ಬ್ರೇಕಿಂಗ್ ನ್ಯೂಸ್
14-04-24 03:12 pm Bengaluru Correspondent ಸಿನಿಮಾ
ಬೆಂಗಳೂರು, ಏ 14: ಸ್ಯಾಂಡಲ್ವುಡ್ನಲ್ಲಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ನಿರ್ಮಾಪಕ, ಉದ್ಯಮಿ ಸೌಂದರ್ಯ ಜಗದೀಶ್ ಸಾವನ್ನಪ್ಪಿದ್ದಾರೆ. ಮಹಾಲಕ್ಷ್ಮೀ ಲೇಔಟ್ನಲ್ಲಿರುವ ಅವರ ನಿವಾಸದಲ್ಲೇ ಜಗದೀಶ್ ನಿಧನರಾಗಿದ್ದು, ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸೌಂದರ್ಯ ಜಗದೀಶ್ ಅವರ ಸಾವು ಚಿತ್ರೋದ್ಯಮಕ್ಕೆ ಆಘಾತ ನೀಡಿದ್ದು, ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ
ಮಹಾಲಕ್ಷ್ಮೀ ಲೇಔಟ್ನಲ್ಲಿರುವ ತಮ್ಮ ನಿವಾಸದಲ್ಲೇ ಜಗದೀಶ್ ಆತ್ಮಹತ್ಯೆಗೆ ಶರಣಾಗಿದ್ದು, ಕೂಡಲೇ ಅವರನ್ನು ರಾಜಾಜಿನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ, ಅಷ್ಟರಲ್ಲಾಗಲೇ ಜಗದೀಶ್ ನಿಧನರಾಗಿದ್ದರು ಎಂಬ ಮಾಹಿತಿ ಸಿಕ್ಕಿದೆ. ಜಗದೀಶ್ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ನಿಖರ ಕಾರಣವೇನು ಎಂಬುದು ಬಹಿರಂಗವಾಗಿಲ್ಲ. ಆದರೆ ಮೂಲಗಳ ನೀಡಿರುವ ಮಾಹಿತಿ ಪ್ರಕಾರ, ಈಚೆಗೆ ಆರ್ಥಿಕವಾಗಿ ಜಗದೀಶ್ ತುಂಬ ನಷ್ಟದಲ್ಲಿದ್ದರು ಮತ್ತು ಸಾಕಷ್ಟು ಸಾಲ ಮಾಡಿಕೊಂಡಿದ್ದರು ಎಂಬ ಮಾತುಗಳು ಕೇಳಿಬಂದಿವೆ.
ಚಿತ್ರರಂಗದ ಜೊತೆ ಸೌಂದರ್ಯ ಜಗದೀಶ್ ಒಡನಾಟ ;
ಬಹುತಾರಾಗಣದ 'ಮಸ್ತ್ ಮಜಾ ಮಾಡಿ' ಸಿನಿಮಾವನ್ನು ನಿರ್ಮಾಣ ಮಾಡುವ ಮೂಲಕ ಕನ್ನಡ ಚಿತ್ರರಂಗಕ್ಕೆ ನಿರ್ಮಾಪಕರಾಗಿ ಸೌಂದರ್ಯ ಜಗದೀಶ್ ಎಂಟ್ರಿ ನೀಡಿದರು. ಆನಂತರ ಪುತ್ರನಿಗಾಗಿ 'ಅಪ್ಪು ಪಪ್ಪು' ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಪುತ್ರ ಸ್ನೇಹಿತ್ ಅವರನ್ನು ಚಿತ್ರರಂಗದಲ್ಲಿ ಬೆಳೆಸಬೇಕೆಂಬುದು ಅವರ ಗುರಿ ಆಗಿತ್ತು. ಇದರ ಜೊತೆಗೆ 'ಸ್ನೇಹಿತರು', 'ರಾಮ್ ಲೀಲಾ' ಸಿನಿಮಾಗಳನ್ನು ಕೂಡ ಸೌಂದರ್ಯ ಜಗದೀಶ್ ನಿರ್ಮಾಣ ಮಾಡಿದ್ದರು.
ಈಚೆಗಷ್ಟೇ ಮಗಳ ಮದುವೆ ಮಾಡಿದ್ದ ಜಗದೀಶ್ ;
ಜಗದೀಶ್ ಪುತ್ರಿ ಸೌಂದರ್ಯ ಅವರು ವೃತ್ತಿಯಲ್ಲಿ ವೈದ್ಯೆಯಾಗಿದ್ದು, ಕೆಲ ದಿನಗಳ ಹಿಂದಷ್ಟೇ ಅವರ ಮದುವೆಯನ್ನು ಅದ್ದೂರಿಯಾಗಿ ಮಾಡಿದ್ದರು. ಈ ಮದುವೆಗೆ ಚಿತ್ರರಂಗದ ಗಣ್ಯರು ಆಗಮಿಸಿದ್ದರು. ಆದರೆ ಮಗಳ ಮದುವೆ ಮಾಡಿ, ತಿಂಗಳು ಕಳೆಯುವುದರೊಳಗೆ ಈ ರೀತಿ ಆಗಿರುವುದು ಬೇಸರದ ಸಂಗತಿಯಾಗಿದೆ.
Renowned Kannada film producer Soundarya Jagadish, known for his contributions to the industry through movies like 'Appu Pappu' and 'Snehitaru', tragically passed away, with early reports suggesting a possible suicide. The incident occurred at his residence in Mahalakshmi Layout, Bangalore, leaving the film fraternity and fans in shock.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm