ಬ್ರೇಕಿಂಗ್ ನ್ಯೂಸ್
01-09-23 02:17 pm Source: News18 Kannada ಸಿನಿಮಾ
ಡಿವೈನ್ ಸ್ಟಾರ್ ಇನ್ನು ಯಾವ ಸಿನಿಮಾ ಮಾಡುತ್ತಾರೆ ಎನ್ನುವ ಕುತೂಹಲ ಎಲ್ಲರಲ್ಲೂ ಇದೆ. ಕಾಂತಾರ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಫೇಮಸ್ ಆದ ಕನ್ನಡ ಸ್ಟಾರ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ಕಾಂತಾರ ಪ್ರೀಕ್ವೆಲ್ ಮುಗಿದ ನಂತರ ಏನ್ ಮಾಡ್ತಾರೆ? ಕಾಂತಾರ ಹಿಟ್ ಆಯ್ತು. ಕಾಂತಾರ 2 ಸಿನಿಮಾದ ಸ್ಕ್ರಿಪ್ಟ್ ಕೂಡಾ ರೆಡಿಯಾಗಿದೆ. ಇನ್ನೇನು ಮೂವಿ ಶೂಟಿಂಗ್ ಶುರುವಾಗಬೇಕು. ಸರಿ, ಆದ್ರೆ ಈ ಸಿನಿಮಾವನ್ನು ಮುಗಿಸಿ ರಿಷಬ್ ಶೆಟ್ಟಿ ಏನು ಮಾಡುತ್ತಾರೆ? ಮತ್ತೆ ಡೈರೆಕ್ಟರ್ ಕ್ಯಾಪ್ ಧರಿಸ್ತಾರಾ ಅಥವಾ ನಟನಾಗಿ ಮಿಂಚುತ್ತಾರಾ?
ಹೀಗೊಂದು ಕುತೂಹಲ ಎಲ್ಲರಲ್ಲೂ ಇದೆ. ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ಕಾಂತಾರ 2 ನಂತರ ಬಾಲಿವುಡ್ ಡೈರೆಕ್ಟರ್ ಜೊತೆ ಮೂವಿ ಮಾಡಲಿದ್ದಾರೆ. ಅದೂ ಸಾಮಾನ್ಯ ಡೈರೆಕ್ಟರ್ ಅಲ್ಲ, ಜೋಧಾ ಅಕ್ಬರ್, ಲಗಾನ್, ಮೊಹೆಂಜದಾರೋದಂತಹ ಸಿನಿಮಾ ನಿರ್ದೇಶಿಸಿದ ಬಾಲಿವುಡ್ ನಿರ್ದೇಶಕ. ಬಾಲಿವುಡ್ ನಿರ್ದೇಶಕ ಅಶುತೋಷ್ ಗೋವರಿಕೆರ್ ಅವರು ರಿಷಬ್ ಶೆಟ್ಟಿ ಅವರಿಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾ ಆಗಿರಲಿದ್ದು ಕಾಂತಾರ 2 ಸಿನಿಮಾ ಮುಗಿಯುತ್ತಿದ್ದಂತೆ ಈ ಸಿನಿಮಾದ ಕೆಲಸಗಳು ಶುರುವಾಗಲಿದೆಯಂತೆ.


ಈ ಒಂದು ಸುದ್ದಿಯನ್ನು ಹಿರಿಯ ಸಿನಿಮಾ ವರದಿಗಾದ ಹಿಮೇಶ್ ಅವರು ಟ್ವಿಟರ್ನಲ್ಲಿ ಶೇರ್ ಮಾಡಿದ್ದಾರೆ. ಈ ಸಿನಿಮಾ ಹಿಂದಿ, ತೆಲುಗು, ತಮಿಳು, ತೆಲುಗು, ಕನ್ನಡದಲ್ಲಿ ರಿಲೀಸ್ ಆಗಲಿದೆ. ಅಶುತೋಷ್ ಹಾಗೂ ರಿಷಬ್ ಮಧ್ಯೆ ಮಾತುಕತೆಯೂ ನಡೆದಿದೆ ಎನ್ನಲಾಗಿದೆ. ಕಳೆದ ತಿಂಗಳಲ್ಲಿ ಇವರಿಬ್ಬರೂ ಹಲವಾರು ಬಾರಿ ಭೇಟಿಯಾಗಿದ್ದಾರೆ ಎನ್ನಲಾಗಿದೆ. ಇದೀಗ ಇಬ್ಬರೂ ಮೊದಲ ಸಿನಿಮಾದ ಕೆಲಸ ಶುರು ಮಾಡಲು ರೆಡಿಯಾಗಿದ್ದಾರೆ.


2024 ಅರ್ಧದದಲ್ಲಿ ಈ ಸಿನಿಮಾ ಸೆಟ್ಟೇರುವ ಸಾಧ್ಯತೆ ಇದೆ. ಕಾಂತಾರ 2 ಸಿನಿಮಾದ ಶೆಡ್ಯೂಲ್ಗೆ ಅವಲಂಬಿಸಿ ಈ ಸಿನಿಮಾ ಸೆಟ್ಟೇರಲಿದೆ. ಲಗಾನಗ ಸ್ವದೇಶ್, ಜೋಧಾ ಅಕ್ಬರ್, ಖೇಲೇ ಅಶುತೋಷ್ ಅವರ ಹಿಟ್ ಸಿನಿಮಾಗಳು.
Lagan Fame Bollywood Director Ashutosh Gowariker to Direct Kantara Fame Rishab Shetty.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm