ಬ್ರೇಕಿಂಗ್ ನ್ಯೂಸ್
15-12-20 11:37 am Source: FILMIBEAT Mahesh Malnad ಸಿನಿಮಾ
ಚೆನ್ನೈ, ಡಿ. 15: ತಮಿಳು ಕಿರುತೆರೆಯ ಜನಪ್ರಿಯ ನಟಿ ವಿಜೆ ಚಿತ್ರಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರಾ ಅವರ ಪತ್ನಿ ಹೇಮಂತ್ ಬಂಧನವಾಗಿದೆ. ಸೋಮವಾರ ರಾತ್ರಿ ಹೇಮಂತ್ ಬಂಧಿಸಿರುವುದನ್ನು ಎಸಿಪಿ ಸುದರ್ಶನ್ ದೃಢಪಡಿಸಲಾಗಿದೆ. ಚಿತ್ರಾ ಹಾಗೂ ಹೇಮಂತ್ ಕೆಲ ತಿಂಗಳುಗಳ ಹಿಂದಷ್ಟೇ ವಿವಾಹವಾಗಿದ್ದರು. ಚಿತ್ರಾ ಸಾವಿಗೆ ಪತಿ ಹೇಮಂತ್ ಕಾರಣ ಎಂದು ಚಿತ್ರಾ ಅವರ ತಾಯಿ ಆರೋಪಿಸಿದ್ದರು.
ಈ ಕುರಿತಂತೆ ವಿಚಾರಣೆಗೆ ಹಾಜರಾಗಿದ್ದ ಹೇಮಂತ್ ರನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ವಿಜೆ ಚಿತ್ರಾ ನಟನೆ ಕೆಲವು ದೃಶ್ಯಗಳ ಬಗ್ಗೆ ಹೇಮಂತ್ ಆಕ್ಷೇಪ ವ್ಯಕ್ತಪಡಿಸಿ ಜಗಳವಾಡಿದ್ದ ಎಂದು ತಿಳಿದು ಬಂದಿದೆ. ಚಿತ್ರಾ ಆತ್ಮಹತ್ಯೆಗೆ ಶರಣಾದ ದಿನ ಕೂಡಾ ಆಕೆ ಮೇಲೆ ಹಲ್ಲೆ ಮಾಡಿ, ಅಂಥಾ ಸೀನ್ ಗಳಲ್ಲಿ ಏಕೆ ನಟಿಸುತ್ತೀಯಾ ಎಂದು ಪ್ರಶ್ನೆ ಮಾಡಿದ್ದ ಎಂದು ಪೊಲೀಸರು ಹೇಳಿದರು.

ಪಾಂಡಿಯನ್ ಸ್ಟೋರ್ಸ್ ತಮಿಳು ಶೋನಲ್ಲಿ ಕಾಣಿಸಿಕೊಳ್ಳುತ್ತಿದ್ದ 29ವರ್ಷ ವಯಸ್ಸಿನ ವಿಜೆ ಚಿತ್ರಾ ಚೆನ್ನೈನ ನಜರಥ್ ಪೇಟ್ ನಲ್ಲಿರುವ ಹೋಟೆಲ್ ರೂಮೊಂದರಲ್ಲಿ ಡಿಸೆಂಬರ್ 9ರಂದು ಶವವಾಗಿ ಪತ್ತೆಯಾಗಿದ್ದರು.
''ಅಂದು ಮಧ್ಯಾಹ್ನ 1 ಗಂಟೆಗೆ ಹೋಟೆಲ್ ರೂಮಿಗೆ ಬಂದಿದ್ದರು. ಚಿತ್ರೀಕರಣ ಮುಗಿಸಿ ನೇರ ಇಲ್ಲಿಗೆ ಬಂದಿದ್ದಂತೆ ತೋರುತ್ತಿತ್ತು. 3.30ರ ಸುಮಾರಿಗೆ 100 ಸಂಖ್ಯೆ ಡಯಲ್ ಮಾಡಿ ವಿಷಯ ತಿಳಿಸಿದೆ'' ಎಂದು ಹೋಟೆಲ್ ಮ್ಯಾನೇಜರ್ ಹೇಳಿದ್ದಾರೆ. ಚಿತ್ರಾ ಅವರು ಆತ್ಮಹತ್ಯೆ ನಿರ್ಧಾರ ಮಾಡಿದ್ದೇಕೆ ಎಂಬುದು ಇನ್ನೂ ಪತ್ತೆಯಾಗಿಲ್ಲ. ಶೂಟಿಂಗ್ ಮುಗಿದ ಬಳಿಕ ಖುಷಿಯಿಂದಲೆ ತಮ್ಮ ಚಿತ್ರವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು. ''ಹೇಮಂತ್ ನೀಡುತ್ತಿದ್ದ ಕಿರುಕುಳ ಮುಖ್ಯ ಕಾರಣ, ಅವನಿಗೆ ಇವಳು ನಟಿಸುವುದು ಇಷ್ಟವಿರಲಿಲ್ಲ, ಪದೇ ಪದೇ ಹಿಂಸಿಸುತ್ತಿದ್ದ. ಮಂಗಳವಾರ ನನ್ನ ಜೊತೆ ಚೆನ್ನಾಗಿ ಮಾತನಾಡಿದ್ದಳು'' ಎಂದು ಚಿತ್ರಾ ಅವರ ತಾಯಿ ವಿಜಯ ನೊಂದು ನುಡಿದಿದ್ದಾರೆ.
This News Article is a Copy of FILMIBEAT
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 08:22 pm
HK News Staffer
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm