ಬ್ರೇಕಿಂಗ್ ನ್ಯೂಸ್
15-12-20 11:37 am Source: FILMIBEAT Mahesh Malnad ಸಿನಿಮಾ
ಚೆನ್ನೈ, ಡಿ. 15: ತಮಿಳು ಕಿರುತೆರೆಯ ಜನಪ್ರಿಯ ನಟಿ ವಿಜೆ ಚಿತ್ರಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರಾ ಅವರ ಪತ್ನಿ ಹೇಮಂತ್ ಬಂಧನವಾಗಿದೆ. ಸೋಮವಾರ ರಾತ್ರಿ ಹೇಮಂತ್ ಬಂಧಿಸಿರುವುದನ್ನು ಎಸಿಪಿ ಸುದರ್ಶನ್ ದೃಢಪಡಿಸಲಾಗಿದೆ. ಚಿತ್ರಾ ಹಾಗೂ ಹೇಮಂತ್ ಕೆಲ ತಿಂಗಳುಗಳ ಹಿಂದಷ್ಟೇ ವಿವಾಹವಾಗಿದ್ದರು. ಚಿತ್ರಾ ಸಾವಿಗೆ ಪತಿ ಹೇಮಂತ್ ಕಾರಣ ಎಂದು ಚಿತ್ರಾ ಅವರ ತಾಯಿ ಆರೋಪಿಸಿದ್ದರು.
ಈ ಕುರಿತಂತೆ ವಿಚಾರಣೆಗೆ ಹಾಜರಾಗಿದ್ದ ಹೇಮಂತ್ ರನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ವಿಜೆ ಚಿತ್ರಾ ನಟನೆ ಕೆಲವು ದೃಶ್ಯಗಳ ಬಗ್ಗೆ ಹೇಮಂತ್ ಆಕ್ಷೇಪ ವ್ಯಕ್ತಪಡಿಸಿ ಜಗಳವಾಡಿದ್ದ ಎಂದು ತಿಳಿದು ಬಂದಿದೆ. ಚಿತ್ರಾ ಆತ್ಮಹತ್ಯೆಗೆ ಶರಣಾದ ದಿನ ಕೂಡಾ ಆಕೆ ಮೇಲೆ ಹಲ್ಲೆ ಮಾಡಿ, ಅಂಥಾ ಸೀನ್ ಗಳಲ್ಲಿ ಏಕೆ ನಟಿಸುತ್ತೀಯಾ ಎಂದು ಪ್ರಶ್ನೆ ಮಾಡಿದ್ದ ಎಂದು ಪೊಲೀಸರು ಹೇಳಿದರು.

ಪಾಂಡಿಯನ್ ಸ್ಟೋರ್ಸ್ ತಮಿಳು ಶೋನಲ್ಲಿ ಕಾಣಿಸಿಕೊಳ್ಳುತ್ತಿದ್ದ 29ವರ್ಷ ವಯಸ್ಸಿನ ವಿಜೆ ಚಿತ್ರಾ ಚೆನ್ನೈನ ನಜರಥ್ ಪೇಟ್ ನಲ್ಲಿರುವ ಹೋಟೆಲ್ ರೂಮೊಂದರಲ್ಲಿ ಡಿಸೆಂಬರ್ 9ರಂದು ಶವವಾಗಿ ಪತ್ತೆಯಾಗಿದ್ದರು.
''ಅಂದು ಮಧ್ಯಾಹ್ನ 1 ಗಂಟೆಗೆ ಹೋಟೆಲ್ ರೂಮಿಗೆ ಬಂದಿದ್ದರು. ಚಿತ್ರೀಕರಣ ಮುಗಿಸಿ ನೇರ ಇಲ್ಲಿಗೆ ಬಂದಿದ್ದಂತೆ ತೋರುತ್ತಿತ್ತು. 3.30ರ ಸುಮಾರಿಗೆ 100 ಸಂಖ್ಯೆ ಡಯಲ್ ಮಾಡಿ ವಿಷಯ ತಿಳಿಸಿದೆ'' ಎಂದು ಹೋಟೆಲ್ ಮ್ಯಾನೇಜರ್ ಹೇಳಿದ್ದಾರೆ. ಚಿತ್ರಾ ಅವರು ಆತ್ಮಹತ್ಯೆ ನಿರ್ಧಾರ ಮಾಡಿದ್ದೇಕೆ ಎಂಬುದು ಇನ್ನೂ ಪತ್ತೆಯಾಗಿಲ್ಲ. ಶೂಟಿಂಗ್ ಮುಗಿದ ಬಳಿಕ ಖುಷಿಯಿಂದಲೆ ತಮ್ಮ ಚಿತ್ರವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು. ''ಹೇಮಂತ್ ನೀಡುತ್ತಿದ್ದ ಕಿರುಕುಳ ಮುಖ್ಯ ಕಾರಣ, ಅವನಿಗೆ ಇವಳು ನಟಿಸುವುದು ಇಷ್ಟವಿರಲಿಲ್ಲ, ಪದೇ ಪದೇ ಹಿಂಸಿಸುತ್ತಿದ್ದ. ಮಂಗಳವಾರ ನನ್ನ ಜೊತೆ ಚೆನ್ನಾಗಿ ಮಾತನಾಡಿದ್ದಳು'' ಎಂದು ಚಿತ್ರಾ ಅವರ ತಾಯಿ ವಿಜಯ ನೊಂದು ನುಡಿದಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm