ಬ್ರೇಕಿಂಗ್ ನ್ಯೂಸ್
01-09-23 02:17 pm Source: News18 Kannada ಸಿನಿಮಾ
ಡಿವೈನ್ ಸ್ಟಾರ್ ಇನ್ನು ಯಾವ ಸಿನಿಮಾ ಮಾಡುತ್ತಾರೆ ಎನ್ನುವ ಕುತೂಹಲ ಎಲ್ಲರಲ್ಲೂ ಇದೆ. ಕಾಂತಾರ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಫೇಮಸ್ ಆದ ಕನ್ನಡ ಸ್ಟಾರ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ಕಾಂತಾರ ಪ್ರೀಕ್ವೆಲ್ ಮುಗಿದ ನಂತರ ಏನ್ ಮಾಡ್ತಾರೆ? ಕಾಂತಾರ ಹಿಟ್ ಆಯ್ತು. ಕಾಂತಾರ 2 ಸಿನಿಮಾದ ಸ್ಕ್ರಿಪ್ಟ್ ಕೂಡಾ ರೆಡಿಯಾಗಿದೆ. ಇನ್ನೇನು ಮೂವಿ ಶೂಟಿಂಗ್ ಶುರುವಾಗಬೇಕು. ಸರಿ, ಆದ್ರೆ ಈ ಸಿನಿಮಾವನ್ನು ಮುಗಿಸಿ ರಿಷಬ್ ಶೆಟ್ಟಿ ಏನು ಮಾಡುತ್ತಾರೆ? ಮತ್ತೆ ಡೈರೆಕ್ಟರ್ ಕ್ಯಾಪ್ ಧರಿಸ್ತಾರಾ ಅಥವಾ ನಟನಾಗಿ ಮಿಂಚುತ್ತಾರಾ?
ಹೀಗೊಂದು ಕುತೂಹಲ ಎಲ್ಲರಲ್ಲೂ ಇದೆ. ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ಕಾಂತಾರ 2 ನಂತರ ಬಾಲಿವುಡ್ ಡೈರೆಕ್ಟರ್ ಜೊತೆ ಮೂವಿ ಮಾಡಲಿದ್ದಾರೆ. ಅದೂ ಸಾಮಾನ್ಯ ಡೈರೆಕ್ಟರ್ ಅಲ್ಲ, ಜೋಧಾ ಅಕ್ಬರ್, ಲಗಾನ್, ಮೊಹೆಂಜದಾರೋದಂತಹ ಸಿನಿಮಾ ನಿರ್ದೇಶಿಸಿದ ಬಾಲಿವುಡ್ ನಿರ್ದೇಶಕ. ಬಾಲಿವುಡ್ ನಿರ್ದೇಶಕ ಅಶುತೋಷ್ ಗೋವರಿಕೆರ್ ಅವರು ರಿಷಬ್ ಶೆಟ್ಟಿ ಅವರಿಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾ ಆಗಿರಲಿದ್ದು ಕಾಂತಾರ 2 ಸಿನಿಮಾ ಮುಗಿಯುತ್ತಿದ್ದಂತೆ ಈ ಸಿನಿಮಾದ ಕೆಲಸಗಳು ಶುರುವಾಗಲಿದೆಯಂತೆ.


ಈ ಒಂದು ಸುದ್ದಿಯನ್ನು ಹಿರಿಯ ಸಿನಿಮಾ ವರದಿಗಾದ ಹಿಮೇಶ್ ಅವರು ಟ್ವಿಟರ್ನಲ್ಲಿ ಶೇರ್ ಮಾಡಿದ್ದಾರೆ. ಈ ಸಿನಿಮಾ ಹಿಂದಿ, ತೆಲುಗು, ತಮಿಳು, ತೆಲುಗು, ಕನ್ನಡದಲ್ಲಿ ರಿಲೀಸ್ ಆಗಲಿದೆ. ಅಶುತೋಷ್ ಹಾಗೂ ರಿಷಬ್ ಮಧ್ಯೆ ಮಾತುಕತೆಯೂ ನಡೆದಿದೆ ಎನ್ನಲಾಗಿದೆ. ಕಳೆದ ತಿಂಗಳಲ್ಲಿ ಇವರಿಬ್ಬರೂ ಹಲವಾರು ಬಾರಿ ಭೇಟಿಯಾಗಿದ್ದಾರೆ ಎನ್ನಲಾಗಿದೆ. ಇದೀಗ ಇಬ್ಬರೂ ಮೊದಲ ಸಿನಿಮಾದ ಕೆಲಸ ಶುರು ಮಾಡಲು ರೆಡಿಯಾಗಿದ್ದಾರೆ.


2024 ಅರ್ಧದದಲ್ಲಿ ಈ ಸಿನಿಮಾ ಸೆಟ್ಟೇರುವ ಸಾಧ್ಯತೆ ಇದೆ. ಕಾಂತಾರ 2 ಸಿನಿಮಾದ ಶೆಡ್ಯೂಲ್ಗೆ ಅವಲಂಬಿಸಿ ಈ ಸಿನಿಮಾ ಸೆಟ್ಟೇರಲಿದೆ. ಲಗಾನಗ ಸ್ವದೇಶ್, ಜೋಧಾ ಅಕ್ಬರ್, ಖೇಲೇ ಅಶುತೋಷ್ ಅವರ ಹಿಟ್ ಸಿನಿಮಾಗಳು.
Lagan Fame Bollywood Director Ashutosh Gowariker to Direct Kantara Fame Rishab Shetty.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm