ಬ್ರೇಕಿಂಗ್ ನ್ಯೂಸ್
15-12-20 11:37 am Source: FILMIBEAT Mahesh Malnad ಸಿನಿಮಾ
ಚೆನ್ನೈ, ಡಿ. 15: ತಮಿಳು ಕಿರುತೆರೆಯ ಜನಪ್ರಿಯ ನಟಿ ವಿಜೆ ಚಿತ್ರಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರಾ ಅವರ ಪತ್ನಿ ಹೇಮಂತ್ ಬಂಧನವಾಗಿದೆ. ಸೋಮವಾರ ರಾತ್ರಿ ಹೇಮಂತ್ ಬಂಧಿಸಿರುವುದನ್ನು ಎಸಿಪಿ ಸುದರ್ಶನ್ ದೃಢಪಡಿಸಲಾಗಿದೆ. ಚಿತ್ರಾ ಹಾಗೂ ಹೇಮಂತ್ ಕೆಲ ತಿಂಗಳುಗಳ ಹಿಂದಷ್ಟೇ ವಿವಾಹವಾಗಿದ್ದರು. ಚಿತ್ರಾ ಸಾವಿಗೆ ಪತಿ ಹೇಮಂತ್ ಕಾರಣ ಎಂದು ಚಿತ್ರಾ ಅವರ ತಾಯಿ ಆರೋಪಿಸಿದ್ದರು.
ಈ ಕುರಿತಂತೆ ವಿಚಾರಣೆಗೆ ಹಾಜರಾಗಿದ್ದ ಹೇಮಂತ್ ರನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ವಿಜೆ ಚಿತ್ರಾ ನಟನೆ ಕೆಲವು ದೃಶ್ಯಗಳ ಬಗ್ಗೆ ಹೇಮಂತ್ ಆಕ್ಷೇಪ ವ್ಯಕ್ತಪಡಿಸಿ ಜಗಳವಾಡಿದ್ದ ಎಂದು ತಿಳಿದು ಬಂದಿದೆ. ಚಿತ್ರಾ ಆತ್ಮಹತ್ಯೆಗೆ ಶರಣಾದ ದಿನ ಕೂಡಾ ಆಕೆ ಮೇಲೆ ಹಲ್ಲೆ ಮಾಡಿ, ಅಂಥಾ ಸೀನ್ ಗಳಲ್ಲಿ ಏಕೆ ನಟಿಸುತ್ತೀಯಾ ಎಂದು ಪ್ರಶ್ನೆ ಮಾಡಿದ್ದ ಎಂದು ಪೊಲೀಸರು ಹೇಳಿದರು.
ಪಾಂಡಿಯನ್ ಸ್ಟೋರ್ಸ್ ತಮಿಳು ಶೋನಲ್ಲಿ ಕಾಣಿಸಿಕೊಳ್ಳುತ್ತಿದ್ದ 29ವರ್ಷ ವಯಸ್ಸಿನ ವಿಜೆ ಚಿತ್ರಾ ಚೆನ್ನೈನ ನಜರಥ್ ಪೇಟ್ ನಲ್ಲಿರುವ ಹೋಟೆಲ್ ರೂಮೊಂದರಲ್ಲಿ ಡಿಸೆಂಬರ್ 9ರಂದು ಶವವಾಗಿ ಪತ್ತೆಯಾಗಿದ್ದರು.
''ಅಂದು ಮಧ್ಯಾಹ್ನ 1 ಗಂಟೆಗೆ ಹೋಟೆಲ್ ರೂಮಿಗೆ ಬಂದಿದ್ದರು. ಚಿತ್ರೀಕರಣ ಮುಗಿಸಿ ನೇರ ಇಲ್ಲಿಗೆ ಬಂದಿದ್ದಂತೆ ತೋರುತ್ತಿತ್ತು. 3.30ರ ಸುಮಾರಿಗೆ 100 ಸಂಖ್ಯೆ ಡಯಲ್ ಮಾಡಿ ವಿಷಯ ತಿಳಿಸಿದೆ'' ಎಂದು ಹೋಟೆಲ್ ಮ್ಯಾನೇಜರ್ ಹೇಳಿದ್ದಾರೆ. ಚಿತ್ರಾ ಅವರು ಆತ್ಮಹತ್ಯೆ ನಿರ್ಧಾರ ಮಾಡಿದ್ದೇಕೆ ಎಂಬುದು ಇನ್ನೂ ಪತ್ತೆಯಾಗಿಲ್ಲ. ಶೂಟಿಂಗ್ ಮುಗಿದ ಬಳಿಕ ಖುಷಿಯಿಂದಲೆ ತಮ್ಮ ಚಿತ್ರವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು. ''ಹೇಮಂತ್ ನೀಡುತ್ತಿದ್ದ ಕಿರುಕುಳ ಮುಖ್ಯ ಕಾರಣ, ಅವನಿಗೆ ಇವಳು ನಟಿಸುವುದು ಇಷ್ಟವಿರಲಿಲ್ಲ, ಪದೇ ಪದೇ ಹಿಂಸಿಸುತ್ತಿದ್ದ. ಮಂಗಳವಾರ ನನ್ನ ಜೊತೆ ಚೆನ್ನಾಗಿ ಮಾತನಾಡಿದ್ದಳು'' ಎಂದು ಚಿತ್ರಾ ಅವರ ತಾಯಿ ವಿಜಯ ನೊಂದು ನುಡಿದಿದ್ದಾರೆ.
This News Article is a Copy of FILMIBEAT
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:53 pm
Mangalore Correspondent
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am