ಬ್ರೇಕಿಂಗ್ ನ್ಯೂಸ್
09-12-20 11:04 am Headline Karnataka News Network ಸಿನಿಮಾ
ತಮಿಳುನಾಡು. ಡಿ.9: 2020 ನಿಜಕ್ಕೂಕರಾಳ ವರ್ಷವಾಗಿ ಬದಲಾಗಿದೆ. ಒಂದು ಕಡೆ ಕೊರೋನಾ ಸೋಂಕಿನ ಭೀತಿ ಮತ್ತೊಂದು ಕಡೆ ಸಾವುಗಳ ಸರಣಿ. ಅದರಲ್ಲೂ ಸಿನಿ ರಂಗದಲ್ಲಂತೂ ತುಂಬಾ ಮಂದಿ ಅಗಲುತ್ತಿದ್ದಾರೆ. ಬಣ್ಣದ ಲೋಕದಲ್ಲಿ ಸಾವುಗಳ ಸರಣಿ ಮುಂದುವರೆಯುತ್ತಲೇ ಇದೆ. ಒಂದರ ಹಿಂದೆ ಒಂದರಂತೆ ಕಲಾವಿದರ ಸಾವಿನ ಸುದ್ದಿ ಸಿನಿಪ್ರಿಯರಿಗೆ ಆಘಾತ ನೀಡುತ್ತಲೇ ಇದೆ. ಸುಶಾಂತ್ ಸಿಂಗ್ ರಜಪೂತ್, ರಿಷಿ ಕಪೂರ್, ಬಾಲಸುಬ್ರಹ್ಮಣ್ಯಂ, ಬುಲೆಟ್ ಪ್ರಕಾಶ್, ಮಧು ಮೈಕೆಲ್, ಇರ್ಫಾನ್ ಖಾನ್ ಹೀಗೆ ಹಲವಾರು ಮಂದಿ ಅಗಲಿದ್ದಾರೆ. ಈಗ ಖ್ಯಾತ ಕಿರುತೆರೆ ನಟಿಯೊಬ್ಬರು ತಮಿಳುನಾಡಿನ ಹೋಟೆಲ್ ಒಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಹೌದು, ತಮಿಳಿನ ಕಿರುತೆರೆಯಲ್ಲಿ ಇತ್ತೀಚೆಗೆ ಖ್ಯಾತಿ ಪಡೆದಿದ್ದ ನಟಿ ಚಿತ್ರಾ ಈಗ ಸಾವನ್ನಪ್ಪಿದ್ದಾರೆ. ಪಾಂಡಿಯನ್ ಸ್ಟೋರ್ಸ್ ಖ್ಯಾತಿಯ ನಟಿ ಚಿತ್ರಾ ತಮಿಳುನಾಡಿನ ಹೋಟೆಲ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಅವರ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಸಿಕ್ಕಿದೆ.
ಚಿತ್ರಾ ಅವರು ಪಾಂಡಿಯನ್ ಸ್ಟೋರ್ಸ್ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಇದರಿಂದಾಗಿಯೇ ಇತ್ತೀಚೆಗೆ ಖ್ಯಾತಿ ಪಡೆದಿದ್ದರು. ಅಲ್ಲದೆ ಉದ್ಯಮಿ ಹೇಮಂತ್ ರವಿ ಎಂಬುವರೊಂದಿಗೆ ನಿಶ್ಚಿತಾರ್ಥ ಸಹ ನಿಗದಿಯಾಗಿತ್ತು. ಹಿರಿಯರ ಸಮ್ಮತಿ ಮೇರೆಗೆ ಈ ಜೋಡಿಯ ನಿಶ್ವಿತಾರ್ಥವನ್ನು ಜನವರಿಯಲ್ಲಿ ನಡೆಸಲು ನಿರ್ಧರಿಸಲಾಗಿತ್ತಂತೆ.
ಹೇಮಂತ್ ರವಿ ಅವರೊಂದಿಗೆ ಹೋಟೆಲ್ನಲ್ಲಿರುವಾಗಲೇ ಈ ಘಟನೆ ನಡೆದಿದೆ. ಹೇಮಂತ್ ಅವರೊಂದಿಗೆ ಹೋಟೆಲ್ನಲ್ಲಿದ್ದ ಚಿತ್ರಾ, ಬೆಳಿಗ್ಗೆ ಇವಿಪಿ ಪಾರ್ಕ್ನಲ್ಲಿ ಮೊದಲ ಶೆಡ್ಯೂಲ್ ಶೂಟಿಂಗ್ ಮುಗಿಸಿಕೊಂಡು ಹೋಟೆಲ್ ರೂಮಿಗೆ ಬಂದಿದ್ದರಂತೆ. ನಂತರ ಸ್ನಾನಕ್ಕೆ ಹೋಗುವುದಾಗಿ ಹೇಮಂತ್ ಅವರಿಗೆ ಹೇಳಿ ಹೋದ ಚಿತ್ರಾ, ತುಂಬಾ ಸಮಯವಾದರೂ ಬಾಗಿಲು ತೆಗೆಯಲಿಲ್ಲವಂತೆ. ಇದರಿಂದಾಗಿ ಗಾಬರಿಗೊಂಡ ಹೇಮಂತ್ ಹೋಟೆಲ್ ಸಿಬ್ಬಂದಿಯನ್ನು ಕರೆಸಿ, ಡುಪ್ಲಿಕೇಟ್ ಕೀಯಿಂದ ಬಾಗಿಲು ತೆರೆಸಿದ್ದಾರೆ ಎನ್ನಲಾಗಿದೆ.
ಹೋಟೆಲ್ ಸಿಬ್ಬಂದಿ ಬಾಗಿಲು ತೆರೆದಾಗ ಚಿತ್ರಾ ಅವರ ದೇಹ ನೇಣು ಬಿಗಿದ ಸ್ಥಿತಿಯಲ್ಲಿತ್ತು ಎಂದು ಹೇಳಲಾಗಿದೆ. ಚಿತ್ರಾ ಸೀರೆಯಿಂದ ಫ್ಯಾನ್ಗೆ ನೇಣು ಹಾಕಿಕೊಂಡಿದ್ದು, ಅವರದ್ದು ಆತ್ಮಹತ್ಯೆ ಎಂದು ಶಂಕಿಸಲಾಗುತ್ತಿದೆ.
29 ವರ್ಷದ ನಟಿ ಚಿತ್ರಾ ನಿನ್ನೆವರೆಗೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದರು. ನಿನ್ನೆ ಸಂಜೆ ಸಹ ತಮ್ಮ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಯುವ ನಟಿಯ ಅಗಲಿಕೆ ಅಭಿಮಾನಿಗಳಿಗೆ ಹಾಗೂ ಸಹ ನಟರಿಗೆ ನಿಜಕ್ಕೂ ಆಘಾತ ಉಂಟು ಮಾಡಿದೆ. ಚಿತ್ರಾ ನಟನೆ ಆರಂಭಿಸುವ ಮೊದಲು ನಿರೂಪಕಿಯಾಗಿ ಕಿರುತೆರೆಗೆ ಪರಿಚಯವಾದವರು. ಇವರ ತಂದೆ ಕಾಮರಾಜ್ ನಿವೃತ್ತ ಪೊಲೀಸ್ ಅಧಿಕಾರಿ. ಇವರ ಅಣ್ಣ ಪೊಲೀಸ್ ಕಾನ್ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm