ಬ್ರೇಕಿಂಗ್ ನ್ಯೂಸ್
17-12-20 09:42 pm Headline Karnataka News Network ಸಿನಿಮಾ
ಮುಂಬೈ, ಡಿ.17: ಬಾಲಿವುಡ್ ಡ್ರಗ್ ಪ್ರಕರಣ ಸಂಬಂಧಿಸಿ ಖ್ಯಾತ ನಿರ್ದೇಶಕ, ನಿರ್ಮಾಪಕ ಕರಣ್ ಜೋಹರ್ಗೆ ಎನ್ಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಬಾಲಿವುಡ್ ನಟ- ನಟಿಯರ ಮಾದಕವಸ್ತು ಜಾಲದ ನಂಟಿನ ಬಗ್ಗೆ ಎನ್ಸಿಬಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈಗಾಗ್ಲೇ ಹಲವು ನಟ-ನಟಿಯರನ್ನು ವಿಚಾರಣೆಗೊಳಪಡಿಸಿರುವ ಅಧಿಕಾರಿಗಳು ಈಗ ನಿರ್ಮಾಪಕ ಕರಣ್ ಜೋಹರ್ಅವರನ್ನು ವಿಚಾರಣೆಗೆ ಕರೆದಿದ್ದಾರೆ.
ನಟ ಸುಶಾಂತ್ ಸಿಂಗ್ ಅಸಹಜ ಸಾವು ಪ್ರಕರಣದ ಬಳಿಕ ಬಾಲಿವುಡ್ನಲ್ಲಿ ಡ್ರಗ್ಸ್ ದಂಧೆ ನಡೆಯುತ್ತಿರುವ ವಿಚಾರ ಹೊರಬಿದ್ದಿತ್ತು. ನಟಿಯರನ್ನು ವಿಚಾರಣೆಗೆ ಒಳಪಡಿಸಿದಾಗ, ಅವರ ಆಪ್ತರು ಡ್ರಗ್ಸ್ ಸರಬರಾಜು ಮಾಡುವ ಆರೋಪ ಕಂಡುಬಂದಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಎನ್ಸಿಬಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಕರಣ್ ಜೋಹರ್ ಬಗ್ಗೆ ಈ ಮೊದಲೇ ಹಲವು ಬಾರಿ ಅನುಮಾನಗಳು ವ್ಯಕ್ತವಾಗಿದ್ದವು. ಕರಣ್ ಪಾಲುದಾರಿಕೆ ಹೊಂದಿದ್ದ ಮ್ಯಾನೇಜ್ಮೆಂಟ್ ಕಂಪನಿಗಳ ಮ್ಯಾನೇಜರ್ ಸಿಕ್ಕಿಬಿದ್ದ ವೇಳೆ ಕರಣ್ ವಿಚಾರಣೆ ಆಗುತ್ತೆ ಎನ್ನಲಾಗಿತ್ತು. ಈಗ ಕೊನೆಗೂ ನೋಟಿಸ್ ಜಾರಿಯಾಗಿದ್ದು ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ.
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ, 47 ವರ್ಷದ ನಟ ಅರ್ಜುನ್ ರಾಂಪಾಲ್ಗೂ ಎರಡನೇ ಬಾರಿ ನೋಟೀಸ್ ನೀಡಿ ವಿಚಾರಣೆಗೆ ಕರೆದಿತ್ತು. ಆದರೆ, ಅರ್ಜುನ್ ರಾಂಪಾಲ್ ಒಂದು ವಾರ ಕಾಲಾವಕಾಶ ಕೋರಿದ್ದಾರೆ. ನವೆಂಬರ್ 13 ರಂದು ಮೊದಲ ಬಾರಿ, ಎನ್ಸಿಬಿ ಸುಮಾರು ಏಳು ಗಂಟೆಗಳ ಕಾಲ ನಟ ರಾಂಪಾಲ್ ಅವರನ್ನು ವಿಚಾರಣೆ ನಡೆಸಿತ್ತು. ನಟನ ಆಸ್ಟ್ರೇಲಿಯಾದ ಸ್ನೇಹಿತ ಪಾಲ್ ಬಾರ್ಟೆಲ್ ಅವರನ್ನು ಮಾದಕವಸ್ತು ಸಂಬಂಧಿತ ಪ್ರಕರಣದಲ್ಲಿ ಬಂಧಿಸಿದ ನಂತರ ಇವರನ್ನು ಪ್ರಶ್ನಿಸಲಾಗಿತ್ತು. ಇದೇ ನಂಟಿನಲ್ಲಿ ಖ್ಯಾತ ಹಾಸ್ಯ ನಟಿ ಭಾರತಿ ಸಿಂಗ್ ಮತ್ತು ಅವರ ಪತಿಯನ್ನು ಎನ್ಸಿಬಿ ವಿಚಾರಣೆ ನಡೆಸಿತ್ತು. ನಂತರ ಬಾಂಬೆ ಹೈಕೋರ್ಟ್ ಜಾಮೀನು ನೀಡಿತ್ತು.
In the latest piece of news, the Narcotics Control Bureau (NCB) on Thursday issued summons to director-producer Karan Johar in the Bollywood drugs nexus case.
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 08:22 pm
HK News Staffer
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm