ಬ್ರೇಕಿಂಗ್ ನ್ಯೂಸ್
10-12-20 11:46 am Source: FILMIBEAT Shruthi Gk ಸಿನಿಮಾ
ತಮಿಳುನಾಡು, ಡಿ.10: ತಮಿಳು ಕಿರುತೆರೆ ಲೋಕದ ಜನಪ್ರಿಯ ನಟಿ ವಿಜೆ ಚಿತ್ರಾ ಆತ್ಮಹತ್ಯೆ ಬಳಿಕ ಗುಟ್ಟಾಗಿ ಮದುವೆಯಾಗಿದ್ದ ವಿಚಾರ ಸದ್ದು ಮಾಡುತ್ತಿದೆ. ಚೈತ್ರಾ ಉದ್ಯಮಿ ಹೇಮಂತ್ ಕುಮಾರ್ ಜೊತೆ ರಹಸ್ಯವಾಗಿ ಮದುವೆಯಾಗಿದ್ದರು ಎನ್ನುವ ವಿಚಾರ ತನಿಖೆ ವೇಳೆ ಬಹಿರಂಗವಾಗಿದೆ. 28 ವರ್ಷದ ಚಿತ್ರಾ ಚೆನ್ನೈನ ನಜರೆತ್ ಪೆಟ್ಟೈನ ಪಂಚತಾರಾ ಹೋಟೆಲ್ ನಲ್ಲಿ ನಿನ್ನೆ (ಡಿ.09) ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಚೈತ್ರಾ ಅವರದ್ದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎನ್ನುವ ಅನುಮಾವ ಸಹ ವ್ಯಕ್ತವಾಗಿದ್ದು, ಚಿತ್ರಾ ತಾಯಿ, ಮಗಳು ಆತ್ಮಹತ್ಯೆ ಮಾಡಿಕೊಳ್ಳುವಂತವಳಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಪೊಲೀಸ್ ತನಿಖೆಯಲ್ಲಿ ಚಿತ್ರಾ ಮದುವೆ ಆಗಿದ್ದರು ಎನ್ನುವ ವಿಚಾರ ಬಹಿರಂಗವಾಗಿದೆ.

ಗುಟ್ಟಾಗಿ ಮದುವೆ ಆಗಿದ್ದ ಚಿತ್ರಾ
ಆಗಸ್ಟ್ ತಿಂಗಳಲ್ಲಿ ನಟಿ ಚಿತ್ರಾ ಉದ್ಯಮಿ ಹೇಮಂತ್ ಎನ್ನುವವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಬಳಿಕ ಇಬ್ಬರು ಒಟ್ಟಿಗೆ ಹೋಟೆಲ್ ನಲ್ಲೇ ವಾಸಿಸುತ್ತಿದ್ದರು. ನಿಶ್ಚಿತಾರ್ಥದ ವಿಚಾರ ಎಲ್ಲರಿಗೂ ಗೊತ್ತಿತ್ತು. ಆದರೀಗ ಪೊಲೀಸ್ ತನಿಖೆ ವೇಳೆ ಇಬ್ಬರು ಗುಟ್ಟಾಗಿ ಮದುವೆ ಕೂಡ ಆಗಿದ್ದರು ಎನ್ನುವ ವಿಚಾರ ಬಯಲಾಗಿದೆ ಅಕ್ಟೋಬರ್ 9ರಂದು ಮದುವೆ ಅಕ್ಟೋಬರ್ 9ರಂದು ಇಬ್ಬರು ಮದುವೆಯಾಗಿದ್ದಾರಂತೆ. ಗುಟ್ಟಾಗಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದ ವಿಚಾರವನ್ನು ಅವರು ಎಲ್ಲಿಯೂ ಬಹಿರಂಗ ಪಡಿಸಲಿಲ್ಲ. ಈ ಬಗ್ಗೆ ಹೇಮಂತ್ ಪೊಲೀಸರಿಗೆ ಮಾಹಿತಿ ನೀಡಿದ್ದು, ರಿಜಿಸ್ಟರ್ ಮ್ಯಾರೇಜ್ ಆಗಿರುವುದಾಗಿ ಹೇಳಿ ಸಾಕ್ಷಿ ಸಹ ನೀಡಿದ್ದಾರಂತೆ.

ಹೇಮಂತ್ ಕುಮಾರ್ ಪ್ರತಿಕ್ರಿಯೆ
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಭಾವಿ ಪತಿ ಹೇಮಂತ್, 'ಚಿತ್ರೀಕರಣ ಮುಗಿಸಿ ವಾಪಸ್ ಆಗಿದ್ದ ಚಿತ್ರಾ ಸ್ನಾನ ಮುಗಿಸಿ ಬರುವುದಾಗಿ ಹೇಳಿ ಹೋದಳು. ತುಂಬಾ ಸಮಯವಾದರೂ ಬರಲಿಲ್ಲ, ಬಳಿಕ ಬಾಗಿಲು ಬಡಿಯಲು ಪ್ರಾರಂಭಿಸಿದೆ. ಬಾಗಿಲು ತೆಗೆಯಲಿಲ್ಲ. ಬಳಿಕ ಹೋಟೆಲ್ ಸಿಬ್ಬಂದಿಗೆ ತಿಳಿಸಿ ನಕಲಿ ಕೀ ಬಳಸಿ ಬಾಗಿಲು ತೆರೆದೆವು. ಚಿತ್ರಾ ನೇಣುಹಾಕಿಕೊಂಡಿದ್ದಳು' ಎಂದಿದ್ದಾರೆ.

ನಟಿ ಮತ್ತು ನಿರೂಪಕಿಯಾಗಿ ಖ್ಯಾತಿಗಳಿಸಿರುವ ಚಿತ್ರಾ
ಚಿತ್ರಾ ಹಠಾತ್ ಅಗಲಿಕೆ ಅಭಿಮಾನಿಗಳು, ಸ್ನೇಹಿತರು ಮತ್ತು ಸಹೋದ್ಯೋಗಿಗಳಿಗೆ ಆಘಾತ ವುಂಟಾಗಿದೆ. ಅನೇಕರು ಸಾಮಾಜಿಕ ಜಾಲತಾಣದ ಮೂಲಕ ಸಂತಾಪ ಸೂಚಿಸುತ್ತಿದ್ದಾರೆ. ಚಿತ್ರಾ ಸಾಕಷ್ಟು ಧಾರಾವಾಹಿಗಳಲ್ಲಿ ನಟಿಸುವ ಜೊತೆೆಗೆ ನಿರೂಪಕಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟೀವ್ ಆಗಿದ್ದ ಚಿತ್ರಾ ಸಾಯುವ ಮುನ್ನ ದಿನ ಸುಂದರ ಫೋಟೋವನ್ನು ಹಂಚಿಕೊಂಡಿದ್ದರು.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm