ಬ್ರೇಕಿಂಗ್ ನ್ಯೂಸ್
06-08-20 08:00 am Headline Karnataka News Network ಸಿನಿಮಾ
ಮುಂಬೈ: ಹೀರೋಗಳ ಜೊತೆ ಮಲಗಿ ನಾನು ಸಿನಿಮಾಗಳಲ್ಲಿ ಅವಕಾಶ ಪಡೆದುಕೊಂಡಿಲ್ಲ ಎಂದು 90ರ ದಶಕದ ಬಾಲಿವುಡ್ನ ನಟಿ ರವೀನಾ ಟಂಡನ್ ಅಚ್ಚರಿ ಹೇಳಿಕೆಯನ್ನು ನೋಡಿದ್ದಾರೆ.
ಇತ್ತೀಚೆಗೆ ನಟಿ ರವೀನಾ ಟಂಡನ್ ಸಂದರ್ಶನವೊಂದರಲ್ಲಿ ತನ್ನ ಸಿನಿಮಾ ವೃತ್ತಿ ಜೀವನದ ಬಗ್ಗೆ ಮಾತನಾಡಿದ್ದಾರೆ. ಸಿನಿಮಾದಲ್ಲಿ ಅವಕಾಶ ಪಡೆಯಲು ತಾವು ಅನುಭವಿಸಿದ ಕಷ್ಟಗಳು ಮತ್ತು ಕೆಲವು ಕಹಿ ಘಟನೆಯ ಸತ್ಯಗಳನ್ನು ಬಿಚ್ಚಿಟ್ಟಿದ್ದಾರೆ.

ನಾನು ಯಾವುದೇ ಗಾಡ್ಫಾದರ್ಗಳನ್ನು ಹೊಂದಿರಲಿಲ್ಲ. ಅಲ್ಲದೇ ನನ್ನನ್ನು ಯಾವುದೇ ನಾಯಕ ಕೂಡ ಪ್ರಮೋಟ್ ಮಾಡಲಿಲ್ಲ. ನಾನು ಸಿನಿಮಾದಲ್ಲಿ ಅಭಿನಯಿಸುವ ಅವಕಾಶಕ್ಕಾಗಿ ಹೀರೋಗಳ ಜೊತೆ ಮಲಗಲಿಲ್ಲ ಅಥವಾ ಯಾರೊಂದಿಗೂ ಅಫೇರ್ ಕೂಡ ಇಟ್ಟುಕೊಂಡಿರಲಿಲ್ಲ. ಬಹಳಷ್ಟು ಸಂದರ್ಭಗಳಲ್ಲಿ ನನ್ನನ್ನು ಅಹಂಕಾರ ಇರುವವಳು ಎಂದು ಕರೆದಿದ್ದರು. ಯಾಕೆಂದರೆ ನಾನು ಅವರು ಹೇಳಿದಂತೆ ಕೇಳುತ್ತಿರಲಿಲ್ಲ. ಅವರು ನಗು ಎಂದರೆ ನಗಬೇಕು, ನನ್ನನ್ನು ಕುಳಿತುಕೋ ಎಂದಾಗ ಕುಳಿತುಕೊಳ್ಳಬೇಕಿತ್ತು. ಹೀಗಾಗಿ ಅವರ ತಾಳಕ್ಕೆ ನಾನು ಕುಣಿಯುತ್ತಿರಲಿಲ್ಲ” ಎಂದು ತಾವು ಅನುಭವಿಸಿದ ನೋವಿನ ಬಗ್ಗೆ ಹೇಳಿಕೊಂಡಿದ್ದಾರೆ.
ತಾನು ನಟಿಯಾಗಿ ಅಭಿನಯಿಸುತ್ತಿದ್ದ ಸಂದರ್ಭದಲ್ಲಿ ನನ್ನ ವಿರುದ್ಧ ಗಾಸಿಪ್ ಕಾಲಂಗಳಲ್ಲಿ ಏನೇನೋ ಲೇಖನಗಳು ಪ್ರಕಟವಾಗುತ್ತಿದ್ದವು. ಆದರೆ ನಾನು ಯಾರ ಮಾತಿಗೂ ತಲೆ ಕೆಡಿಸಿಕೊಳ್ಳುತ್ತಿರಲಿಲ್ಲ. ನಾನು ನನ್ನದೇ ಆದ ಕೆಲಸವನ್ನು ಮಾಡಿಕೊಂಡು, ನನ್ನ ಸ್ವಂತ ನಿಯಮಗಳಿಗೆ ಅನುಗುಣವಾಗಿ ಬದುಕಲು ಬಯಸುತ್ತಿದ್ದೆ ಎಂದು ರವೀನಾ ಹೇಳಿದ್ದಾರೆ.

ಇಡೀ ಭಾರತ ಚಿತ್ರರಂಗವೇ ಕನ್ನಡ ಸಿನಿಮಾದತ್ತ ತಿರುಗಿ ನೋಡುವಂತೆ ಮಾಡಿದ್ದು ‘ಕೆಜಿಎಫ್’ ಸಿನಿಮಾ. ಕೆಜಿಎಫ್-2 ಸಿನಿಮಾ ಕೂಡ ಬಿಡುಗಡೆಯ ಮೊದಲೇ ಬಹಳಷ್ಟು ನಿರೀಕ್ಷೆ ಹುಟ್ಟುಹಾಕಿದೆ. ರವೀನಾ ಟಂಡನ್ ‘ಕೆಜಿಎಫ್-2’ ಸಿನಿಮಾದಲ್ಲಿ ಪ್ರಧಾನ ಮಂತ್ರಿ ರಮಿಕಾ ಸೇನ್ ಪಾತ್ರದ ಅಭಿನಯಿಸಿದ್ದಾರೆ.
ಇತ್ತೀಚೆಗೆ ಸಿನಿಮಾದ ಬಗ್ಗೆ ಮಾತನಾಡುತ್ತಾ, “ಕೆಜಿಎಫ್ ಸಿನಿಮಾದಲ್ಲಿ ನಾನು ರಾಜಕಾರಣಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದೇನೆ. ಅದು ತುಂಬ ಪವರ್ ಫುಲ್ ಪಾತ್ರವಾಗಿದೆ. ಅಲ್ಲದೇ ಬಹಳ ಕುತೂಹಲ ಹೊಂದಿರುವ ಈ ಸಿನಿಮಾದಲ್ಲಿ ಅವಳೇ ಹೀರೋ ಆಗಿರುತ್ತಾಳೆ. ಹಾಗೆಯೇ ವಿಲನ್ ಕೂಡ ಅವಳೇ ಆಗಿರುತ್ತಾಳೆ. ಕೆಜಿಎಫ್ ಸಿನಿಮಾ ಕಥೆ ತುಂಬಾ ಆಸಕ್ತಿದಾಯಕವಾಗಿದೆ” ಎಂದು ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದರು.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 11:48 am
HK News Staffer
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm