ಬ್ರೇಕಿಂಗ್ ನ್ಯೂಸ್
12-12-20 01:10 pm Source: FILMIBEAT Bharath Kumar K ಸಿನಿಮಾ
ಬೆಂಗಳೂರು, ಡಿ.12: ಕನ್ನಡದ ದಿಗ್ಗಜ ನಟ ವಿಷ್ಣುವರ್ಧನ್ ಅವರನ್ನು ನಿಂದಿಸಿರುವ ತೆಲುಗು ನಟನ ವಿರುದ್ಧ ವಿಷ್ಣು ಸೇನಾ ಸಮತಿ ಸಿಡಿದೆದ್ದಿದೆ. ವಿಷ್ಣುದಾದ ಗೌರವಕ್ಕೆ ಧಕ್ಕೆ ಬರುವಂತೆ ಸಂದರ್ಶನದಲ್ಲಿ ಹೇಳಿಕೆ ನೀಡಿರುವ ನಟನ ವಿರುದ್ಧ ಕನ್ನಡಿಗರು ಭಾರಿ ಆಕ್ರೋಶ ಹೊರಹಾಕಿದ್ದಾರೆ. ಕನ್ನಡದ ಹಿರಿಯ ನಟ ಜಗ್ಗೇಶ್, ಅನಿರುದ್ಧ್, ಪ್ರಥಮ್ ಸೇರಿದಂತೆ ಕನ್ನಡ ಪರ ಹೋರಾಟಗಾರರು ಸಹ ವಿಜಯ್ ರಂಗರಾಜು ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ಸಂಬಂಧ ಈಗಾಗಲೇ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಿಸಿರುವ ವಿಷ್ಣು ಸೇನಾ ಸಮಿತಿ ಈಗ ಕಾನೂನು ಹೋರಾಟಕ್ಕೆ ಮುಂದಾಗಿದೆ.

ವಿಷ್ಣು ಸೇನೆಯಿಂದ ಕಾನೂನು ಹೋರಾಟ
ಕನ್ನಡದ ಯಜಮಾನನ ಬಗ್ಗೆ ಅವಹೇಳನಕಾರಿಯಾಗಿ ನಿಂದಿಸಿರುವ ನಟನ ವಿರುದ್ಧ ವಿಷ್ಣು ಸೇನೆ ಸಮತಿ ಕಾನೂನು ಹೋರಾಟಕ್ಕೆ ತೀರ್ಮಾನಿಸಿದ್ದು, ಸರಣಿ ದೂರುಗಳನ್ನು ದಾಖಲಿಸಲು ಕರೆ ನೀಡಿದೆ. ನಿಮ್ಮ ನಿಮ್ಮ ಏರಿಯಾದ ಪೊಲೀಸ್ ಠಾಣೆಯಲ್ಲಿ ತೆಲುಗು ನಟನ ವಿರುದ್ಧ ದಾಖಲಿಸಿ ಎಂದು ವಿಷ್ಣು ಸೇನೆ ಮನವಿ ಮಾಡಿದೆ. ಈ ಕುರಿತು ವಿಷ್ಣು ಸೇನೆ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಫೇಸ್ಬುಕ್ನಲ್ಲಿ ವಿವರವಾಗಿ ತಿಳಿಸಿ ಕೇಳಿಕೊಂಡಿದ್ದಾರೆ.
ಆ ವ್ಯಕ್ತಿಯ ನೆಮ್ಮದಿ ಹಾಳು ಮಾಡುವುದರಲ್ಲಿ ತಪ್ಪೇನಿಲ್ಲ
''ದೇವರಂತಹ ಯಜಮಾನ್ರ ಮೇಲೆ ಆರೋಪ ಮಾಡಿದ ವ್ಯಕ್ತಿಯ ನೆಮ್ಮದಿ ಹಾಳು ಮಾಡುವುದು ತಪ್ಪೇನಲ್ಲ. ಆದ್ದರಿಂದ ನಿಮ್ಮ ನಿಮ್ಮ ಏರಿಯಾದ ಪೊಲೀಸ್ ಸ್ಟೇಶನ್ಗಳಿಗೆ ಹೋಗಿ ಆತನ ವಿರುದ್ಧ ಒಂದು ದೂರು ಕೊಡಿ. ನಿಮ್ಮದು ಯಾವುದೇ ಸಂಘವಾಗಿದ್ದರೂ ಅಥವಾ ಸಂಘ ಇಲ್ಲದಿದ್ದರೂ ದೂರು ಕೊಡಲು ಅಡ್ಡಿಯೇನಿಲ್ಲ. ನಾನು ಮತ್ತು ವಕೀಲರು ಅದಕ್ಕೆ ಬೇಕಾದ ಡ್ರಾಫ್ಟ್ ರೆಡಿ ಮಾಡುತ್ತಿದ್ದೇವೆ. ಅದನ್ನು ನಿಮ್ಮೊಂದಿಗೆ ಮಧ್ಯಾಹ್ನದೊಳಗೆ ಹಂಚಿಕೊಳ್ಳುವೆ'' ಎಂದು ಮಾಹಿತಿ ನೀಡಿದ್ದಾರೆ.

ದೂರಿನ ಪ್ರತಿಯನ್ನು ಫಿಲಂ ಚೇಂಬರ್ಗೆ ಕಳುಹಿಸಿ
''ಆ ಡ್ರಾಫ್ಟ್ ನೋಡಿದ ಮೇಲೆ ದೂರು ಯಾವತರ ದಾಖಲಿಸಬೇಕು ಎಂಬುದೊಂದು ಐಡಿಯಾ ನಿಮಗೆ ಬರಬಹುದು. ಅಥವಾ ಡ್ರಾಫ್ಟ್ ಇಲ್ಲದೆಯೂ ದೂರು ದಾಖಲಿಸುವ ಕ್ರಮ ನಿಮಗೇ ಗೊತ್ತಿರಬಹುದು. ಆದ್ದರಿಂದ ಎಷ್ಟು ಸಾಧ್ಯವೋ ಅಷ್ಟು ದೂರು ದಾಖಲಿಸೋಣ. ದೂರು ದಾಖಲಾದ ಮೇಲೆ ಅದರ ಒಂದೊಂದು ಪ್ರತಿಯನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಕಳಿಸುವುದು ಮರೆಯಬೇಡಿ. ಇಷ್ಟು ಮಾತ್ರ ಮಾಡಬಹುದಲ್ವಾ?'' ಎಂದು ವಿಶೇಷ ರೀತಿಯಲ್ಲಿ ಹೋರಾಟಕ್ಕೆ ವಿಷ್ಣು ಸೇನೆ ಹೆಜ್ಜೆ ಇಟ್ಟಿದೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm