ಬ್ರೇಕಿಂಗ್ ನ್ಯೂಸ್
14-04-24 03:12 pm Bengaluru Correspondent ಸಿನಿಮಾ
ಬೆಂಗಳೂರು, ಏ 14: ಸ್ಯಾಂಡಲ್ವುಡ್ನಲ್ಲಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ನಿರ್ಮಾಪಕ, ಉದ್ಯಮಿ ಸೌಂದರ್ಯ ಜಗದೀಶ್ ಸಾವನ್ನಪ್ಪಿದ್ದಾರೆ. ಮಹಾಲಕ್ಷ್ಮೀ ಲೇಔಟ್ನಲ್ಲಿರುವ ಅವರ ನಿವಾಸದಲ್ಲೇ ಜಗದೀಶ್ ನಿಧನರಾಗಿದ್ದು, ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸೌಂದರ್ಯ ಜಗದೀಶ್ ಅವರ ಸಾವು ಚಿತ್ರೋದ್ಯಮಕ್ಕೆ ಆಘಾತ ನೀಡಿದ್ದು, ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ
ಮಹಾಲಕ್ಷ್ಮೀ ಲೇಔಟ್ನಲ್ಲಿರುವ ತಮ್ಮ ನಿವಾಸದಲ್ಲೇ ಜಗದೀಶ್ ಆತ್ಮಹತ್ಯೆಗೆ ಶರಣಾಗಿದ್ದು, ಕೂಡಲೇ ಅವರನ್ನು ರಾಜಾಜಿನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ, ಅಷ್ಟರಲ್ಲಾಗಲೇ ಜಗದೀಶ್ ನಿಧನರಾಗಿದ್ದರು ಎಂಬ ಮಾಹಿತಿ ಸಿಕ್ಕಿದೆ. ಜಗದೀಶ್ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ನಿಖರ ಕಾರಣವೇನು ಎಂಬುದು ಬಹಿರಂಗವಾಗಿಲ್ಲ. ಆದರೆ ಮೂಲಗಳ ನೀಡಿರುವ ಮಾಹಿತಿ ಪ್ರಕಾರ, ಈಚೆಗೆ ಆರ್ಥಿಕವಾಗಿ ಜಗದೀಶ್ ತುಂಬ ನಷ್ಟದಲ್ಲಿದ್ದರು ಮತ್ತು ಸಾಕಷ್ಟು ಸಾಲ ಮಾಡಿಕೊಂಡಿದ್ದರು ಎಂಬ ಮಾತುಗಳು ಕೇಳಿಬಂದಿವೆ.
ಚಿತ್ರರಂಗದ ಜೊತೆ ಸೌಂದರ್ಯ ಜಗದೀಶ್ ಒಡನಾಟ ;
ಬಹುತಾರಾಗಣದ 'ಮಸ್ತ್ ಮಜಾ ಮಾಡಿ' ಸಿನಿಮಾವನ್ನು ನಿರ್ಮಾಣ ಮಾಡುವ ಮೂಲಕ ಕನ್ನಡ ಚಿತ್ರರಂಗಕ್ಕೆ ನಿರ್ಮಾಪಕರಾಗಿ ಸೌಂದರ್ಯ ಜಗದೀಶ್ ಎಂಟ್ರಿ ನೀಡಿದರು. ಆನಂತರ ಪುತ್ರನಿಗಾಗಿ 'ಅಪ್ಪು ಪಪ್ಪು' ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಪುತ್ರ ಸ್ನೇಹಿತ್ ಅವರನ್ನು ಚಿತ್ರರಂಗದಲ್ಲಿ ಬೆಳೆಸಬೇಕೆಂಬುದು ಅವರ ಗುರಿ ಆಗಿತ್ತು. ಇದರ ಜೊತೆಗೆ 'ಸ್ನೇಹಿತರು', 'ರಾಮ್ ಲೀಲಾ' ಸಿನಿಮಾಗಳನ್ನು ಕೂಡ ಸೌಂದರ್ಯ ಜಗದೀಶ್ ನಿರ್ಮಾಣ ಮಾಡಿದ್ದರು.
ಈಚೆಗಷ್ಟೇ ಮಗಳ ಮದುವೆ ಮಾಡಿದ್ದ ಜಗದೀಶ್ ;
ಜಗದೀಶ್ ಪುತ್ರಿ ಸೌಂದರ್ಯ ಅವರು ವೃತ್ತಿಯಲ್ಲಿ ವೈದ್ಯೆಯಾಗಿದ್ದು, ಕೆಲ ದಿನಗಳ ಹಿಂದಷ್ಟೇ ಅವರ ಮದುವೆಯನ್ನು ಅದ್ದೂರಿಯಾಗಿ ಮಾಡಿದ್ದರು. ಈ ಮದುವೆಗೆ ಚಿತ್ರರಂಗದ ಗಣ್ಯರು ಆಗಮಿಸಿದ್ದರು. ಆದರೆ ಮಗಳ ಮದುವೆ ಮಾಡಿ, ತಿಂಗಳು ಕಳೆಯುವುದರೊಳಗೆ ಈ ರೀತಿ ಆಗಿರುವುದು ಬೇಸರದ ಸಂಗತಿಯಾಗಿದೆ.
Renowned Kannada film producer Soundarya Jagadish, known for his contributions to the industry through movies like 'Appu Pappu' and 'Snehitaru', tragically passed away, with early reports suggesting a possible suicide. The incident occurred at his residence in Mahalakshmi Layout, Bangalore, leaving the film fraternity and fans in shock.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm