ಬ್ರೇಕಿಂಗ್ ನ್ಯೂಸ್
07-12-20 11:25 am Source: FILMIBEAT ಸಿನಿಮಾ
ಖ್ಯಾತ ನಾಮರ ಹೆಸರನ್ನು ತಮ್ಮ ವೈಯಕ್ತಿಕ ಲಾಭಕ್ಕೆ ವಿಧ-ವಿಧವಾಗಿ ಬಳಸಿಕೊಳ್ಳುವರ ಸಂಖ್ಯೆ ಹೆಚ್ಚಿಗೆ ಇದೆ. ಗಾಂಧಿ ನಗರದಲ್ಲಿಯಂತೂ ಈ ಸಂಖ್ಯೆ ತುಸು ಹೆಚ್ಚೇ.
ನಟ-ನಟಿಯರ ಹೆಸರು ಹೇಳಿಕೊಂಡು ದುಡ್ಡು ಹೊಡೆಯುವುದು, ಮೋಸ ಮಾಡುವುದು ಆಗಾಗ್ಗೆ ಕೇಳಿಬರುತ್ತಲೇ ಇರುತ್ತದೆ. ಸಾಮಾಜಿಕ ಜಾಲತಾಣದ ಮೂಲಕ ನಟ-ನಟಿಯರು ನೇರವಾಗಿ ಜನರೊಂದಿಗೆ ಸಂಪರ್ಕಕ್ಕೆ ಬಂದಿದ್ದಾರಾದರೂ ಆಗೊಮ್ಮೆ-ಈಗೊಮ್ಮೆ ಇಂಥಹಾ ಘಟನೆಗಳು ವರದಿ ಆಗುತ್ತಲೇ ಇರುತ್ತವೆ.
ಇದೀಗ ನಟ ಧನಂಜಯ್ ಹೆಸರು ಬಳಸಿಕೊಂಡು ವಂಚನೆ ನಡೆಸುತ್ತಿರುವ ಘಟನೆ ಗಮನಕ್ಕೆ ಬಂದಿದ್ದು, ಸ್ವತಃ ನಟ ಧನಂಜಯ್ ಇಂಥಹಾ ಸುಳ್ಳುಗಳನ್ನು ನಂಬಬೇಡಿ ಎಂದು ಮನವಿ ಮಾಡಿದ್ದಾರೆ.
'ಧನಂಜಯ್ ನಟಿಸುತ್ತಿರುವ ಹೊಸ ಸಿನಿಮಾದಲ್ಲಿ ನವ ಯುವಕ-ಯುವತಿಯರು ನಟ-ನಟಿಯರಾಗಿ ಬೇಕಾಗಿದ್ದಾರೆ. ಆಸಕ್ತಿ ಇದ್ದವರು ನನಗೆ ಸಂದೇಶ ಕಳುಹಿಸಿ' ಎಂಬ ಪೋಸ್ಟ್ ಒಂದು ಫೇಸ್ಬುಕ್ನಲ್ಲಿ ಹರಿದಾಡುತ್ತಿದೆ. ಆಕಾಶ್ ಗೌಡ ಎಂಬಾತ ಹಾಕಿರುವ ಇಂಥಹುದೇ ಪೋಸ್ಟ್ನ ಸ್ಕ್ರೀನ್ ಶಾಟ್ ಅನ್ನು ಹಂಚಿಕೊಂಡಿರುವ ಡಾಲಿ ಧನಂಜಯ್, 'ಇಂಥಹುಗಳನ್ನು ನಂಬಿ ಮೋಸಹೋಗಬೇಡಿ' ಎಂದು ಬರೆದುಕೊಂಡಿದ್ದಾರೆ.
'ಈ ಥರಹದ ಪೋಸ್ಟ್ಗಳನ್ನು ನಂಬಿ ಮೋಸಹೋಗಬೇಡಿ. ಈ ಥರಹದ ಎರಡು ಮೂರು ಘಟನೆಗಳು ನಮ್ಮ ಗಮನಕ್ಕೆ ಬಂದಿದೆ. ಎಚ್ಚರಿಕೆಯಿಂದಿರಿ, ಏನನ್ನಾದರೂ ನಂಬುವುದಕ್ಕೆ ಮುನ್ನಾ ಹಿಮ್ಮಾಹಿತಿ ಕಲೆಹಾಕಿ, ತುಲನೆಗೆ ಒಳಪಡಿಸಿ' ಎಂದು ಧನಂಜಯ್ ಮನವಿ ಮಾಡಿದ್ದಾರೆ.
ನಿನ್ನೆ ವಿಡಿಯೋ ಒಂದರಲ್ಲಿ ಮಾತನಾಡಿದ್ದ ಮಾಸ್ಟರ್ ಆನಂದ್ ಸಹ ಇಂಥಹುದೇ ವಿಷಯದ ಬಗ್ಗೆ ಮಾತನಾಡಿದ್ದರು. 'ನನ್ನ ಹೆಸರಲ್ಲಿ ಕೆಲವರು ಕಾಸ್ಟಿಂಗ್ ಕಾಲ್ಗಳನ್ನು ನೀಡಿದ್ದಾರೆ. ಆದರೆ ಅಂಥಹುವನ್ನು ನಂಬಬೇಡಿ, ನಾನು ಹೊಸ ಧಾರಾವಾಹಿ ಮಾಡುತ್ತಿದ್ದು, ಅದರ ಕಾಸ್ಟಿಂಗ್ ಕಾಲ್ ಅನ್ನು ನಾನೇ ಕೊಡುತ್ತಿದ್ದೇನೆ' ಎಂದು ಹೇಳಿ ಇಮೇಲ್, ಇತರೆ ಮಾಹಿತಿಗಳನ್ನು ನೀಡಿದ್ದಾರೆ.
This News Article is a Copy of FILMIBEAT
02-02-26 03:02 pm
HK News Desk
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm