ಬ್ರೇಕಿಂಗ್ ನ್ಯೂಸ್
14-12-20 05:58 pm Source: FILMIBEAT Manjunatha C ಸಿನಿಮಾ
ಹಲವು ಜನಪ್ರಿಯ ಹಿಂದಿ ಧಾರಾವಾಹಿಗಳಲ್ಲಿ ನಟಿಸಿರುವ ಹಾಗೂ ಬಿಗ್ಬಾಸ್ ವಿನ್ನರ್ ಸಹ ಆಗಿರುವ ಸಿದ್ಧಾರ್ಥ್ ಶುಕ್ಲಾ ಕುಡಿದು ರಸ್ತೆಯಲ್ಲಿ ಗಲಾಟೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಎರಡು ದಿನ ಹಿಂದೆ (ಡಿಸೆಂಬರ್ 12) ರಂದು ಹುಟ್ಟುಹಬ್ಬ ಆಚರಿಸಿಕೊಂಡ ಸಿದ್ಧಾರ್ಥ್, ಅದೇ ದಿನ ತಡರಾತ್ರಿ ಮುಂಬೈನ ಏರಿಯಾವೊಂದರಲ್ಲಿ ಸಿದ್ಧಾರ್ಥ್ ಹಾಗೂ ಅವರ ಗೆಳೆಯರು ಕುಡಿದು ಬಡ ವ್ಯಕ್ತಿಯೊಬ್ಬನನ್ನು ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರಸ್ತುತ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿರುವಂತೆ, ಕಾರಿನಲ್ಲಿ ಕೂತಿರುವ ಸಿದ್ಧಾರ್ಥ್ ಶುಕ್ಲಾ ಅವರಿಗೆ ಕೇಳುತ್ತಿದ್ದಾನೆ, 'ಕುಡಿದು, ಬಡ ವ್ಯಕ್ತಿಯೊಬ್ಬನಿಗೆ ಹೊಡೆದಿದ್ದೀರಲ್ಲವೆ, ಸರಿ ಬಿಡಿ ನಿಮಗೆ ಒಳ್ಳೆಯದಾಗಲಿ' ಎಂದಿದ್ದಾನೆ.
ಕಾರಿನಲ್ಲಿ ಕೂತಿದ್ದ ಸಿದ್ಧಾರ್ಥ್ ಶುಕ್ಲಾ, ವಿಡಿಯೋ ಮಾಡುತ್ತಿದ್ದ ವ್ಯಕ್ತಿಯಿಂದ ಮೊಬೈಲ್ ಕಿತ್ತುಕೊಳ್ಳಲು ಯತ್ನಿಸಿದ್ದಾರೆ. ಜೊತೆಗೆ 'ಆ ವ್ಯಕ್ತಿ ನನಗೆ ಚಾಕು ತೋರಿಸಿದ' ಎಂದು ಹೇಳುತ್ತಾರೆ. ಅಷ್ಟರಲ್ಲಿ ಮತ್ತೆ ಸಿದ್ಧಾರ್ಥ್ ಮೊಬೈಲ್ ಕಿತ್ತುಕೊಳ್ಳಲು ಯತ್ನಿಸಿದ್ದಾರೆ, ಅಲ್ಲಿಗೆ ವಿಡಿಯೋ ಎಂಡ್ ಆಗಿದೆ. ಆದರೆ ನಟ ಸಿದ್ಧಾರ್ಥ್ ಬೇರೆಯದೇ ರೀತಿ ಘಟನೆಯನ್ನು ಬಣ್ಣಿಸಿದ್ದು, ತಮ್ಮ ಕಾರಿಗೆ ಗುದ್ದಿದ ವ್ಯಕ್ತಿಗಳನ್ನು ಪ್ರಶ್ನೆ ಮಾಡಿದಾಗ, ಅವರು ಜಗಳಕ್ಕೆ ನಿಂತು ಚಾಕು ತೋರಿಸಿದರು, ನಾವು ಅವರನ್ನು ಬಲಪ್ರಯೋಗಿಸಿ ತಳ್ಳಿ, ಆ ಸ್ಥಳದಿಂದ ಹೊರಟು ನೇರವಾಗಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದೆವು ಎಂದಿದ್ದಾರೆ.
ಅಲ್ಲದೆ, ಗಾಡಿ ಓಡಿಸಬೇಕಾದರೆ, ತಾವು ಕುಡಿದಿರಲಿಲ್ಲ ಎಂದು ಸಹ ಹೇಳಿದ್ದಾರೆ. ಸಿದ್ಧಾರ್ಥ್ ನೀಡಿರುವ ದೂರಿನಂತೆ ಪೊಲೀಸರು ತನಿಖೆ ಆರಂಭಿಸಿದ್ದು, ಸತ್ಯಾಂಶ ಹೊರಬರಬೇಕಿದೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm