ಬ್ರೇಕಿಂಗ್ ನ್ಯೂಸ್
09-12-20 12:01 pm Headline Karnataka News Network ಸಿನಿಮಾ
ಬೆಂಗಳೂರು, ಡಿ.9: ಕನ್ನಡ ಕಿರುತೆರೆಯ ರಿಯಾಲಿಟಿ ಶೋ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ಬಿಗ್ ಬಾಸ್ ಕೊರೋನಾ ಎಫೆಕ್ಟ್ ನಿಂದ ವಿಳಂಬವಾಗಿದ್ದು ಸಂಕ್ರಾಂತಿ ಬಳಿಕ ಮತ್ತೆ ಒಂಟಿ ಮನೆ ಆಟ ಆರಂಭವಾಗುವ ಮುನ್ಸೂಚನೆ ಸಿಕ್ಕಿದೆ. ಹೌದು, ಅತ್ಯಂತ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಈ ಬಾರಿ ನಡೆಯುತ್ತೋ ಇಲ್ಲವೋ ಎಂಬ ಗೊಂದಲದಲ್ಲಿತ್ತು. ಮಹಾಮಾರಿ ಕೊರೋನಾ ಆ ರೀತಿ ಸ್ಥಿತಿಯನ್ನು ನಿರ್ಮಾಣ ಮಾಡಿತ್ತು. ಆದರೆ ಈ ಎಲ್ಲ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಈಗಾಗಲೇ ಕಲರ್ಸ್ ಕನ್ನಡದ ಬಿಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಬಿಗ್ ಬಾಸ್ ಸೀಸನ್ 8 ತಯಾರಿ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ. ಹೀಗಾಗಿ ಅಕ್ಟೋಬರ ಮಧ್ಯಭಾಗದಲ್ಲಿ ಆರಂಭವಾಗಬೇಕಿದ್ದ ಶೋ ಜನವರಿ ಮಧ್ಯಭಾಗದಲ್ಲಿ ಶುರುವಾಗಲಿದೆ.
ಈಗಾಗಲೇ ಬಿಗ್ ಬಾಸ್ ಸೀಸನ್ 8 ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ಕೂಡ ಸಿಕ್ಕಿದೆ ಎಂದು ಹೇಳಲಾಗಿದೆ. ಇದರ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಈ ಬಾರಿ ದೊಡ್ಡ ಮನೆಗೆ ಹೋಗುವವರ ಕೆಲವೊಂದು ಹೆಸರು ಬೇಜಾನ್ ಹರಿದಾಡುತ್ತಿದೆ.ಇತ್ತ ಬೆಂಗಳೂರಿನ ಬಿಡದಿ ಬಳಿಯ ಇನ್ನೋವೆಟಿವ್ ಫಿಲ್ಮ್ ಸಿಟಿಯಲ್ಲಿ ಬಿಗ್ ಬಾಸ್ ಮನೆಯನ್ನು ಹೊಸದಾಗಿ ಕಟ್ಟಲಾಗುತ್ತಿದ್ದು ಬಹುತೇಕ ಎಲ್ಲ ಕಾರ್ಯಗಳು ಪೂರ್ಣಗೊಂಡಿವೆಯಂತೆ. ಅಲ್ಲದೆ ಈ ಬಾರಿ ವಿಶೇಷವಾಗಿ ಮನೆಯನ್ನು ಸಿದ್ಧಗೊಳಿಸಲಾಗುತ್ತಿದೆ.
ಜೊತೆಗೆ ಕ್ಯಾಮರಾಗಳನ್ನು ಫಿಕ್ಸ್ ಮಾಡುವ ಕೆಲಸವೂ ಆರಂಭಗೊಳ್ಳುತ್ತಿದೆ. ಮನೆಯೊಳಗೆ ಕೆಲವು ತಾಂತ್ರಿಕ ಕೆಲಸಗಳನ್ನು ಮಾಡಲಾಗುತ್ತಿದೆ. ಡಿಸೆಂಬರ್ ಅಂತ್ಯದ ಹೊತ್ತಿಗೆ ಎಲ್ಲ ಕೆಲಸ ಪೂರ್ಣಗೊಂಡು ಬಿಗ್ ಬಾಸ್ ಮನೆ ಸಂಪೂರ್ಣ ಸಜ್ಜಾಗಲಿದೆ.
ಬಿಗ್ ಬಾಸ್ ಸೀಸನ್ 8ರಲ್ಲಿ ಸೆಲೆಬ್ರಿಟಿಗಳು ಮಾತ್ರ ಇರ್ತಾರಾ ಅಥವಾ ಕಾಮನ್ ವ್ಯಕ್ತಿಗಳೂ ಇರ್ತಾರಾ, ಗೊತ್ತಿಲ್ಲ. ಆದರೆ, ಕೆಲವೊಂದು ಪರಿಚಿತ ಮುಖಗಳನ್ನೂ ನೋಡಬಹುದು.
ಪ್ರಮುಖವಾಗಿ ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ನಟ ಆರ್ಯವರ್ಧನ್, ನ್ಯೂಸ್ ರೀಡರ್ ರಾಧಾ ಹಿರೇಗೌಡರ್, ದಿವ್ಯಾ, ಡ್ರೋನ್ ಪ್ರತಾಪ್, ಟಿಕ್ ಟಾಕ್ ಚೆಲುವೆ ಸೋನು ಗೌಡ, ಬಿಂದು ಗೌಡ ಸೇರಿದಂತೆ ಸೋಷಿಯಲ್ ಮೀಡಿಯಾದಲ್ಲಿ ಹೆಸರು ಮಾಡಿದವರ ಅನೇಕ ಹೆಸರು ಕೇಳಿಬರುತ್ತಿವೆ. ಆದರೆ, ಇದು ಎಷ್ಟರ ಮಟ್ಟಿಗೆ ನಿಜ ಎಂಬುದು ತಿಳಿದಿಲ್ಲ.
ಈಗಾಗಲೇ ಬಿಗ್ ಬಾಸ್ ತೆಲುಗು, ತಮಿಳು, ಹಿಂದಿ ಬಿಗ್ ಬಾಸ್ ಶೋಗಳು ಆರಂಭಗೊಂಡಿದ್ದು, ಪ್ರೇಕ್ಷಕರನ್ನು ಮನರಂಜಿಸುತ್ತಿದೆ. ಕೊರೋನಾ ಮಧ್ಯೆ ಸರಿಯಾದ ಕ್ರಮಗಳನ್ನು ಕೈಗೊಂಡು ಮತ್ತು ಸುರಕ್ಷಿತವಾಗಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಮೊನ್ನೆಯಷ್ಟೆ ಕಿಚ್ಚ ಸುದೀಪ್ ತೆಲುಗು ಬಿಗ್ ಬಾಸ್ಗೆ ಎಂಟ್ರಿ ಕೊಟ್ಟು ಸಂಚಲನ ಸೃಷ್ಟಿಸಿದ್ದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm