ಬ್ರೇಕಿಂಗ್ ನ್ಯೂಸ್
03-12-20 05:32 pm Source: FILMIBEAT Bharath Kumar K ಸಿನಿಮಾ
'ಕೆಜಿಎಫ್ ಚಾಪ್ಟರ್-2' ಸಿನಿಮಾದ ಬಳಿಕ ನಿರ್ದೇಶಕ ಪ್ರಶಾಂತ್ ನೀಲ್ ತೆಲುಗು ನಟ ಪ್ರಭಾಸ್ ಜೊತೆ ಸಿನಿಮಾ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಹೊಂಬಾಳೆ ಫಿಲಂಸ್ ಸಂಸ್ಥೆ ಈ ಚಿತ್ರ ನಿರ್ಮಾಣ ಮಾಡುತ್ತಿದೆ ಎಂದು ಅಧಿಕೃತ ಪಡಿಸಿದೆ. ರಾಕಿಂಗ್ ಸ್ಟಾರ್ ಯಶ್ ಮುಂದಿನ ಸಿನಿಮಾ ಯಾವುದು ಎಂಬ ಪ್ರಶ್ನೆ ಕಾಡುತ್ತಿದೆ. ಪರಭಾಷೆಯ ಸ್ಟಾರ್ ನಿರ್ದೇಶಕರು ಯಶ್ ಅವರ ಕಾಲ್ಶೀಟ್ ಪಡೆಯಲು ಪ್ರಯತ್ನಿಸಿದ್ದು, ಯಶ್ ಮುಂದಿನ ಸಿನಿಮಾ ಪ್ಯಾನ್ ಇಂಡಿಯಾ ಚಿತ್ರವಾಗಲಿದೆ ಎಂದು ಹೇಳಲಾಗಿದೆ. ಆದ್ರೀಗ, ಕನ್ನಡದ ನಿರ್ದೇಶಕರ ಜೊತೆಯೇ ಯಶ್ ತಮ್ಮ ಮುಂದಿನ ಸಿನಿಮಾ ಮಾಡುವ ತಯಾರಿ ನಡೆಸಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.

ನರ್ತನ್ ಜೊತೆ ಯಶ್ ಸಿನಿಮಾ!
'ಮಫ್ತಿ' ಚಿತ್ರದ ಯಶಸ್ಸಿನ ಬಳಿಕ ನಿರ್ದೇಶಕ ನರ್ತನ್ ರಾಕಿಂಗ್ ಸ್ಟಾರ್ ಯಶ್ಗೆ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಚರ್ಚೆಯಲ್ಲಿದೆ. ಈ ಸಂಬಂಧ ನರ್ತನ್ ಮತ್ತು ಯಶ್ ಇಬ್ಬರು ಭೇಟಿ ಮಾಡಿ ಚರ್ಚೆ ನಡೆಸಿದ್ದು, ಸಿದ್ಧತೆ ಸಹ ಮಾಡಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಬಹಿರಂಗವಾಗಿದೆ.

ಪ್ಯಾನ್ ಇಂಡಿಯಾ ಸಿನಿಮಾ!
ಕೆಜಿಎಫ್ ಸ್ಟಾರ್ ಮತ್ತು ನರ್ತನ್ ಕಾಂಬಿನೇಷನ್ನಲ್ಲಿ ಮೂಡಿ ಬರಲಿದೆ ಎಂದು ಹೇಳಲಾಗುತ್ತಿರುವ ಚಿತ್ರ ಪ್ಯಾನ್ ಇಂಡಿಯಾ ಬಿಡುಗಡೆಯಾಗಲಿದೆಯಂತೆ. ಕೆಜಿಎಫ್ ಬಳಿಕ ನ್ಯಾಷನಲ್ ಸ್ಟಾರ್ ಎನಿಸಿಕೊಂಡಿರುವ ಯಶ್ ಅವರ ಇಮೇಜ್ ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ನಟನ ಮೇಲಿದ್ದು ಹಾಗಾಗಿ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಮಾಡುವ ಬಗ್ಗೆ ಆಸಕ್ತಿ ಹೊಂದಿದ್ದಾರೆ.

'ಮಫ್ತಿ' ರೀಮೇಕ್ನಿಂದ ಹೊರಬಂದ ನರ್ತನ್
ರೋರಿಂಗ್ ಸ್ಟಾರ್ ಶ್ರೀಮುರಳಿ ಮತ್ತು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯಲ್ಲಿ ಬಂದಿದ್ದ ಮಫ್ತಿ ಸಿನಿಮಾವನ್ನು ತಮಿಳಿನಲ್ಲಿ ರೀಮೇಕ್ ಮಾಡಲಾಗುತ್ತಿದೆ. ತಮಿಳಿನಲ್ಲಿ ಈ ಚಿತ್ರಕ್ಕೆ ನರ್ತನ್ ಆಕ್ಷನ್ ಕಟ್ ಹೇಳಬೇಕಿತ್ತು. ಆದ್ರೆ, ಅಂತಿಮ ಹಂತದಲ್ಲಿ ನರ್ತನ್ ಈ ಪ್ರಾಜೆಕ್ಟ್ನಿಂದ ಹೊರಬಂದಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm