ಬ್ರೇಕಿಂಗ್ ನ್ಯೂಸ್
04-12-20 10:47 am Source: FILMIBEAT ಸಿನಿಮಾ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಇತ್ತೀಚಿಗೆ ನಿರ್ದೇಶಕ ಹಾಗೂ ನಟ ರಿಷಬ್ ಶೆಟ್ಟಿಯನ್ನು ಭೇಟಿಯಾಗಿ ಅಚ್ಚರಿ ಮೂಡಿಸಿದ್ದಾರೆ. ರಿಷಬ್ ಶೆಟ್ಟಿ, ಚಾಲೆಂಜಿಂಗ್ ಸ್ಟಾರ್ ಗೆ ಸಿನಿಮಾ ಮಾಡ್ತಿದ್ದಾರಾ? ಸೈಲೆಂಟ್ ಆಗಿ ಸಿನಿಮಾ ಮಾತುಕತೆ ನಡೆಯುತ್ತಿದೆಯಾ? ಎಂದು ಯೋಚಿಸುತ್ತಿದ್ದೀರಾ. ಇಬ್ಬರು ಸಿನಿಮಾ ಮಾಡಿದರೂ ಅಚ್ಚರಿ ಇಲ್ಲ. ರಿಷಬ್ ಶೆಟ್ಟಿ ಮತ್ತು ತಂಡ ಸದ್ಯ ಮೈಸೂರಿನಲ್ಲಿ ಬೀಡುಬಿಟ್ಟಿದೆ. ಹರಿಕಥೆ ಅಲ್ಲ ಗಿರಿಕಥೆ ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಮೈಸೂರಿನಲ್ಲಿ ಭರ್ಜರಿಯಾಗಿ ಚಿತ್ರೀಕರಣ ಮಾಡುತ್ತಿರುವ ತಂಡವನ್ನು ದರ್ಶನ್ ಸಹಜವಾಗಿ ಭೇಟಿಯಾಗಿ ಅಚ್ಚರಿ ಮೂಡಿಸಿದ್ದಾರೆ.
ಸಾಮಾನ್ಯವಾಗಿ ಮೈಸೂರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದರೆ ದರ್ಶನ್ ಚಿತ್ರೀಕರಣ ಸೆಟ್ ಗೆ ಹೋಗಿ ಭೇಟಿಯಾಗಿ ಮಾತುಕತೆ ನಡೆಸುತ್ತಾರೆ. ಚಿತ್ರತಂಡದ ಜೊತೆ ಕಾಲಕಳೆದು ತಂಡಕ್ಕೆ ಶುಭಕೋರಿ ವಾಪಸ್ ಆಗುತ್ತಾರೆ. ಹಾಗೆ ಹರಿಕಥೆ ಅಲ್ಲ ಗಿರಿಕಥೆತಂಡವನ್ನು ಭೇಟಿಯಾಗಿದ್ದಾರೆ. ದರ್ಶನ್ ಮತ್ತು ನಿರ್ಮಾಪಕ ಸಂದೇಶ್ ನಾಗರಾಜ್ ಇಬ್ಬರು ರಿಷಬ್ ಶೆಟ್ಟಿ ಮತ್ತು ತಂಡವನ್ನು ಭೇಟಿಯಾಗಿದ್ದಾರೆ.

ದರ್ಶನ್ ಭೇಟಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಂದಹಾಗೆ ಇತ್ತೀಚಿಗಷ್ಟೆ ಹರಿಕಥೆ ಅಲ್ಲ ಗಿರಿಕಥೆ ಸಿನಿಮಾದಲ್ಲಿ ದೊಡ್ಡ ಬದಲಾವಣೆ ಆಗಿದೆ. ಚಿತ್ರದಿಂದ ನಿರ್ದೇಶಕ ಗಿರಿಕೃಷ್ಣ ಹೊರನಡೆದಿದ್ದಾರೆ. ಅನಾರೋಗ್ಯದ ಕಾರಣ ನಿರ್ದೇಶಕ ಗಿರಿಕೃಷ್ಣ ಸಿನಿಮಾದ ಹೊರನಡೆದಿದ್ದಾರೆ ಎಂದು ಹೇಳಲಾಗುತ್ತಿದೆ.

ಇದೀಗ ಚಿತ್ರಕ್ಕೆ ಹೊಸ ನಿರ್ದೇಶಕರು ಎಂಟ್ರಿ ಕೊಟ್ಟಿದ್ದಾರೆ. ಕರಣ್ ಅನಂತ್ ಮತ್ತು ಅನಿರುದ್ಧ ಮಹೇಶ್ ಇಬ್ಬರು ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ ಎಂದು ಹೇಳಾಗುತ್ತಿದೆ. ರಿಷಬ್ ಶೆಟ್ಟಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಟನೆಯ ಜೊತೆಗೆ ನಿರ್ದೇಶನದಲ್ಲೂ ನಿರತರಾಗಿದ್ದಾರೆ.
This News Article is a Copy of FILMIBEAT
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am