ಬ್ರೇಕಿಂಗ್ ನ್ಯೂಸ್
24-08-23 02:59 pm Source: News18 Kannada ಸಿನಿಮಾ
ಒಂದು ಮೊಟ್ಟೆ ಕಥೆ ಖ್ಯಾತಿಯ ನಟ-ನಿರ್ದೇಶಕ ರಾಜ್ ಬಿ ಶೆಟ್ಟಿ ಅಭಿನಯದ ಟೋಬಿ ಸಿನಿಮಾ ರಾಜ್ಯದ 175 ಸಿಂಗಲ್ ಥಿಯೇಟರ್ನಲ್ಲಿ ರಿಲೀಸ್ ಆಗುತ್ತಿದೆ. ಮಲ್ಟಿಪ್ಲೆಕ್ಸ್ ನಲ್ಲೂ ಟೋಬಿಯನ್ನ ನೋಡಬಹುದಾಗಿದೆ. ಬಹುಕೋಟಿ ಬಜೆಟ್ನ ಟೋಬಿ ಸಿನಿಮಾ ರಾಜ್ಯದ 60 ಮಲ್ಟಿಪ್ಲೆಕ್ಸ್ ಥಿಯೇಟರ್ನಲ್ಲೂ ರಿಲೀಸ್ ಆಗುತ್ತಿದೆ. ಸಿಂಗಲ್ ಥಿಯೇಟರ್ ಮತ್ತು ಮಲ್ಟಿಪ್ಲೆಕ್ಸ್ ಥಿಯೇಟರ್ ಹೀಗೆ ಎರಡೂ ಕಡೆಗೆ ಟೋಬಿ ಚಿತ್ರ ತೆರೆಗೆ ಬರ್ತಿದೆ.
ಆಲ್ ಓವರ್ ಇಂಡಿಯಾದಲ್ಲೂ ಟೋಬಿ ರಿಲೀಸ್ ಆಗುತ್ತಿದೆ. ರಾಜ್ಯದ ಲೆಕ್ಟ ಬಿಟ್ಟು, ದೇಶದ 75 ಮಲ್ಟಿಪ್ಲೆಕ್ಸ್ ಥಿಯೇಟರ್ನಲ್ಲಿ ಕನ್ನಡದ ಟೋಬಿ ಸಿನಿಮಾ ರಿಲೀಸ್ ಆಗುತ್ತಿದೆ. ಕಾಂತಾರ ಸಿನಿಮಾ ಇದೇ ರೀತಿನೇ ಎಲ್ಲೆಡೆ ಕನ್ನಡದಲ್ಲಿಯೇ ರಿಲೀಸ್ ಆಗಿತ್ತು. ಒಳ್ಳೆ ರೆಸ್ಪಾನ್ಸ್ ಪಡೆದ ಬಳಿಕವೇ ಈ ಚಿತ್ರ ಎಲ್ಲ ಭಾಷೆಯಲ್ಲಿ ರಿಲೀಸ್ ಆಯಿತು. ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಯಿತು. ನಿರೀಕ್ಷೆ ಮಾಡದೇ ಇರೋ ಮಟ್ಟಕ್ಕೆ ಸಕ್ಸಸ್ ಪಡೆದು ದಾಖಲೆ ಮಾಡಿತ್ತು.
ರಾಜ್ ಬಿ ಶೆಟ್ಟಿ ಅಭಿನಯದ ಟೋಬಿ ಸಿನಿಮಾ ನಿರೀಕ್ಷೆಯ ಸಿನಿಮಾ ಆಗಿದೆ. ಸಿನಿಮಾ ತಂಡದ ಪ್ರಚಾರವೂ ಬಲು ಜೋರಾಗಿಯೇ ಇದೆ. 10 ಕೋಟಿ ಬಜೆಟ್ನಲ್ಲಿಯೇ ಇಡೀ ಸಿನಿಮಾ ನಿರ್ಮಾಣಗೊಂಡಿದೆ. ಕಂಟೆಂಟ್ ಬೇಸ್ ಕಮರ್ಷಿಯಲ್ ಸಿನಿಮಾ ಇದು ಅನ್ನೋದು ತುಂಬಾನೆ ವಿಶೇಷ ಅಂತಲೇ ಹೇಳಬಹುದು. ಟೋಬಿ ಸಿನಿಮಾದಲ್ಲಿ ರಾಜ್ ಬಿ ಶೆಟ್ರಿಗೆ ಇಬ್ಬರು ನಾಯಕಿಯರಿದ್ದಾರೆ. ಚೈತ್ರಾ ಆಚಾರ್ ಮತ್ತು ಸಂಯುಕ್ತಾ ಹೊರನಾಡು ಇಲ್ಲಿ ಜೊತೆಯಾಗಿದ್ದಾರೆ.
ಕನ್ನಡದ ಟೋಬಿ ಚಿತ್ರವನ್ನ ಬಾಸಿಲ್ ಡೈರೆಕ್ಷನ್ ಮಾಡಿದ್ದಾರೆ. ಮಿಧುನ್ ಮುಕುಂದನ್ ಸಂಗೀತ ಕೊಟ್ಟಿದ್ದಾರೆ. ಪ್ರವೀಣ್ ಶ್ರೀಯಾನ್ ಕ್ಯಾಮರಾವರ್ಕ್ ಈ ಚಿತ್ರಕ್ಕಿದೆ. ಬಹು ನಿರೀಕ್ಷಿತ ಈ ಚಿತ್ರದ ಫಸ್ಟ್ ಡೇ ರಿಪೋರ್ಟ್ ಮೇಲೆ ಈಗ ಎಲ್ಲ ಕಣ್ಣು ನೆಟ್ಟಿದೆ.
Sandalwood Actor Raj B Shetty Acted Toby Movie Release Theatrical Updates.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 03:19 pm
Mangalore Correspondent
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
17-09-25 02:46 pm
Udupi Correspondent
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm