ಬ್ರೇಕಿಂಗ್ ನ್ಯೂಸ್
06-08-20 08:00 am Headline Karnataka News Network ಸಿನಿಮಾ
ಮುಂಬೈ: ಹೀರೋಗಳ ಜೊತೆ ಮಲಗಿ ನಾನು ಸಿನಿಮಾಗಳಲ್ಲಿ ಅವಕಾಶ ಪಡೆದುಕೊಂಡಿಲ್ಲ ಎಂದು 90ರ ದಶಕದ ಬಾಲಿವುಡ್ನ ನಟಿ ರವೀನಾ ಟಂಡನ್ ಅಚ್ಚರಿ ಹೇಳಿಕೆಯನ್ನು ನೋಡಿದ್ದಾರೆ.
ಇತ್ತೀಚೆಗೆ ನಟಿ ರವೀನಾ ಟಂಡನ್ ಸಂದರ್ಶನವೊಂದರಲ್ಲಿ ತನ್ನ ಸಿನಿಮಾ ವೃತ್ತಿ ಜೀವನದ ಬಗ್ಗೆ ಮಾತನಾಡಿದ್ದಾರೆ. ಸಿನಿಮಾದಲ್ಲಿ ಅವಕಾಶ ಪಡೆಯಲು ತಾವು ಅನುಭವಿಸಿದ ಕಷ್ಟಗಳು ಮತ್ತು ಕೆಲವು ಕಹಿ ಘಟನೆಯ ಸತ್ಯಗಳನ್ನು ಬಿಚ್ಚಿಟ್ಟಿದ್ದಾರೆ.

ನಾನು ಯಾವುದೇ ಗಾಡ್ಫಾದರ್ಗಳನ್ನು ಹೊಂದಿರಲಿಲ್ಲ. ಅಲ್ಲದೇ ನನ್ನನ್ನು ಯಾವುದೇ ನಾಯಕ ಕೂಡ ಪ್ರಮೋಟ್ ಮಾಡಲಿಲ್ಲ. ನಾನು ಸಿನಿಮಾದಲ್ಲಿ ಅಭಿನಯಿಸುವ ಅವಕಾಶಕ್ಕಾಗಿ ಹೀರೋಗಳ ಜೊತೆ ಮಲಗಲಿಲ್ಲ ಅಥವಾ ಯಾರೊಂದಿಗೂ ಅಫೇರ್ ಕೂಡ ಇಟ್ಟುಕೊಂಡಿರಲಿಲ್ಲ. ಬಹಳಷ್ಟು ಸಂದರ್ಭಗಳಲ್ಲಿ ನನ್ನನ್ನು ಅಹಂಕಾರ ಇರುವವಳು ಎಂದು ಕರೆದಿದ್ದರು. ಯಾಕೆಂದರೆ ನಾನು ಅವರು ಹೇಳಿದಂತೆ ಕೇಳುತ್ತಿರಲಿಲ್ಲ. ಅವರು ನಗು ಎಂದರೆ ನಗಬೇಕು, ನನ್ನನ್ನು ಕುಳಿತುಕೋ ಎಂದಾಗ ಕುಳಿತುಕೊಳ್ಳಬೇಕಿತ್ತು. ಹೀಗಾಗಿ ಅವರ ತಾಳಕ್ಕೆ ನಾನು ಕುಣಿಯುತ್ತಿರಲಿಲ್ಲ” ಎಂದು ತಾವು ಅನುಭವಿಸಿದ ನೋವಿನ ಬಗ್ಗೆ ಹೇಳಿಕೊಂಡಿದ್ದಾರೆ.
ತಾನು ನಟಿಯಾಗಿ ಅಭಿನಯಿಸುತ್ತಿದ್ದ ಸಂದರ್ಭದಲ್ಲಿ ನನ್ನ ವಿರುದ್ಧ ಗಾಸಿಪ್ ಕಾಲಂಗಳಲ್ಲಿ ಏನೇನೋ ಲೇಖನಗಳು ಪ್ರಕಟವಾಗುತ್ತಿದ್ದವು. ಆದರೆ ನಾನು ಯಾರ ಮಾತಿಗೂ ತಲೆ ಕೆಡಿಸಿಕೊಳ್ಳುತ್ತಿರಲಿಲ್ಲ. ನಾನು ನನ್ನದೇ ಆದ ಕೆಲಸವನ್ನು ಮಾಡಿಕೊಂಡು, ನನ್ನ ಸ್ವಂತ ನಿಯಮಗಳಿಗೆ ಅನುಗುಣವಾಗಿ ಬದುಕಲು ಬಯಸುತ್ತಿದ್ದೆ ಎಂದು ರವೀನಾ ಹೇಳಿದ್ದಾರೆ.

ಇಡೀ ಭಾರತ ಚಿತ್ರರಂಗವೇ ಕನ್ನಡ ಸಿನಿಮಾದತ್ತ ತಿರುಗಿ ನೋಡುವಂತೆ ಮಾಡಿದ್ದು ‘ಕೆಜಿಎಫ್’ ಸಿನಿಮಾ. ಕೆಜಿಎಫ್-2 ಸಿನಿಮಾ ಕೂಡ ಬಿಡುಗಡೆಯ ಮೊದಲೇ ಬಹಳಷ್ಟು ನಿರೀಕ್ಷೆ ಹುಟ್ಟುಹಾಕಿದೆ. ರವೀನಾ ಟಂಡನ್ ‘ಕೆಜಿಎಫ್-2’ ಸಿನಿಮಾದಲ್ಲಿ ಪ್ರಧಾನ ಮಂತ್ರಿ ರಮಿಕಾ ಸೇನ್ ಪಾತ್ರದ ಅಭಿನಯಿಸಿದ್ದಾರೆ.
ಇತ್ತೀಚೆಗೆ ಸಿನಿಮಾದ ಬಗ್ಗೆ ಮಾತನಾಡುತ್ತಾ, “ಕೆಜಿಎಫ್ ಸಿನಿಮಾದಲ್ಲಿ ನಾನು ರಾಜಕಾರಣಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದೇನೆ. ಅದು ತುಂಬ ಪವರ್ ಫುಲ್ ಪಾತ್ರವಾಗಿದೆ. ಅಲ್ಲದೇ ಬಹಳ ಕುತೂಹಲ ಹೊಂದಿರುವ ಈ ಸಿನಿಮಾದಲ್ಲಿ ಅವಳೇ ಹೀರೋ ಆಗಿರುತ್ತಾಳೆ. ಹಾಗೆಯೇ ವಿಲನ್ ಕೂಡ ಅವಳೇ ಆಗಿರುತ್ತಾಳೆ. ಕೆಜಿಎಫ್ ಸಿನಿಮಾ ಕಥೆ ತುಂಬಾ ಆಸಕ್ತಿದಾಯಕವಾಗಿದೆ” ಎಂದು ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದರು.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm