ಬ್ರೇಕಿಂಗ್ ನ್ಯೂಸ್
15-12-20 11:46 am Source: FILMIBEAT Manjunatha C ಸಿನಿಮಾ
ತಮಿಳುನಾಡು, ಡಿ.15: ರಾಜಕೀಯ ಪ್ರವೇಶ ಮಾಡುವುದಾಗಿ ನಟ ರಜನೀಕಾಂತ್ ಈಗಾಗಲೇ ಅಧಿಕೃತವಾಗಿ ಘೋಷಿಸಿಯಾಗಿದೆ. ತಮ್ಮ ಪಕ್ಷದ ಹೆಸರು, ಚಿಹ್ನೆಯನ್ನು ಡಿಸೆಂಬರ್ 31 ರಂದು ಘೋಷಿಸುವುದಾಗಿ ರಜನೀಕಾಂತ್ ಈಗಾಗಲೇ ಹೇಳಿದ್ದಾರೆ. ಆದರೆ ರಜನೀಕಾಂತ್ ಘೋಷಿಸುವ ಮುನ್ನವೇ ಪಕ್ಷದ ಹೆಸರು, ಚಿಹ್ನೆ ಬಗ್ಗೆ ಮಾಹಿತಿ ಬಹಿರಂಗಗೊಂಡಿದೆ. ಹಲವು ತಮಿಳು ಚಾನೆಲ್ಗಳು ಈ ಬಗ್ಗೆ ಸುದ್ದಿಯನ್ನು ಬಿತ್ತರಿಸುತ್ತಿದ್ದು, ರಜನೀಕಾಂತ್ ಪಕ್ಷದ ಹೆಸರನ್ನು 'ಮಕ್ಕಳ್ ಸೇವೈ ಕಚ್ಚಿ' ಎಂದು ಚುನಾವಣಾ ಆಯೋಗದ ಬಳಿ ನೊಂದಾವಣಿ ಮಾಡಿಸಿದ್ದು, ಪಕ್ಷದ ಚಿಹ್ನೆ ಆಟೊ ರಿಕ್ಷಾ ಆಗಿದೆಯಂತೆ.
'ಮಕ್ಕಳ್ ಸೇವೈ ಕಚ್ಚಿ' ಎಂದರೆ, 'ಜನರಿಗೆ ಸೇವೆ ಮಾಡುವ ಪಕ್ಷ' ಎಂದರ್ಥ. ಈ ಪಕ್ಷದ ಸಿಂಬಲ್ ಆಗಿ ಆಟೊ ರಿಕ್ಷಾ ನೀಡಲಾಗಿದೆ ಎನ್ನಲಾಗುತ್ತಿದೆ. ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಡಿಸೆಂಬರ್ 31 ರಂದು ಘೋಷಿಸಲಾಗುತ್ತದೆ.

ಮಕ್ಕಳ್ ಮಂದ್ರಮ್ ಸದಸ್ಯರೊಂದಿಗೆ ಚರ್ಚಿಸಿ ನಿರ್ಧಾರ
ರಜನೀಕಾಂತ್ ಅವರ ಸಂಘ 'ಮಕ್ಕಳ್ ಮಂದ್ರಮ್' ಸದಸ್ಯರ ಜೊತೆ ಚರ್ಚಿಸಿ ಪಕ್ಷದ ಹೆಸರು ನಿರ್ಧರಿಸಲಾಗಿದೆಯಂತೆ. ಈ ಮೊದಲು ಪಕ್ಷದ ಹೆಸರನ್ನು 'ಮಕ್ಕಳ್ ಶಕ್ತಿ ಕಳಗಂ' ಎಂದು ನೊಂದಾಯಿಸಿದ್ದರಂತೆ, ಜೊತೆಗೆ ಬಾಬಾ ಸಿಂಬಲ್ ಅನ್ನು ಗುರುತಾಗಿ ಕೇಳಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ ಎನ್ನಲಾಗುತ್ತಿದೆ.
ರಜನೀಕಾಂತ್ ಪ್ರವೇಶದಿಂದ ರಾಜಕೀಯ ಲೆಕ್ಕಾಚಾರ ಬದಲು?
ರಜನೀಕಾಂತ್ ರಾಜಕೀಯ ಪ್ರವೇಶದ ಸುದ್ದಿ ತಮಿಳುನಾಡು ರಾಜಕೀಯದ ಮೇಲೆ ಭಾರಿ ಪ್ರಭಾವ ಬೀರಿದೆ. ರಜನೀಕಾಂತ್ ಅವರು ಬಿಜೆಪಿಯ ಮಿತ್ರ ಪಕ್ಷ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ರಜನೀಕಾಂತ್ ರಾಜಕೀಯ ಪ್ರವೇಶದಿಂದ ಡಿಎಂಕೆಗೆ ತುಸು ಹಿನ್ನೆಡೆ ಆಗಲಿದೆ ಎನ್ನಲಾಗುತ್ತಿದೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm