ಬ್ರೇಕಿಂಗ್ ನ್ಯೂಸ್
06-08-20 08:00 am Headline Karnataka News Network ಸಿನಿಮಾ
ಮುಂಬೈ: ಹೀರೋಗಳ ಜೊತೆ ಮಲಗಿ ನಾನು ಸಿನಿಮಾಗಳಲ್ಲಿ ಅವಕಾಶ ಪಡೆದುಕೊಂಡಿಲ್ಲ ಎಂದು 90ರ ದಶಕದ ಬಾಲಿವುಡ್ನ ನಟಿ ರವೀನಾ ಟಂಡನ್ ಅಚ್ಚರಿ ಹೇಳಿಕೆಯನ್ನು ನೋಡಿದ್ದಾರೆ.
ಇತ್ತೀಚೆಗೆ ನಟಿ ರವೀನಾ ಟಂಡನ್ ಸಂದರ್ಶನವೊಂದರಲ್ಲಿ ತನ್ನ ಸಿನಿಮಾ ವೃತ್ತಿ ಜೀವನದ ಬಗ್ಗೆ ಮಾತನಾಡಿದ್ದಾರೆ. ಸಿನಿಮಾದಲ್ಲಿ ಅವಕಾಶ ಪಡೆಯಲು ತಾವು ಅನುಭವಿಸಿದ ಕಷ್ಟಗಳು ಮತ್ತು ಕೆಲವು ಕಹಿ ಘಟನೆಯ ಸತ್ಯಗಳನ್ನು ಬಿಚ್ಚಿಟ್ಟಿದ್ದಾರೆ.
ನಾನು ಯಾವುದೇ ಗಾಡ್ಫಾದರ್ಗಳನ್ನು ಹೊಂದಿರಲಿಲ್ಲ. ಅಲ್ಲದೇ ನನ್ನನ್ನು ಯಾವುದೇ ನಾಯಕ ಕೂಡ ಪ್ರಮೋಟ್ ಮಾಡಲಿಲ್ಲ. ನಾನು ಸಿನಿಮಾದಲ್ಲಿ ಅಭಿನಯಿಸುವ ಅವಕಾಶಕ್ಕಾಗಿ ಹೀರೋಗಳ ಜೊತೆ ಮಲಗಲಿಲ್ಲ ಅಥವಾ ಯಾರೊಂದಿಗೂ ಅಫೇರ್ ಕೂಡ ಇಟ್ಟುಕೊಂಡಿರಲಿಲ್ಲ. ಬಹಳಷ್ಟು ಸಂದರ್ಭಗಳಲ್ಲಿ ನನ್ನನ್ನು ಅಹಂಕಾರ ಇರುವವಳು ಎಂದು ಕರೆದಿದ್ದರು. ಯಾಕೆಂದರೆ ನಾನು ಅವರು ಹೇಳಿದಂತೆ ಕೇಳುತ್ತಿರಲಿಲ್ಲ. ಅವರು ನಗು ಎಂದರೆ ನಗಬೇಕು, ನನ್ನನ್ನು ಕುಳಿತುಕೋ ಎಂದಾಗ ಕುಳಿತುಕೊಳ್ಳಬೇಕಿತ್ತು. ಹೀಗಾಗಿ ಅವರ ತಾಳಕ್ಕೆ ನಾನು ಕುಣಿಯುತ್ತಿರಲಿಲ್ಲ” ಎಂದು ತಾವು ಅನುಭವಿಸಿದ ನೋವಿನ ಬಗ್ಗೆ ಹೇಳಿಕೊಂಡಿದ್ದಾರೆ.
ತಾನು ನಟಿಯಾಗಿ ಅಭಿನಯಿಸುತ್ತಿದ್ದ ಸಂದರ್ಭದಲ್ಲಿ ನನ್ನ ವಿರುದ್ಧ ಗಾಸಿಪ್ ಕಾಲಂಗಳಲ್ಲಿ ಏನೇನೋ ಲೇಖನಗಳು ಪ್ರಕಟವಾಗುತ್ತಿದ್ದವು. ಆದರೆ ನಾನು ಯಾರ ಮಾತಿಗೂ ತಲೆ ಕೆಡಿಸಿಕೊಳ್ಳುತ್ತಿರಲಿಲ್ಲ. ನಾನು ನನ್ನದೇ ಆದ ಕೆಲಸವನ್ನು ಮಾಡಿಕೊಂಡು, ನನ್ನ ಸ್ವಂತ ನಿಯಮಗಳಿಗೆ ಅನುಗುಣವಾಗಿ ಬದುಕಲು ಬಯಸುತ್ತಿದ್ದೆ ಎಂದು ರವೀನಾ ಹೇಳಿದ್ದಾರೆ.
ಇಡೀ ಭಾರತ ಚಿತ್ರರಂಗವೇ ಕನ್ನಡ ಸಿನಿಮಾದತ್ತ ತಿರುಗಿ ನೋಡುವಂತೆ ಮಾಡಿದ್ದು ‘ಕೆಜಿಎಫ್’ ಸಿನಿಮಾ. ಕೆಜಿಎಫ್-2 ಸಿನಿಮಾ ಕೂಡ ಬಿಡುಗಡೆಯ ಮೊದಲೇ ಬಹಳಷ್ಟು ನಿರೀಕ್ಷೆ ಹುಟ್ಟುಹಾಕಿದೆ. ರವೀನಾ ಟಂಡನ್ ‘ಕೆಜಿಎಫ್-2’ ಸಿನಿಮಾದಲ್ಲಿ ಪ್ರಧಾನ ಮಂತ್ರಿ ರಮಿಕಾ ಸೇನ್ ಪಾತ್ರದ ಅಭಿನಯಿಸಿದ್ದಾರೆ.
ಇತ್ತೀಚೆಗೆ ಸಿನಿಮಾದ ಬಗ್ಗೆ ಮಾತನಾಡುತ್ತಾ, “ಕೆಜಿಎಫ್ ಸಿನಿಮಾದಲ್ಲಿ ನಾನು ರಾಜಕಾರಣಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದೇನೆ. ಅದು ತುಂಬ ಪವರ್ ಫುಲ್ ಪಾತ್ರವಾಗಿದೆ. ಅಲ್ಲದೇ ಬಹಳ ಕುತೂಹಲ ಹೊಂದಿರುವ ಈ ಸಿನಿಮಾದಲ್ಲಿ ಅವಳೇ ಹೀರೋ ಆಗಿರುತ್ತಾಳೆ. ಹಾಗೆಯೇ ವಿಲನ್ ಕೂಡ ಅವಳೇ ಆಗಿರುತ್ತಾಳೆ. ಕೆಜಿಎಫ್ ಸಿನಿಮಾ ಕಥೆ ತುಂಬಾ ಆಸಕ್ತಿದಾಯಕವಾಗಿದೆ” ಎಂದು ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದರು.
05-02-23 02:56 pm
HK News Desk
ಪ್ರಣಾಳಿಕೆ ಸಮಿತಿಗೆ ರಾಜಿನಾಮೆ ನೀಡಿಲ್ಲ, ನಮ್ಮಲ್ಲಿ...
04-02-23 10:17 pm
ಅಮಿತ್ ಷಾ ಸಿಡಿ ಎಕ್ಸ್ಪರ್ಟ್ ಇದ್ದಾರೆ, ಗುಜರಾತ್ ಉ...
04-02-23 05:51 pm
ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಖ್ಯಾತ ಗಾಯಕಿ ವಾಣಿ...
04-02-23 05:16 pm
ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಧರ್ಮೇಂದ್...
04-02-23 02:23 pm
06-02-23 04:04 pm
HK News Desk
ಬಾಂಗ್ಲಾದೇಶದಲ್ಲಿ 14 ಹಿಂದು ದೇವಾಲಯಗಳ ಧ್ವಂಸ; ರಾತ್...
06-02-23 10:53 am
ನಸುಕಿನಲ್ಲಿ ಭೀಕರ ಭೂಕಂಪ ; ತತ್ತರಿಸಿದ ಟರ್ಕಿ, ಸಿರಿ...
06-02-23 10:44 am
ಮರಣದಂಡನೆಗೆ ಗುರಿಯಾಗಿದ್ದ ಪಾಕಿಸ್ತಾನದ ಮಾಜಿ ಅಧ್ಯಕ್...
05-02-23 02:16 pm
ಫೆ.6ರಂದು ತುಮಕೂರಿನಲ್ಲಿ ಏಷ್ಯಾದ ಅತಿದೊಡ್ಡ ಹೆಲಿಕಾಪ...
04-02-23 02:15 pm
06-02-23 05:39 pm
Mangalore Correspondent
ರೈತರ ಸಾಲ ಮನ್ನಾ ಮಾಡಿದರೆ ದೇಶಕ್ಕೆ ನಷ್ಟವೇ ಹೊರತು ಲ...
05-02-23 09:39 pm
ಜನಾರ್ದನ ಪೂಜಾರಿ ಮೂಲಕ ಟಿಕೆಟಿಗಾಗಿ ಒತ್ತಡ ತಂತ್ರ ;...
05-02-23 05:33 pm
ಟಯರ್ ಬ್ಲಾಸ್ಟ್ ; ನಿಯಂತ್ರಣ ತಪ್ಪಿದ ಮೀನಿನ ಟೆಂಪೋ ಕ...
05-02-23 12:37 pm
ಕರಾಟೆ ಕ್ಲಾಸಿಗೆ ಬಂದಿದ್ದ ಬಾಲಕಿಗೆ ಕಿರುಕುಳ ; ಆರೋಪ...
04-02-23 10:24 pm
06-02-23 03:20 pm
Mangalore Correspondent
ರಿಯಲ್ ಎಸ್ಟೇಟ್ ನಡೆಸುತ್ತಿದ್ದ ವ್ಯಕ್ತಿಯ ಬರ್ಬರ ಹತ್...
05-02-23 09:05 pm
ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ದೋಖಾ ; ಭಾರೀ ಲಾಭ ತೋರ...
05-02-23 05:26 pm
ಧೂಳೆಬ್ಬಿಸಿ ಹೋಗಬೇಡ ಎಂದು ಹೇಳಿದ್ದಕ್ಕೆ ಟಿಪ್ಪರ್ ಹಾ...
03-02-23 11:38 pm
ಪದ್ಮಾ ರಾಯಲ್ ಚಾಲೆಂಜ್ ಸ್ಕೀಮ್ ಹೆಸರಲ್ಲಿ ನೂರಾರು ಮಂ...
03-02-23 08:42 pm