ಬ್ರೇಕಿಂಗ್ ನ್ಯೂಸ್
07-12-20 11:25 am Source: FILMIBEAT ಸಿನಿಮಾ
ಖ್ಯಾತ ನಾಮರ ಹೆಸರನ್ನು ತಮ್ಮ ವೈಯಕ್ತಿಕ ಲಾಭಕ್ಕೆ ವಿಧ-ವಿಧವಾಗಿ ಬಳಸಿಕೊಳ್ಳುವರ ಸಂಖ್ಯೆ ಹೆಚ್ಚಿಗೆ ಇದೆ. ಗಾಂಧಿ ನಗರದಲ್ಲಿಯಂತೂ ಈ ಸಂಖ್ಯೆ ತುಸು ಹೆಚ್ಚೇ.
ನಟ-ನಟಿಯರ ಹೆಸರು ಹೇಳಿಕೊಂಡು ದುಡ್ಡು ಹೊಡೆಯುವುದು, ಮೋಸ ಮಾಡುವುದು ಆಗಾಗ್ಗೆ ಕೇಳಿಬರುತ್ತಲೇ ಇರುತ್ತದೆ. ಸಾಮಾಜಿಕ ಜಾಲತಾಣದ ಮೂಲಕ ನಟ-ನಟಿಯರು ನೇರವಾಗಿ ಜನರೊಂದಿಗೆ ಸಂಪರ್ಕಕ್ಕೆ ಬಂದಿದ್ದಾರಾದರೂ ಆಗೊಮ್ಮೆ-ಈಗೊಮ್ಮೆ ಇಂಥಹಾ ಘಟನೆಗಳು ವರದಿ ಆಗುತ್ತಲೇ ಇರುತ್ತವೆ.
ಇದೀಗ ನಟ ಧನಂಜಯ್ ಹೆಸರು ಬಳಸಿಕೊಂಡು ವಂಚನೆ ನಡೆಸುತ್ತಿರುವ ಘಟನೆ ಗಮನಕ್ಕೆ ಬಂದಿದ್ದು, ಸ್ವತಃ ನಟ ಧನಂಜಯ್ ಇಂಥಹಾ ಸುಳ್ಳುಗಳನ್ನು ನಂಬಬೇಡಿ ಎಂದು ಮನವಿ ಮಾಡಿದ್ದಾರೆ.
'ಧನಂಜಯ್ ನಟಿಸುತ್ತಿರುವ ಹೊಸ ಸಿನಿಮಾದಲ್ಲಿ ನವ ಯುವಕ-ಯುವತಿಯರು ನಟ-ನಟಿಯರಾಗಿ ಬೇಕಾಗಿದ್ದಾರೆ. ಆಸಕ್ತಿ ಇದ್ದವರು ನನಗೆ ಸಂದೇಶ ಕಳುಹಿಸಿ' ಎಂಬ ಪೋಸ್ಟ್ ಒಂದು ಫೇಸ್ಬುಕ್ನಲ್ಲಿ ಹರಿದಾಡುತ್ತಿದೆ. ಆಕಾಶ್ ಗೌಡ ಎಂಬಾತ ಹಾಕಿರುವ ಇಂಥಹುದೇ ಪೋಸ್ಟ್ನ ಸ್ಕ್ರೀನ್ ಶಾಟ್ ಅನ್ನು ಹಂಚಿಕೊಂಡಿರುವ ಡಾಲಿ ಧನಂಜಯ್, 'ಇಂಥಹುಗಳನ್ನು ನಂಬಿ ಮೋಸಹೋಗಬೇಡಿ' ಎಂದು ಬರೆದುಕೊಂಡಿದ್ದಾರೆ.
'ಈ ಥರಹದ ಪೋಸ್ಟ್ಗಳನ್ನು ನಂಬಿ ಮೋಸಹೋಗಬೇಡಿ. ಈ ಥರಹದ ಎರಡು ಮೂರು ಘಟನೆಗಳು ನಮ್ಮ ಗಮನಕ್ಕೆ ಬಂದಿದೆ. ಎಚ್ಚರಿಕೆಯಿಂದಿರಿ, ಏನನ್ನಾದರೂ ನಂಬುವುದಕ್ಕೆ ಮುನ್ನಾ ಹಿಮ್ಮಾಹಿತಿ ಕಲೆಹಾಕಿ, ತುಲನೆಗೆ ಒಳಪಡಿಸಿ' ಎಂದು ಧನಂಜಯ್ ಮನವಿ ಮಾಡಿದ್ದಾರೆ.
ನಿನ್ನೆ ವಿಡಿಯೋ ಒಂದರಲ್ಲಿ ಮಾತನಾಡಿದ್ದ ಮಾಸ್ಟರ್ ಆನಂದ್ ಸಹ ಇಂಥಹುದೇ ವಿಷಯದ ಬಗ್ಗೆ ಮಾತನಾಡಿದ್ದರು. 'ನನ್ನ ಹೆಸರಲ್ಲಿ ಕೆಲವರು ಕಾಸ್ಟಿಂಗ್ ಕಾಲ್ಗಳನ್ನು ನೀಡಿದ್ದಾರೆ. ಆದರೆ ಅಂಥಹುವನ್ನು ನಂಬಬೇಡಿ, ನಾನು ಹೊಸ ಧಾರಾವಾಹಿ ಮಾಡುತ್ತಿದ್ದು, ಅದರ ಕಾಸ್ಟಿಂಗ್ ಕಾಲ್ ಅನ್ನು ನಾನೇ ಕೊಡುತ್ತಿದ್ದೇನೆ' ಎಂದು ಹೇಳಿ ಇಮೇಲ್, ಇತರೆ ಮಾಹಿತಿಗಳನ್ನು ನೀಡಿದ್ದಾರೆ.
This News Article is a Copy of FILMIBEAT
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm