ಬ್ರೇಕಿಂಗ್ ನ್ಯೂಸ್
18-12-20 02:52 pm Source: FILMIBEAT ಸಿನಿಮಾ
ಸ್ಯಾಂಡಲ್ವುಡ್ನ ರಾಕಿಂಗ್ ಜೋಡಿ ಯಶ್-ರಾಧಿಕಾ ಮತ್ತೆ ಕಿರುತೆರೆಯಲ್ಲಿ ಮೋಡಿ ಮಾಡಲು ಸಜ್ಜಾಗಿದ್ದಾರೆ. ಈ ಹಿಂದೆ 'ನಂದಗೋಕುಲ' ಎಂಬ ಧಾರಾವಾಹಿಯಲ್ಲಿ ನಟಿಸಿ ಕಿರುತೆರೆ ಪ್ರೇಕ್ಷಕರ ಮನಗೆದ್ದಿದ್ದರು ಈ ಜೋಡಿ. ಈಗ ಹಲವು ವರ್ಷಗಳ ಬಳಿಕ ಮತ್ತೆ ಕಿರುತೆರೆಯಲ್ಲಿ ಒಂದಾಗಿದ್ದಾರೆ. ಅದು ಜಾಹೀರಾತು ಒಂದಕ್ಕೆ. ಇದೇ ಮೊದಲ ಬಾರಿ ಇಬ್ಬರು ಜಾಹೀರಾತಿನಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದು, ಇವರ ಜೋಡಿ ಮತ್ತೊಮ್ಮೆ ಕಿರುತೆರೆ ಪ್ರೇಕ್ಷಕರ ಮನಗೆಲ್ಲುವುದು ಸುಳ್ಳಲ್ಲ.
ಈ ಮೂಲಕ ಮತ್ತೊಮ್ಮೆ ಕನ್ನಡಿಗರ ಮನಗೆಲ್ಲಲು ಈ ಜೋಡಿ ಸಿದ್ದವಾಗಿದ್ದಾರೆ. ಕಿರುತೆರೆ ಜೊತೆಗೆ ಬೆಳ್ಳಿತೆರೆಯಲ್ಲಿ ಕೆಲಕಾಲ ಅಂತರ ಕಾಯ್ದುಕೊಂಡಿರುವ ನಟಿ ರಾಧಿಕಾ ಪಂಡಿತ್, ಯಶ್ ಜೊತೆ ಮತ್ತೆ ತೆರೆ ಮೇಲೆ ಕಾಣಿಸುತ್ತಿರುವುದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.
ಸದ್ಯ ನಟ ಯಶ್ ಕೆಜಿಎಫ್ -2 ಸಿನಿಮಾದ ಕೊನೆ ಹಂತದ ಚಿತ್ರೀಕರಣದಲ್ಲಿ ತಲ್ಲೀನರಾಗಿದ್ದಾರೆ. ಇತ್ತ ಮಗನ ಮೊದಲ ಹಾಗೂ ಮಗಳ ಎರಡನೇ ಹುಟ್ಟು ಹಬ್ಬ ಆಚರಿಸಿರುವ ನಟಿ ರಾಧಿಕಾ ಈ ಜಾಹೀರಾತಿನ ಮೂಲಕ ಮತ್ತೆ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಲು ಸಿದ್ಧರಾಗಿದ್ದಾರೆ.

ಇನ್ನು ಈ ಕುರಿತು ಸಂತಸ ಹಂಚಿಕೊಂಡಿರುವ ನಟಿ ರಾಧಿಕಾ, ನಾಲ್ಕು ವರ್ಷದ ಬಳಿಕ ತನ್ನ ಸಹ ನಟನೊಂದಿಗೆ ಕಾರ್ಯ ಆರಂಭಿಸಿರುವುದು ಖುಷಿ ಮೂಡಿಸಿದೆ ಎಂದು ತಿಳಿಸಿದ್ದಾರೆ. ಮದುವೆಗೂ ಮೊದಲು ಇವರಿಬ್ಬರು 'ಮಿಸ್ಟರ್ ಅಂಡ್ ಮಿಸ್ಸೆಸ್ ರಾಮಚಾರಿ', 'ಸಂಜು ಸ್ಟ್ರೈಟ್ ಫಾರ್ವಡ್' ನಲ್ಲಿ ನಟಿಸಿದ್ದರು.
ಈಗಾಗಲೇ ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ತಮ್ಮ ಛಾಪು ಮೂಡಿಸುತ್ತಿರುವ ಈ ಜೋಡಿ ಈಗ ಜಾಹೀರಾತಿನ ಮೂಲಕ ಇನ್ನಷ್ಟು ಅಭಿಮಾನಿಗಳಿಗೆ ಆತ್ಮೀಯವಾಗುವ ಪ್ರಯತ್ನ ನಡೆಸಿದ್ದಾರೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm