ಬ್ರೇಕಿಂಗ್ ನ್ಯೂಸ್
14-12-20 05:58 pm Source: FILMIBEAT Manjunatha C ಸಿನಿಮಾ
ಹಲವು ಜನಪ್ರಿಯ ಹಿಂದಿ ಧಾರಾವಾಹಿಗಳಲ್ಲಿ ನಟಿಸಿರುವ ಹಾಗೂ ಬಿಗ್ಬಾಸ್ ವಿನ್ನರ್ ಸಹ ಆಗಿರುವ ಸಿದ್ಧಾರ್ಥ್ ಶುಕ್ಲಾ ಕುಡಿದು ರಸ್ತೆಯಲ್ಲಿ ಗಲಾಟೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಎರಡು ದಿನ ಹಿಂದೆ (ಡಿಸೆಂಬರ್ 12) ರಂದು ಹುಟ್ಟುಹಬ್ಬ ಆಚರಿಸಿಕೊಂಡ ಸಿದ್ಧಾರ್ಥ್, ಅದೇ ದಿನ ತಡರಾತ್ರಿ ಮುಂಬೈನ ಏರಿಯಾವೊಂದರಲ್ಲಿ ಸಿದ್ಧಾರ್ಥ್ ಹಾಗೂ ಅವರ ಗೆಳೆಯರು ಕುಡಿದು ಬಡ ವ್ಯಕ್ತಿಯೊಬ್ಬನನ್ನು ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿರುವಂತೆ, ಕಾರಿನಲ್ಲಿ ಕೂತಿರುವ ಸಿದ್ಧಾರ್ಥ್ ಶುಕ್ಲಾ ಅವರಿಗೆ ಕೇಳುತ್ತಿದ್ದಾನೆ, 'ಕುಡಿದು, ಬಡ ವ್ಯಕ್ತಿಯೊಬ್ಬನಿಗೆ ಹೊಡೆದಿದ್ದೀರಲ್ಲವೆ, ಸರಿ ಬಿಡಿ ನಿಮಗೆ ಒಳ್ಳೆಯದಾಗಲಿ' ಎಂದಿದ್ದಾನೆ.
ಕಾರಿನಲ್ಲಿ ಕೂತಿದ್ದ ಸಿದ್ಧಾರ್ಥ್ ಶುಕ್ಲಾ, ವಿಡಿಯೋ ಮಾಡುತ್ತಿದ್ದ ವ್ಯಕ್ತಿಯಿಂದ ಮೊಬೈಲ್ ಕಿತ್ತುಕೊಳ್ಳಲು ಯತ್ನಿಸಿದ್ದಾರೆ. ಜೊತೆಗೆ 'ಆ ವ್ಯಕ್ತಿ ನನಗೆ ಚಾಕು ತೋರಿಸಿದ' ಎಂದು ಹೇಳುತ್ತಾರೆ. ಅಷ್ಟರಲ್ಲಿ ಮತ್ತೆ ಸಿದ್ಧಾರ್ಥ್ ಮೊಬೈಲ್ ಕಿತ್ತುಕೊಳ್ಳಲು ಯತ್ನಿಸಿದ್ದಾರೆ, ಅಲ್ಲಿಗೆ ವಿಡಿಯೋ ಎಂಡ್ ಆಗಿದೆ. ಆದರೆ ನಟ ಸಿದ್ಧಾರ್ಥ್ ಬೇರೆಯದೇ ರೀತಿ ಘಟನೆಯನ್ನು ಬಣ್ಣಿಸಿದ್ದು, ತಮ್ಮ ಕಾರಿಗೆ ಗುದ್ದಿದ ವ್ಯಕ್ತಿಗಳನ್ನು ಪ್ರಶ್ನೆ ಮಾಡಿದಾಗ, ಅವರು ಜಗಳಕ್ಕೆ ನಿಂತು ಚಾಕು ತೋರಿಸಿದರು, ನಾವು ಅವರನ್ನು ಬಲಪ್ರಯೋಗಿಸಿ ತಳ್ಳಿ, ಆ ಸ್ಥಳದಿಂದ ಹೊರಟು ನೇರವಾಗಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದೆವು ಎಂದಿದ್ದಾರೆ.
ಅಲ್ಲದೆ, ಗಾಡಿ ಓಡಿಸಬೇಕಾದರೆ, ತಾವು ಕುಡಿದಿರಲಿಲ್ಲ ಎಂದು ಸಹ ಹೇಳಿದ್ದಾರೆ. ಸಿದ್ಧಾರ್ಥ್ ನೀಡಿರುವ ದೂರಿನಂತೆ ಪೊಲೀಸರು ತನಿಖೆ ಆರಂಭಿಸಿದ್ದು, ಸತ್ಯಾಂಶ ಹೊರಬರಬೇಕಿದೆ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
24-05-26 09:01 pm
HK News Staffer
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am