ಬ್ರೇಕಿಂಗ್ ನ್ಯೂಸ್
16-12-20 12:11 pm Source: FILMIBEAT Shruthi Gk ಸಿನಿಮಾ
ಸ್ಯಾಂಡಲ್ ವುಡ್ ನಲ್ಲಿ ಲೂಸಿಯ ಮತ್ತು ಯು ಟರ್ನ್ ಮೂಲಕ ಕನ್ನಡ ಸಿನಿಮಾ ಅಭಿಮಾನಿಗಳ ಹೃದಯ ಗೆದ್ದಿರುವ ನಿರ್ದೇಶಕ ಪವನ್ ಕುಮಾರ್ ಸದ್ಯ ವೆಬ್ ಸರಣಿಯಲ್ಲಿ ಬ್ಯುಸಿಯಾಗಿದ್ದಾರೆ. ಅಂದಹಾಗೆ ಪವನ್ ವೆಬ್ ಸರಣಿ ನಿರ್ದೇಶನ ಮಾಡುತ್ತಿರುವುದು ತೆಲುಗಿನಲ್ಲಿ. ತೆಲುಗು ಒಟಿಟಿಗಾಗಿ ಪವನ್ ಕುಮಾರ್ ವೆಬ್ ಸರಣಿ ನಿರ್ದೇಶನ ಮಾಡುತ್ತಿದ್ದಾರೆ. ತೆಲುಗಿನಲ್ಲಿ ತಮ್ಮದೆ ಆದ ಒಟಿಟಿ ಇರಬೇಕೆಂದು ಆಹಾ ಒಟಿಟಿಯನ್ನು ಮಾಡಿಕೊಂಡಿದ್ದಾರೆ. ಅಹಾ ಒಟಿಟಿಗೆ ಪವನ್ ಕುಮಾರ್ ವೆಬ್ ಸಿರೀಸ್ ನಿರ್ಮಾಣ ಮಾಡುತ್ತಿದ್ದಾರೆ. ಈಗಾಗಲೇ ವೆಬ್ ಸರಣಿಯ ಚಿತ್ರೀಕರಣ ಪ್ರಾರಂಭವಾಗಿದ್ದು, ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆಯುತ್ತಿದೆ. ವಿಶೇಷ ಎಂದರೆ ವೆಬ್ ಸರಣಿಯಲ್ಲಿ ಅಮಲಾ ಪೌಲ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.
'ಕುಡಿ ಎಡಮೈತೆ' ವೆಬ್ ಸರಣಿ ಚಿತ್ರೀಕರಣದಲ್ಲಿ ಪವನ್
ವೆಬ್ ಸರಣಿಗೆ 'ಕುಡಿ ಎಡಮೈತೆ' ಎನ್ನುವ ಟೈಟಲ್ ಇಡಲಾಗಿದೆ. ಚಿತ್ರದಲ್ಲಿ ರಾಹುಲ್ ವಿಜಯ್ ನಾಯಕನಾಗಿ ನಟಿಸುತ್ತಿದ್ದಾರೆ. ಸೈನ್ಸ್ ಫಿಕ್ಷನ್ ಥ್ರಿಲ್ಲರ್ ವೆಬ್ ಸರಣಿಯಾಗಿದ್ದು ನಿರ್ದೇಶಕ ಕುಮಾರ್ ಸಹ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದ್ದು, ಮುಂದಿನ ವರ್ಷ ಜನವರಿ ಕೊನೆಯಲ್ಲಿ ಚಿತ್ರೀಕರಣ ಮುಗಿಸುವ ಪ್ಲಾನ್ ಮಾಡಿದೆ ತಂಡ.
ಚಿತ್ರೀಕರಣದ ಫೋಟೋ ಹಂಚಿಕೊಂಡ ಪವನ್ ಅಂದಹಾಗೆ 'ಕುಡಿ ಎಡಮೈತೆ' ಪವನ್ ಕುಮಾರ್ ನಿರ್ದೇಶನದ ಎರಡನೇ ವೆಬ್ ಸರಣಿ. ಈಗಾಗಲೇ ಪವನ್ ನೆಟ್ ಫ್ಲಿಕ್ಸ ನಲ್ಲಿ ವೆಬ್ ಸರಣಿ ಮಾಡುವ ಮೂಲಕ ಆನ್ ಲೈನ್ ವಿಭಾಗದಲ್ಲಿ ಸಕ್ರೀಯರಾಗಿದ್ದಾರೆ. 'ಕುಡಿ ಎಡಮೈತೆ' ವೆಬ್ ಸರಣಿಯ ಚಿತ್ರೀಕರಣ ಪೋಟೋಗಳನ್ನು ಪವನ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.
ಯುಟರ್ನ್ ತೆಲುಗು ರಿಮೇಕ್ ನಿರ್ದೇಶನ
ಅಂದಹಾಗೆ ಪವನ್ ಕುಮಾರ್ ತೆಲುಗು ಸಿನಿಮಾರಂಗಕ್ಕೆ ಎಂಟ್ರಿ ಕೊಡುತ್ತಿರುವುದು ಇದೇ ಮೊದಲೇನಲ್ಲ. ಈ ಮೊದಲು ಕನ್ನಡದ ಯು ಟರ್ನ್ ಸಿನಿಮಾವನ್ನು ತೆಲುಗಿಗೆ ರಿಮೇಕ್ ಮಾಡಿದ್ದಾರೆ. ನಟಿ ಸಮಂತಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಇದೀಗ ವೆಬ್ ಸರಣಿ ಮೂಲಕ ಮತ್ತೆ ತೆಲುಗು ಸಿನಿಮಾರಂಗದಲ್ಲಿ ಸದ್ದು ಮಾಡುತ್ತಿದ್ದಾರೆ.
This News Article is a Copy of FILMIBEAT
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm