ಬ್ರೇಕಿಂಗ್ ನ್ಯೂಸ್
31-08-23 02:33 pm Source: News18 Kannada ಸಿನಿಮಾ
ಶಾರುಖ್ ಖಾನ್ ಜವಾನ್ ಸಿನಿಮಾ ಟ್ರೈಲರ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕಿಂಗ್ ಖಾನ್ ಒಂದೊಂದು ಡೈಲಾಗ್ ಕೂಡ ಟ್ರೆಂಡ್ ಕ್ರಿಯೇಟ್ ಮಾಡ್ತಿದೆ. ಈ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಕರುನಾಡಿನ ಶಾರುಖ್ ಖಾನ್ ಅಭಿಮಾನಿಗಳು ಅಸಮಾಧಾನ ಹೊರಹಾಕಿದ್ದಾರೆ. ಹಿಂದಿ, ತಮಿಳು, ತೆಲುಗಿನಲ್ಲಿ ಟ್ರೈಲರ್ ರಿಲೀಸ್ ಮಾಡಲಾಗಿದೆ ಆದ್ರೆ ಕನ್ನಡದಲ್ಲಿ ಜವಾನ್ ಸಿನಿಮಾ ಟ್ರೈಲರ್ ರಿಲೀಸ್ ಮಾಡಿಲ್ಲ ಎಂದು ಪ್ರಶ್ನೆ ಕೇಳ್ತಿದ್ದಾರೆ.
ಅನೇಕ ಕನ್ನಡಿಗರು ಕೂಡ ಶಾರುಖ್ ಖಾನ್ ಅಭಿಮಾನಿಗಳಾಗಿದ್ದಾರೆ. ಕರ್ನಾಟಕದಲ್ಲಿ ಶಾರುಖ್ ಸಿನಿಮಾ ಕೂಡ ಭರ್ಜರಿಯಾಗಿಯೇ ಕಲೆಕ್ಷನ್ ಮಾಡುತ್ತದೆ. ಆದ್ರೂ ಚಿತ್ರತಂಡ ಜವಾನ್ ಸಿನಿಮಾ ಟ್ರೈಲರ್ ಅನ್ನು ಕನ್ನಡದಲ್ಲಿ ಯಾಕೆ ರಿಲೀಸ್ ಮಾಡಲಿಲ್ಲ ಎಂದು ಅನೇಕರು ಅಸಮಾಧಾನ ಹೊರಹಾಕಿದ್ದಾರೆ.
ಚಾಹಿಯೇ ತೋ ಆಲಿಯಾ ಭಟ್
ಜವಾನ್ ಟ್ರೇಲರ್ನಲ್ಲಿ ಶಾರುಖ್ ಖಾನ್ ಪವರ್ಫುಲ್ ಡೈಲಾಗ್ ಕೇಳಿ ಫ್ಯಾನ್ಸ್ ಖುಷ್ ಆಗಿದ್ದಾರೆ. ಇಲ್ಲಿ ನಾನೇ ಹೀರೋ, ನಾನೇ ವಿಲನ್ ಎಂದು ಎಂಟ್ರಿ ಕೊಟ್ಟ ಶಾರುಖ್ ಟ್ರೈನ್ ಹೈಜಾಕ್ ಮಾಡುತ್ತಾರೆ. ನಿನಗೆ ಏನು ಬೇಕು ಎಂದು ಕೇಳಿದ ಅಧಿಕಾರಿಗೆ ಚಾಹಿಯೇ ತೋ ಆಲಿಯಾ ಭಟ್ ಎಂದು ಡೈಲಾಗ್ ಹೊಡೆಯುತ್ತಾರೆ. ಬಾಲಿವುಡ್ ನಟಿ ಆಲಿಯಾ ಭಟ್ ಹೆಸರು ಜವಾನ್ ಖಡಕ್ ಡೈಲಾಗ್ ಭಾಗಿದೆ. ನೀವು ನನ್ನ ಮಗನನ್ನು ಮುಟ್ಟುವ ಮೊದಲು, ಅವನ ತಂದೆಯೊಂದಿಗೆ ಮಾತಾಡು ಎನ್ನುವ ಡೈಲಾಗ್ ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ದ್ವಿಪಾತ್ರದಲ್ಲಿ ಶಾರುಖ್
ಜವಾನ್ ಸಿನಿಮಾದಲ್ಲಿ ದ್ವಿಪಾತ್ರದಲ್ಲಿ ಶಾರುಖ್ ಖಾನ್ ಮೋಡಿ ಮಾಡಲಿದ್ದಾರೆ. ದೇಶ ಕಾಯುವ ಸೈನಿಕನಾಗಿ ಕಾಣಿಸಿಕೊಳ್ಳುವ ಕಿಂಗ್ ಖಾನ್, ವಿಲನ್ ಆಗಿ ಟ್ರೈನ್ ಹೈಜಾಕ್ ಕೂಡ ಮಾಡಿದ್ದಾರೆ. ಶಾರುಖ್ ಖಾನ್ ಚಿತ್ರದಲ್ಲಿ ಮಾಜಿ ಸೈನಿಕನಾಗಿ ನಟಿಸಿದ್ದಾರೆ. 6 ಮಹಿಳೆಯರ ತಂಡವನ್ನು ಅವರು ದೇಶಾದ್ಯಂತ ವಿವಿಧ ದರೋಡಗಳಿಗೆ ಬಳಸಿಕೊಳ್ಳುತ್ತಾರೆ. ಮೆಟ್ರೋವನ್ನು ಹೈಜಾಕ್ ಮಾಡುತ್ತಾರೆ. ನಯನತಾರಾ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.
ಶಾರುಖ್-ನಯನತಾರಾ ರೊಮ್ಯಾನ್ಸ್
ಶಾರುಖ್ ಇದ್ದ ಮೇಲೆ ರೊಮ್ಯಾನ್ಸ್ ಇರಲೇಬೇಕು ಅಲ್ವಾ, ಒಂದೆರಡು ದೃಶ್ಯಗಳಲ್ಲಿ ನಯನತಾರಾ ಜೊತೆ ಶಾರುಖ್ ರೋಮ್ಯಾನ್ಸ್ ಕಾಣಬಹುದಾಗಿದೆ. ದೀಪಿಕಾ ಪಡುಕೋಣೆ ಕೂಡ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕುಸ್ತಿ ಪಂದ್ಯದಲ್ಲಿ ಶಾರುಖ್ ಅವರನ್ನು ಸೋಲಿಸಿದ್ದಾರೆ. ವಿಜಯ್ ಸೇತುಪತಿ ವಿಭಿನ್ನ ಅವತಾರಗಳಲ್ಲಿ ಕಾಣಿಸಿಕೊಂಡಿದ್ದಾರೆ ಆದರೆ 'ವಿಶ್ವದ ನಾಲ್ಕನೇ ಅತಿದೊಡ್ಡ ಶಸ್ತ್ರಾಸ್ತ್ರ ವ್ಯಾಪಾರಿ' ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ.
ಅಟ್ಲಿ ನಿರ್ದೇಶನದ ಆಕ್ಷನ್ ಪ್ಯಾಕ್ಡ್ ಸಿನಿಮಾ
ಶಾರುಖ್ ಮತ್ತು ನಯನತಾರಾ ಜೊತೆಗೆ, ಜವಾನ್ ವಿಜಯ್ ಸೇತುಪತಿ , ಸನ್ಯಾ ಮಲ್ಹೋತ್ರಾ, ಪ್ರಿಯಾಮಣಿ, ಗಿರಿಜಾ ಓಕ್, ಸಂಜೀತಾ ಭಟ್ಟಾಚಾರ್ಯ, ರಿಧಿ ಡೋಗ್ರಾ ಮತ್ತು ಸುನಿಲ್ ಗ್ರೋವರ್ ಸೇರಿದಂತೆ ಇತರರು ಅಭಿನಯಿಸಿದ್ದಾರೆ. ತಮಿಳು ಸ್ಟಾರ್ ನಿರ್ದೇಶಕ ಅಟ್ಲೀ ಶಾರುಖ್ಗೆ ಆ್ಯಕ್ಷನ್ ಕಟ್ ಹೇಳಿದ್ದು, ಶಾರುಖ್ ಮತ್ತು ಗೌರಿ ಖಾನ್ ಅವರ ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್ ಜವಾನ್ ಸಿನಿಮಾ ನಿರ್ಮಿಸಿದೆ.
Shah Rukh Khan Ignored Kannada why Jawan Trailer was not Released in Kannada.
21-01-25 10:59 pm
HK News Desk
BJP MLA BP Harish, B. Y. Vijayendra, Yatnal:...
20-01-25 07:00 pm
Hassan Suicide, Online Gaming: ಅಮ್ಮಾ ನನ್ನನ್ನು...
20-01-25 04:24 pm
ಕೇಸರಿ ಮನೆಯಲ್ಲಿ ಬಣ ಬಡಿದಾಟ ಜೋರು ; ಯತ್ನಾಳ್ ಬಣದ ಎ...
19-01-25 08:30 pm
ಮುಡಾ ಸೈಟ್ ಹಗರಣ ; 300 ಕೋಟಿ ಮೌಲ್ಯದ 142 ಆಸ್ತಿಗಳನ...
18-01-25 05:05 pm
21-01-25 11:02 pm
HK News Desk
ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ; ಸಿಲಿಂಡರ್ಗಳ ನಿರಂತ...
19-01-25 08:17 pm
Israel War: ಕಡೆಗೂ ಕದನ ವಿರಾಮ ಘೋಷಿಸಿದ ಇಸ್ರೇಲ್ ;...
19-01-25 06:35 pm
ಮಂಗಳೂರಿನ ಕುದುರೆಮುಖ ಕಬ್ಬಿಣ ಅದಿರು ಕಂಪನಿ ಎನ್ಎಂಡಿ...
18-01-25 06:20 pm
Vijay Kiran Anand 2025: ಮಹಾ ಕುಂಭ ಮೇಳದ ಮುಖ್ಯ ಉ...
16-01-25 09:01 pm
21-01-25 11:51 pm
Mangalore Correspondent
Mangalore Praveen Nettaru murder case, NIA ar...
21-01-25 09:43 pm
Mangalore University, Phd courses: ಪಿಎಚ್ ಡಿ ಪ...
21-01-25 08:11 pm
Mangalore Kotekar bank robbery, president: 15...
21-01-25 07:43 pm
Mangalore Kotekar Bank Robbery, Accused Photo...
21-01-25 12:21 pm
21-01-25 06:00 pm
Mangaluru Correspondent
Hubballi Bank Robbery, Kotekar, Bidar: ಬೀದರ್...
20-01-25 10:18 pm
Mangalore Kotekar Bank Robbery, Three Arreste...
20-01-25 07:19 pm
Mangalore Kotekar Robbery, Davanagere: ಮಂಗಳೂರ...
20-01-25 05:20 pm
Mysuru Robbery, Bidar Mangalore, Crime; ಬೀದರ್...
20-01-25 01:25 pm