ಬ್ರೇಕಿಂಗ್ ನ್ಯೂಸ್
16-12-20 12:11 pm Source: FILMIBEAT Shruthi Gk ಸಿನಿಮಾ
ಸ್ಯಾಂಡಲ್ ವುಡ್ ನಲ್ಲಿ ಲೂಸಿಯ ಮತ್ತು ಯು ಟರ್ನ್ ಮೂಲಕ ಕನ್ನಡ ಸಿನಿಮಾ ಅಭಿಮಾನಿಗಳ ಹೃದಯ ಗೆದ್ದಿರುವ ನಿರ್ದೇಶಕ ಪವನ್ ಕುಮಾರ್ ಸದ್ಯ ವೆಬ್ ಸರಣಿಯಲ್ಲಿ ಬ್ಯುಸಿಯಾಗಿದ್ದಾರೆ. ಅಂದಹಾಗೆ ಪವನ್ ವೆಬ್ ಸರಣಿ ನಿರ್ದೇಶನ ಮಾಡುತ್ತಿರುವುದು ತೆಲುಗಿನಲ್ಲಿ. ತೆಲುಗು ಒಟಿಟಿಗಾಗಿ ಪವನ್ ಕುಮಾರ್ ವೆಬ್ ಸರಣಿ ನಿರ್ದೇಶನ ಮಾಡುತ್ತಿದ್ದಾರೆ. ತೆಲುಗಿನಲ್ಲಿ ತಮ್ಮದೆ ಆದ ಒಟಿಟಿ ಇರಬೇಕೆಂದು ಆಹಾ ಒಟಿಟಿಯನ್ನು ಮಾಡಿಕೊಂಡಿದ್ದಾರೆ. ಅಹಾ ಒಟಿಟಿಗೆ ಪವನ್ ಕುಮಾರ್ ವೆಬ್ ಸಿರೀಸ್ ನಿರ್ಮಾಣ ಮಾಡುತ್ತಿದ್ದಾರೆ. ಈಗಾಗಲೇ ವೆಬ್ ಸರಣಿಯ ಚಿತ್ರೀಕರಣ ಪ್ರಾರಂಭವಾಗಿದ್ದು, ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆಯುತ್ತಿದೆ. ವಿಶೇಷ ಎಂದರೆ ವೆಬ್ ಸರಣಿಯಲ್ಲಿ ಅಮಲಾ ಪೌಲ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

'ಕುಡಿ ಎಡಮೈತೆ' ವೆಬ್ ಸರಣಿ ಚಿತ್ರೀಕರಣದಲ್ಲಿ ಪವನ್
ವೆಬ್ ಸರಣಿಗೆ 'ಕುಡಿ ಎಡಮೈತೆ' ಎನ್ನುವ ಟೈಟಲ್ ಇಡಲಾಗಿದೆ. ಚಿತ್ರದಲ್ಲಿ ರಾಹುಲ್ ವಿಜಯ್ ನಾಯಕನಾಗಿ ನಟಿಸುತ್ತಿದ್ದಾರೆ. ಸೈನ್ಸ್ ಫಿಕ್ಷನ್ ಥ್ರಿಲ್ಲರ್ ವೆಬ್ ಸರಣಿಯಾಗಿದ್ದು ನಿರ್ದೇಶಕ ಕುಮಾರ್ ಸಹ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದ್ದು, ಮುಂದಿನ ವರ್ಷ ಜನವರಿ ಕೊನೆಯಲ್ಲಿ ಚಿತ್ರೀಕರಣ ಮುಗಿಸುವ ಪ್ಲಾನ್ ಮಾಡಿದೆ ತಂಡ.
ಚಿತ್ರೀಕರಣದ ಫೋಟೋ ಹಂಚಿಕೊಂಡ ಪವನ್ ಅಂದಹಾಗೆ 'ಕುಡಿ ಎಡಮೈತೆ' ಪವನ್ ಕುಮಾರ್ ನಿರ್ದೇಶನದ ಎರಡನೇ ವೆಬ್ ಸರಣಿ. ಈಗಾಗಲೇ ಪವನ್ ನೆಟ್ ಫ್ಲಿಕ್ಸ ನಲ್ಲಿ ವೆಬ್ ಸರಣಿ ಮಾಡುವ ಮೂಲಕ ಆನ್ ಲೈನ್ ವಿಭಾಗದಲ್ಲಿ ಸಕ್ರೀಯರಾಗಿದ್ದಾರೆ. 'ಕುಡಿ ಎಡಮೈತೆ' ವೆಬ್ ಸರಣಿಯ ಚಿತ್ರೀಕರಣ ಪೋಟೋಗಳನ್ನು ಪವನ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

ಯುಟರ್ನ್ ತೆಲುಗು ರಿಮೇಕ್ ನಿರ್ದೇಶನ
ಅಂದಹಾಗೆ ಪವನ್ ಕುಮಾರ್ ತೆಲುಗು ಸಿನಿಮಾರಂಗಕ್ಕೆ ಎಂಟ್ರಿ ಕೊಡುತ್ತಿರುವುದು ಇದೇ ಮೊದಲೇನಲ್ಲ. ಈ ಮೊದಲು ಕನ್ನಡದ ಯು ಟರ್ನ್ ಸಿನಿಮಾವನ್ನು ತೆಲುಗಿಗೆ ರಿಮೇಕ್ ಮಾಡಿದ್ದಾರೆ. ನಟಿ ಸಮಂತಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಇದೀಗ ವೆಬ್ ಸರಣಿ ಮೂಲಕ ಮತ್ತೆ ತೆಲುಗು ಸಿನಿಮಾರಂಗದಲ್ಲಿ ಸದ್ದು ಮಾಡುತ್ತಿದ್ದಾರೆ.
This News Article is a Copy of FILMIBEAT
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm