ಬ್ರೇಕಿಂಗ್ ನ್ಯೂಸ್
14-04-24 03:12 pm Bengaluru Correspondent ಸಿನಿಮಾ
ಬೆಂಗಳೂರು, ಏ 14: ಸ್ಯಾಂಡಲ್ವುಡ್ನಲ್ಲಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ನಿರ್ಮಾಪಕ, ಉದ್ಯಮಿ ಸೌಂದರ್ಯ ಜಗದೀಶ್ ಸಾವನ್ನಪ್ಪಿದ್ದಾರೆ. ಮಹಾಲಕ್ಷ್ಮೀ ಲೇಔಟ್ನಲ್ಲಿರುವ ಅವರ ನಿವಾಸದಲ್ಲೇ ಜಗದೀಶ್ ನಿಧನರಾಗಿದ್ದು, ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸೌಂದರ್ಯ ಜಗದೀಶ್ ಅವರ ಸಾವು ಚಿತ್ರೋದ್ಯಮಕ್ಕೆ ಆಘಾತ ನೀಡಿದ್ದು, ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ
ಮಹಾಲಕ್ಷ್ಮೀ ಲೇಔಟ್ನಲ್ಲಿರುವ ತಮ್ಮ ನಿವಾಸದಲ್ಲೇ ಜಗದೀಶ್ ಆತ್ಮಹತ್ಯೆಗೆ ಶರಣಾಗಿದ್ದು, ಕೂಡಲೇ ಅವರನ್ನು ರಾಜಾಜಿನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ, ಅಷ್ಟರಲ್ಲಾಗಲೇ ಜಗದೀಶ್ ನಿಧನರಾಗಿದ್ದರು ಎಂಬ ಮಾಹಿತಿ ಸಿಕ್ಕಿದೆ. ಜಗದೀಶ್ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ನಿಖರ ಕಾರಣವೇನು ಎಂಬುದು ಬಹಿರಂಗವಾಗಿಲ್ಲ. ಆದರೆ ಮೂಲಗಳ ನೀಡಿರುವ ಮಾಹಿತಿ ಪ್ರಕಾರ, ಈಚೆಗೆ ಆರ್ಥಿಕವಾಗಿ ಜಗದೀಶ್ ತುಂಬ ನಷ್ಟದಲ್ಲಿದ್ದರು ಮತ್ತು ಸಾಕಷ್ಟು ಸಾಲ ಮಾಡಿಕೊಂಡಿದ್ದರು ಎಂಬ ಮಾತುಗಳು ಕೇಳಿಬಂದಿವೆ.
ಚಿತ್ರರಂಗದ ಜೊತೆ ಸೌಂದರ್ಯ ಜಗದೀಶ್ ಒಡನಾಟ ;
ಬಹುತಾರಾಗಣದ 'ಮಸ್ತ್ ಮಜಾ ಮಾಡಿ' ಸಿನಿಮಾವನ್ನು ನಿರ್ಮಾಣ ಮಾಡುವ ಮೂಲಕ ಕನ್ನಡ ಚಿತ್ರರಂಗಕ್ಕೆ ನಿರ್ಮಾಪಕರಾಗಿ ಸೌಂದರ್ಯ ಜಗದೀಶ್ ಎಂಟ್ರಿ ನೀಡಿದರು. ಆನಂತರ ಪುತ್ರನಿಗಾಗಿ 'ಅಪ್ಪು ಪಪ್ಪು' ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಪುತ್ರ ಸ್ನೇಹಿತ್ ಅವರನ್ನು ಚಿತ್ರರಂಗದಲ್ಲಿ ಬೆಳೆಸಬೇಕೆಂಬುದು ಅವರ ಗುರಿ ಆಗಿತ್ತು. ಇದರ ಜೊತೆಗೆ 'ಸ್ನೇಹಿತರು', 'ರಾಮ್ ಲೀಲಾ' ಸಿನಿಮಾಗಳನ್ನು ಕೂಡ ಸೌಂದರ್ಯ ಜಗದೀಶ್ ನಿರ್ಮಾಣ ಮಾಡಿದ್ದರು.
ಈಚೆಗಷ್ಟೇ ಮಗಳ ಮದುವೆ ಮಾಡಿದ್ದ ಜಗದೀಶ್ ;
ಜಗದೀಶ್ ಪುತ್ರಿ ಸೌಂದರ್ಯ ಅವರು ವೃತ್ತಿಯಲ್ಲಿ ವೈದ್ಯೆಯಾಗಿದ್ದು, ಕೆಲ ದಿನಗಳ ಹಿಂದಷ್ಟೇ ಅವರ ಮದುವೆಯನ್ನು ಅದ್ದೂರಿಯಾಗಿ ಮಾಡಿದ್ದರು. ಈ ಮದುವೆಗೆ ಚಿತ್ರರಂಗದ ಗಣ್ಯರು ಆಗಮಿಸಿದ್ದರು. ಆದರೆ ಮಗಳ ಮದುವೆ ಮಾಡಿ, ತಿಂಗಳು ಕಳೆಯುವುದರೊಳಗೆ ಈ ರೀತಿ ಆಗಿರುವುದು ಬೇಸರದ ಸಂಗತಿಯಾಗಿದೆ.
Renowned Kannada film producer Soundarya Jagadish, known for his contributions to the industry through movies like 'Appu Pappu' and 'Snehitaru', tragically passed away, with early reports suggesting a possible suicide. The incident occurred at his residence in Mahalakshmi Layout, Bangalore, leaving the film fraternity and fans in shock.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm