ಬ್ರೇಕಿಂಗ್ ನ್ಯೂಸ್
07-12-20 11:25 am Source: FILMIBEAT ಸಿನಿಮಾ
ಖ್ಯಾತ ನಾಮರ ಹೆಸರನ್ನು ತಮ್ಮ ವೈಯಕ್ತಿಕ ಲಾಭಕ್ಕೆ ವಿಧ-ವಿಧವಾಗಿ ಬಳಸಿಕೊಳ್ಳುವರ ಸಂಖ್ಯೆ ಹೆಚ್ಚಿಗೆ ಇದೆ. ಗಾಂಧಿ ನಗರದಲ್ಲಿಯಂತೂ ಈ ಸಂಖ್ಯೆ ತುಸು ಹೆಚ್ಚೇ.
ನಟ-ನಟಿಯರ ಹೆಸರು ಹೇಳಿಕೊಂಡು ದುಡ್ಡು ಹೊಡೆಯುವುದು, ಮೋಸ ಮಾಡುವುದು ಆಗಾಗ್ಗೆ ಕೇಳಿಬರುತ್ತಲೇ ಇರುತ್ತದೆ. ಸಾಮಾಜಿಕ ಜಾಲತಾಣದ ಮೂಲಕ ನಟ-ನಟಿಯರು ನೇರವಾಗಿ ಜನರೊಂದಿಗೆ ಸಂಪರ್ಕಕ್ಕೆ ಬಂದಿದ್ದಾರಾದರೂ ಆಗೊಮ್ಮೆ-ಈಗೊಮ್ಮೆ ಇಂಥಹಾ ಘಟನೆಗಳು ವರದಿ ಆಗುತ್ತಲೇ ಇರುತ್ತವೆ.
ಇದೀಗ ನಟ ಧನಂಜಯ್ ಹೆಸರು ಬಳಸಿಕೊಂಡು ವಂಚನೆ ನಡೆಸುತ್ತಿರುವ ಘಟನೆ ಗಮನಕ್ಕೆ ಬಂದಿದ್ದು, ಸ್ವತಃ ನಟ ಧನಂಜಯ್ ಇಂಥಹಾ ಸುಳ್ಳುಗಳನ್ನು ನಂಬಬೇಡಿ ಎಂದು ಮನವಿ ಮಾಡಿದ್ದಾರೆ.
'ಧನಂಜಯ್ ನಟಿಸುತ್ತಿರುವ ಹೊಸ ಸಿನಿಮಾದಲ್ಲಿ ನವ ಯುವಕ-ಯುವತಿಯರು ನಟ-ನಟಿಯರಾಗಿ ಬೇಕಾಗಿದ್ದಾರೆ. ಆಸಕ್ತಿ ಇದ್ದವರು ನನಗೆ ಸಂದೇಶ ಕಳುಹಿಸಿ' ಎಂಬ ಪೋಸ್ಟ್ ಒಂದು ಫೇಸ್ಬುಕ್ನಲ್ಲಿ ಹರಿದಾಡುತ್ತಿದೆ. ಆಕಾಶ್ ಗೌಡ ಎಂಬಾತ ಹಾಕಿರುವ ಇಂಥಹುದೇ ಪೋಸ್ಟ್ನ ಸ್ಕ್ರೀನ್ ಶಾಟ್ ಅನ್ನು ಹಂಚಿಕೊಂಡಿರುವ ಡಾಲಿ ಧನಂಜಯ್, 'ಇಂಥಹುಗಳನ್ನು ನಂಬಿ ಮೋಸಹೋಗಬೇಡಿ' ಎಂದು ಬರೆದುಕೊಂಡಿದ್ದಾರೆ.
'ಈ ಥರಹದ ಪೋಸ್ಟ್ಗಳನ್ನು ನಂಬಿ ಮೋಸಹೋಗಬೇಡಿ. ಈ ಥರಹದ ಎರಡು ಮೂರು ಘಟನೆಗಳು ನಮ್ಮ ಗಮನಕ್ಕೆ ಬಂದಿದೆ. ಎಚ್ಚರಿಕೆಯಿಂದಿರಿ, ಏನನ್ನಾದರೂ ನಂಬುವುದಕ್ಕೆ ಮುನ್ನಾ ಹಿಮ್ಮಾಹಿತಿ ಕಲೆಹಾಕಿ, ತುಲನೆಗೆ ಒಳಪಡಿಸಿ' ಎಂದು ಧನಂಜಯ್ ಮನವಿ ಮಾಡಿದ್ದಾರೆ.
ನಿನ್ನೆ ವಿಡಿಯೋ ಒಂದರಲ್ಲಿ ಮಾತನಾಡಿದ್ದ ಮಾಸ್ಟರ್ ಆನಂದ್ ಸಹ ಇಂಥಹುದೇ ವಿಷಯದ ಬಗ್ಗೆ ಮಾತನಾಡಿದ್ದರು. 'ನನ್ನ ಹೆಸರಲ್ಲಿ ಕೆಲವರು ಕಾಸ್ಟಿಂಗ್ ಕಾಲ್ಗಳನ್ನು ನೀಡಿದ್ದಾರೆ. ಆದರೆ ಅಂಥಹುವನ್ನು ನಂಬಬೇಡಿ, ನಾನು ಹೊಸ ಧಾರಾವಾಹಿ ಮಾಡುತ್ತಿದ್ದು, ಅದರ ಕಾಸ್ಟಿಂಗ್ ಕಾಲ್ ಅನ್ನು ನಾನೇ ಕೊಡುತ್ತಿದ್ದೇನೆ' ಎಂದು ಹೇಳಿ ಇಮೇಲ್, ಇತರೆ ಮಾಹಿತಿಗಳನ್ನು ನೀಡಿದ್ದಾರೆ.
This News Article is a Copy of FILMIBEAT
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm