ಬ್ರೇಕಿಂಗ್ ನ್ಯೂಸ್
10-12-20 11:46 am Source: FILMIBEAT Shruthi Gk ಸಿನಿಮಾ
ತಮಿಳುನಾಡು, ಡಿ.10: ತಮಿಳು ಕಿರುತೆರೆ ಲೋಕದ ಜನಪ್ರಿಯ ನಟಿ ವಿಜೆ ಚಿತ್ರಾ ಆತ್ಮಹತ್ಯೆ ಬಳಿಕ ಗುಟ್ಟಾಗಿ ಮದುವೆಯಾಗಿದ್ದ ವಿಚಾರ ಸದ್ದು ಮಾಡುತ್ತಿದೆ. ಚೈತ್ರಾ ಉದ್ಯಮಿ ಹೇಮಂತ್ ಕುಮಾರ್ ಜೊತೆ ರಹಸ್ಯವಾಗಿ ಮದುವೆಯಾಗಿದ್ದರು ಎನ್ನುವ ವಿಚಾರ ತನಿಖೆ ವೇಳೆ ಬಹಿರಂಗವಾಗಿದೆ. 28 ವರ್ಷದ ಚಿತ್ರಾ ಚೆನ್ನೈನ ನಜರೆತ್ ಪೆಟ್ಟೈನ ಪಂಚತಾರಾ ಹೋಟೆಲ್ ನಲ್ಲಿ ನಿನ್ನೆ (ಡಿ.09) ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಚೈತ್ರಾ ಅವರದ್ದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎನ್ನುವ ಅನುಮಾವ ಸಹ ವ್ಯಕ್ತವಾಗಿದ್ದು, ಚಿತ್ರಾ ತಾಯಿ, ಮಗಳು ಆತ್ಮಹತ್ಯೆ ಮಾಡಿಕೊಳ್ಳುವಂತವಳಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಪೊಲೀಸ್ ತನಿಖೆಯಲ್ಲಿ ಚಿತ್ರಾ ಮದುವೆ ಆಗಿದ್ದರು ಎನ್ನುವ ವಿಚಾರ ಬಹಿರಂಗವಾಗಿದೆ.

ಗುಟ್ಟಾಗಿ ಮದುವೆ ಆಗಿದ್ದ ಚಿತ್ರಾ
ಆಗಸ್ಟ್ ತಿಂಗಳಲ್ಲಿ ನಟಿ ಚಿತ್ರಾ ಉದ್ಯಮಿ ಹೇಮಂತ್ ಎನ್ನುವವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಬಳಿಕ ಇಬ್ಬರು ಒಟ್ಟಿಗೆ ಹೋಟೆಲ್ ನಲ್ಲೇ ವಾಸಿಸುತ್ತಿದ್ದರು. ನಿಶ್ಚಿತಾರ್ಥದ ವಿಚಾರ ಎಲ್ಲರಿಗೂ ಗೊತ್ತಿತ್ತು. ಆದರೀಗ ಪೊಲೀಸ್ ತನಿಖೆ ವೇಳೆ ಇಬ್ಬರು ಗುಟ್ಟಾಗಿ ಮದುವೆ ಕೂಡ ಆಗಿದ್ದರು ಎನ್ನುವ ವಿಚಾರ ಬಯಲಾಗಿದೆ ಅಕ್ಟೋಬರ್ 9ರಂದು ಮದುವೆ ಅಕ್ಟೋಬರ್ 9ರಂದು ಇಬ್ಬರು ಮದುವೆಯಾಗಿದ್ದಾರಂತೆ. ಗುಟ್ಟಾಗಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದ ವಿಚಾರವನ್ನು ಅವರು ಎಲ್ಲಿಯೂ ಬಹಿರಂಗ ಪಡಿಸಲಿಲ್ಲ. ಈ ಬಗ್ಗೆ ಹೇಮಂತ್ ಪೊಲೀಸರಿಗೆ ಮಾಹಿತಿ ನೀಡಿದ್ದು, ರಿಜಿಸ್ಟರ್ ಮ್ಯಾರೇಜ್ ಆಗಿರುವುದಾಗಿ ಹೇಳಿ ಸಾಕ್ಷಿ ಸಹ ನೀಡಿದ್ದಾರಂತೆ.

ಹೇಮಂತ್ ಕುಮಾರ್ ಪ್ರತಿಕ್ರಿಯೆ
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಭಾವಿ ಪತಿ ಹೇಮಂತ್, 'ಚಿತ್ರೀಕರಣ ಮುಗಿಸಿ ವಾಪಸ್ ಆಗಿದ್ದ ಚಿತ್ರಾ ಸ್ನಾನ ಮುಗಿಸಿ ಬರುವುದಾಗಿ ಹೇಳಿ ಹೋದಳು. ತುಂಬಾ ಸಮಯವಾದರೂ ಬರಲಿಲ್ಲ, ಬಳಿಕ ಬಾಗಿಲು ಬಡಿಯಲು ಪ್ರಾರಂಭಿಸಿದೆ. ಬಾಗಿಲು ತೆಗೆಯಲಿಲ್ಲ. ಬಳಿಕ ಹೋಟೆಲ್ ಸಿಬ್ಬಂದಿಗೆ ತಿಳಿಸಿ ನಕಲಿ ಕೀ ಬಳಸಿ ಬಾಗಿಲು ತೆರೆದೆವು. ಚಿತ್ರಾ ನೇಣುಹಾಕಿಕೊಂಡಿದ್ದಳು' ಎಂದಿದ್ದಾರೆ.

ನಟಿ ಮತ್ತು ನಿರೂಪಕಿಯಾಗಿ ಖ್ಯಾತಿಗಳಿಸಿರುವ ಚಿತ್ರಾ
ಚಿತ್ರಾ ಹಠಾತ್ ಅಗಲಿಕೆ ಅಭಿಮಾನಿಗಳು, ಸ್ನೇಹಿತರು ಮತ್ತು ಸಹೋದ್ಯೋಗಿಗಳಿಗೆ ಆಘಾತ ವುಂಟಾಗಿದೆ. ಅನೇಕರು ಸಾಮಾಜಿಕ ಜಾಲತಾಣದ ಮೂಲಕ ಸಂತಾಪ ಸೂಚಿಸುತ್ತಿದ್ದಾರೆ. ಚಿತ್ರಾ ಸಾಕಷ್ಟು ಧಾರಾವಾಹಿಗಳಲ್ಲಿ ನಟಿಸುವ ಜೊತೆೆಗೆ ನಿರೂಪಕಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟೀವ್ ಆಗಿದ್ದ ಚಿತ್ರಾ ಸಾಯುವ ಮುನ್ನ ದಿನ ಸುಂದರ ಫೋಟೋವನ್ನು ಹಂಚಿಕೊಂಡಿದ್ದರು.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm