರು ಅಂತಿಮ ದರ್ಶನ ಮಾಡಿ ನಟ ರಾಘು ಅವರಿಗೆ ಸಾಂತ್ವನ ಹೇಳಿದ್ದಾರೆ.


ಬ್ಯಾಂಕಾಕ್ನಲ್ಲಿ ಪ್ರವಾಸದಲ್ಲಿದ್ದ ಸ್ಪಂದನಾ ಅಲ್ಲಿಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರು ಗೆಳೆತಿಯರೊಂದಿಗೆ ಪ್ರವಾಸ ಹೋಗಿದ್ದರು. ಇಂದು ಸಂಜೆ ಅವರ ಅಂತ್ಯಸಂಸ್ಕಾರ ನೆರವೇರಲಿದೆ. ಬ್ಯಾಂಕಾಕ್ನಿಂದ ಥಾಯ್ ವಿಮಾನದಲ್ಲಿ ಬಂದ ಸ್ಪಂದನಾ ಪಾರ್ಥಿವ ಶರೀರವನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕುಟುಂಬಸ್ಥರು ಪಡೆದುಕೊಂಡಿದ್ದರು. ಬಳಿಕ ಮಲ್ಲೇಶ್ವರಂನ ಸ್ಪಂದನಾ ಅವರ ತವರು ಮನೆಗೆ ತೆಗೆದಕೊಂಡು ಹೋಗಲಾಗಿತ್ತು. ನಿನ್ನೆ ರಾತ್ರಿಯಿಂದಲೇ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದ್ದು, ಇಂದು ಮಧ್ಯಾಹ್ನದವರೆಗೂ ಅಂತಿಮ ದರ್ಶನ ನೀಡಲು ನಿರ್ಧರಿಸಲಾಗಿದೆ.



ಸ್ಪಂದನಾ ಅವರ ಅಂತಿಮ ದರ್ಶನ ಪಡೆಯಲು ಚಿತ್ರರಂಗದ ಮಂದಿ ಭೇಟಿ ಕೊಡುತ್ತಿದ್ದಾರೆ. ನಟ ಸೃಜನ್ ಲೋಕೆಶ್ ಕುಟುಂಬ, ನಟಿ ಅನುಶ್ರೀ, ನಿರ್ದೇಶಕ ಆಕಾಶ್ ಶ್ರೀವತ್ಸ, ಚಿತ್ರನಟ ನಿರ್ದೇಶಕ, ವಿಕ್ರಂ ಸೂರಿ, ನಟಿ ಸುಧಾರಣಿ, ಹಿರಿಯ ನಟ ಶ್ರೀನಾಥ್, ಹಿರಿಯ ನಟಿ ಗಿರಿಜಾ ಲೋಕೇಶ್ ಸೇರಿದಂತೆ ಚಿತ್ರರಂಗದ ಹಲವಾರು ಗಣ್ಯರು ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅಂತಿಮ ದರ್ಶನ ಮಾಡಿ ನಟನಿಗೆ ಧೈರ್ಯ ತುಂಬಿದರು
Spandana Raghavendra Old Photos Viral.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm