ಬ್ರೇಕಿಂಗ್ ನ್ಯೂಸ್
07-12-20 11:25 am Source: FILMIBEAT ಸಿನಿಮಾ
ಖ್ಯಾತ ನಾಮರ ಹೆಸರನ್ನು ತಮ್ಮ ವೈಯಕ್ತಿಕ ಲಾಭಕ್ಕೆ ವಿಧ-ವಿಧವಾಗಿ ಬಳಸಿಕೊಳ್ಳುವರ ಸಂಖ್ಯೆ ಹೆಚ್ಚಿಗೆ ಇದೆ. ಗಾಂಧಿ ನಗರದಲ್ಲಿಯಂತೂ ಈ ಸಂಖ್ಯೆ ತುಸು ಹೆಚ್ಚೇ.
ನಟ-ನಟಿಯರ ಹೆಸರು ಹೇಳಿಕೊಂಡು ದುಡ್ಡು ಹೊಡೆಯುವುದು, ಮೋಸ ಮಾಡುವುದು ಆಗಾಗ್ಗೆ ಕೇಳಿಬರುತ್ತಲೇ ಇರುತ್ತದೆ. ಸಾಮಾಜಿಕ ಜಾಲತಾಣದ ಮೂಲಕ ನಟ-ನಟಿಯರು ನೇರವಾಗಿ ಜನರೊಂದಿಗೆ ಸಂಪರ್ಕಕ್ಕೆ ಬಂದಿದ್ದಾರಾದರೂ ಆಗೊಮ್ಮೆ-ಈಗೊಮ್ಮೆ ಇಂಥಹಾ ಘಟನೆಗಳು ವರದಿ ಆಗುತ್ತಲೇ ಇರುತ್ತವೆ.
ಇದೀಗ ನಟ ಧನಂಜಯ್ ಹೆಸರು ಬಳಸಿಕೊಂಡು ವಂಚನೆ ನಡೆಸುತ್ತಿರುವ ಘಟನೆ ಗಮನಕ್ಕೆ ಬಂದಿದ್ದು, ಸ್ವತಃ ನಟ ಧನಂಜಯ್ ಇಂಥಹಾ ಸುಳ್ಳುಗಳನ್ನು ನಂಬಬೇಡಿ ಎಂದು ಮನವಿ ಮಾಡಿದ್ದಾರೆ.
'ಧನಂಜಯ್ ನಟಿಸುತ್ತಿರುವ ಹೊಸ ಸಿನಿಮಾದಲ್ಲಿ ನವ ಯುವಕ-ಯುವತಿಯರು ನಟ-ನಟಿಯರಾಗಿ ಬೇಕಾಗಿದ್ದಾರೆ. ಆಸಕ್ತಿ ಇದ್ದವರು ನನಗೆ ಸಂದೇಶ ಕಳುಹಿಸಿ' ಎಂಬ ಪೋಸ್ಟ್ ಒಂದು ಫೇಸ್ಬುಕ್ನಲ್ಲಿ ಹರಿದಾಡುತ್ತಿದೆ. ಆಕಾಶ್ ಗೌಡ ಎಂಬಾತ ಹಾಕಿರುವ ಇಂಥಹುದೇ ಪೋಸ್ಟ್ನ ಸ್ಕ್ರೀನ್ ಶಾಟ್ ಅನ್ನು ಹಂಚಿಕೊಂಡಿರುವ ಡಾಲಿ ಧನಂಜಯ್, 'ಇಂಥಹುಗಳನ್ನು ನಂಬಿ ಮೋಸಹೋಗಬೇಡಿ' ಎಂದು ಬರೆದುಕೊಂಡಿದ್ದಾರೆ.
'ಈ ಥರಹದ ಪೋಸ್ಟ್ಗಳನ್ನು ನಂಬಿ ಮೋಸಹೋಗಬೇಡಿ. ಈ ಥರಹದ ಎರಡು ಮೂರು ಘಟನೆಗಳು ನಮ್ಮ ಗಮನಕ್ಕೆ ಬಂದಿದೆ. ಎಚ್ಚರಿಕೆಯಿಂದಿರಿ, ಏನನ್ನಾದರೂ ನಂಬುವುದಕ್ಕೆ ಮುನ್ನಾ ಹಿಮ್ಮಾಹಿತಿ ಕಲೆಹಾಕಿ, ತುಲನೆಗೆ ಒಳಪಡಿಸಿ' ಎಂದು ಧನಂಜಯ್ ಮನವಿ ಮಾಡಿದ್ದಾರೆ.
ನಿನ್ನೆ ವಿಡಿಯೋ ಒಂದರಲ್ಲಿ ಮಾತನಾಡಿದ್ದ ಮಾಸ್ಟರ್ ಆನಂದ್ ಸಹ ಇಂಥಹುದೇ ವಿಷಯದ ಬಗ್ಗೆ ಮಾತನಾಡಿದ್ದರು. 'ನನ್ನ ಹೆಸರಲ್ಲಿ ಕೆಲವರು ಕಾಸ್ಟಿಂಗ್ ಕಾಲ್ಗಳನ್ನು ನೀಡಿದ್ದಾರೆ. ಆದರೆ ಅಂಥಹುವನ್ನು ನಂಬಬೇಡಿ, ನಾನು ಹೊಸ ಧಾರಾವಾಹಿ ಮಾಡುತ್ತಿದ್ದು, ಅದರ ಕಾಸ್ಟಿಂಗ್ ಕಾಲ್ ಅನ್ನು ನಾನೇ ಕೊಡುತ್ತಿದ್ದೇನೆ' ಎಂದು ಹೇಳಿ ಇಮೇಲ್, ಇತರೆ ಮಾಹಿತಿಗಳನ್ನು ನೀಡಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm