ಬ್ರೇಕಿಂಗ್ ನ್ಯೂಸ್
03-12-20 05:32 pm Source: FILMIBEAT Bharath Kumar K ಸಿನಿಮಾ
'ಕೆಜಿಎಫ್ ಚಾಪ್ಟರ್-2' ಸಿನಿಮಾದ ಬಳಿಕ ನಿರ್ದೇಶಕ ಪ್ರಶಾಂತ್ ನೀಲ್ ತೆಲುಗು ನಟ ಪ್ರಭಾಸ್ ಜೊತೆ ಸಿನಿಮಾ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಹೊಂಬಾಳೆ ಫಿಲಂಸ್ ಸಂಸ್ಥೆ ಈ ಚಿತ್ರ ನಿರ್ಮಾಣ ಮಾಡುತ್ತಿದೆ ಎಂದು ಅಧಿಕೃತ ಪಡಿಸಿದೆ. ರಾಕಿಂಗ್ ಸ್ಟಾರ್ ಯಶ್ ಮುಂದಿನ ಸಿನಿಮಾ ಯಾವುದು ಎಂಬ ಪ್ರಶ್ನೆ ಕಾಡುತ್ತಿದೆ. ಪರಭಾಷೆಯ ಸ್ಟಾರ್ ನಿರ್ದೇಶಕರು ಯಶ್ ಅವರ ಕಾಲ್ಶೀಟ್ ಪಡೆಯಲು ಪ್ರಯತ್ನಿಸಿದ್ದು, ಯಶ್ ಮುಂದಿನ ಸಿನಿಮಾ ಪ್ಯಾನ್ ಇಂಡಿಯಾ ಚಿತ್ರವಾಗಲಿದೆ ಎಂದು ಹೇಳಲಾಗಿದೆ. ಆದ್ರೀಗ, ಕನ್ನಡದ ನಿರ್ದೇಶಕರ ಜೊತೆಯೇ ಯಶ್ ತಮ್ಮ ಮುಂದಿನ ಸಿನಿಮಾ ಮಾಡುವ ತಯಾರಿ ನಡೆಸಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.

ನರ್ತನ್ ಜೊತೆ ಯಶ್ ಸಿನಿಮಾ!
'ಮಫ್ತಿ' ಚಿತ್ರದ ಯಶಸ್ಸಿನ ಬಳಿಕ ನಿರ್ದೇಶಕ ನರ್ತನ್ ರಾಕಿಂಗ್ ಸ್ಟಾರ್ ಯಶ್ಗೆ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಚರ್ಚೆಯಲ್ಲಿದೆ. ಈ ಸಂಬಂಧ ನರ್ತನ್ ಮತ್ತು ಯಶ್ ಇಬ್ಬರು ಭೇಟಿ ಮಾಡಿ ಚರ್ಚೆ ನಡೆಸಿದ್ದು, ಸಿದ್ಧತೆ ಸಹ ಮಾಡಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಬಹಿರಂಗವಾಗಿದೆ.

ಪ್ಯಾನ್ ಇಂಡಿಯಾ ಸಿನಿಮಾ!
ಕೆಜಿಎಫ್ ಸ್ಟಾರ್ ಮತ್ತು ನರ್ತನ್ ಕಾಂಬಿನೇಷನ್ನಲ್ಲಿ ಮೂಡಿ ಬರಲಿದೆ ಎಂದು ಹೇಳಲಾಗುತ್ತಿರುವ ಚಿತ್ರ ಪ್ಯಾನ್ ಇಂಡಿಯಾ ಬಿಡುಗಡೆಯಾಗಲಿದೆಯಂತೆ. ಕೆಜಿಎಫ್ ಬಳಿಕ ನ್ಯಾಷನಲ್ ಸ್ಟಾರ್ ಎನಿಸಿಕೊಂಡಿರುವ ಯಶ್ ಅವರ ಇಮೇಜ್ ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ನಟನ ಮೇಲಿದ್ದು ಹಾಗಾಗಿ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಮಾಡುವ ಬಗ್ಗೆ ಆಸಕ್ತಿ ಹೊಂದಿದ್ದಾರೆ.

'ಮಫ್ತಿ' ರೀಮೇಕ್ನಿಂದ ಹೊರಬಂದ ನರ್ತನ್
ರೋರಿಂಗ್ ಸ್ಟಾರ್ ಶ್ರೀಮುರಳಿ ಮತ್ತು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯಲ್ಲಿ ಬಂದಿದ್ದ ಮಫ್ತಿ ಸಿನಿಮಾವನ್ನು ತಮಿಳಿನಲ್ಲಿ ರೀಮೇಕ್ ಮಾಡಲಾಗುತ್ತಿದೆ. ತಮಿಳಿನಲ್ಲಿ ಈ ಚಿತ್ರಕ್ಕೆ ನರ್ತನ್ ಆಕ್ಷನ್ ಕಟ್ ಹೇಳಬೇಕಿತ್ತು. ಆದ್ರೆ, ಅಂತಿಮ ಹಂತದಲ್ಲಿ ನರ್ತನ್ ಈ ಪ್ರಾಜೆಕ್ಟ್ನಿಂದ ಹೊರಬಂದಿದ್ದಾರೆ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
24-05-26 09:01 pm
HK News Staffer
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am