ಬ್ರೇಕಿಂಗ್ ನ್ಯೂಸ್
18-12-20 02:52 pm Source: FILMIBEAT ಸಿನಿಮಾ
ಸ್ಯಾಂಡಲ್ವುಡ್ನ ರಾಕಿಂಗ್ ಜೋಡಿ ಯಶ್-ರಾಧಿಕಾ ಮತ್ತೆ ಕಿರುತೆರೆಯಲ್ಲಿ ಮೋಡಿ ಮಾಡಲು ಸಜ್ಜಾಗಿದ್ದಾರೆ. ಈ ಹಿಂದೆ 'ನಂದಗೋಕುಲ' ಎಂಬ ಧಾರಾವಾಹಿಯಲ್ಲಿ ನಟಿಸಿ ಕಿರುತೆರೆ ಪ್ರೇಕ್ಷಕರ ಮನಗೆದ್ದಿದ್ದರು ಈ ಜೋಡಿ. ಈಗ ಹಲವು ವರ್ಷಗಳ ಬಳಿಕ ಮತ್ತೆ ಕಿರುತೆರೆಯಲ್ಲಿ ಒಂದಾಗಿದ್ದಾರೆ. ಅದು ಜಾಹೀರಾತು ಒಂದಕ್ಕೆ. ಇದೇ ಮೊದಲ ಬಾರಿ ಇಬ್ಬರು ಜಾಹೀರಾತಿನಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದು, ಇವರ ಜೋಡಿ ಮತ್ತೊಮ್ಮೆ ಕಿರುತೆರೆ ಪ್ರೇಕ್ಷಕರ ಮನಗೆಲ್ಲುವುದು ಸುಳ್ಳಲ್ಲ.
ಈ ಮೂಲಕ ಮತ್ತೊಮ್ಮೆ ಕನ್ನಡಿಗರ ಮನಗೆಲ್ಲಲು ಈ ಜೋಡಿ ಸಿದ್ದವಾಗಿದ್ದಾರೆ. ಕಿರುತೆರೆ ಜೊತೆಗೆ ಬೆಳ್ಳಿತೆರೆಯಲ್ಲಿ ಕೆಲಕಾಲ ಅಂತರ ಕಾಯ್ದುಕೊಂಡಿರುವ ನಟಿ ರಾಧಿಕಾ ಪಂಡಿತ್, ಯಶ್ ಜೊತೆ ಮತ್ತೆ ತೆರೆ ಮೇಲೆ ಕಾಣಿಸುತ್ತಿರುವುದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.
ಸದ್ಯ ನಟ ಯಶ್ ಕೆಜಿಎಫ್ -2 ಸಿನಿಮಾದ ಕೊನೆ ಹಂತದ ಚಿತ್ರೀಕರಣದಲ್ಲಿ ತಲ್ಲೀನರಾಗಿದ್ದಾರೆ. ಇತ್ತ ಮಗನ ಮೊದಲ ಹಾಗೂ ಮಗಳ ಎರಡನೇ ಹುಟ್ಟು ಹಬ್ಬ ಆಚರಿಸಿರುವ ನಟಿ ರಾಧಿಕಾ ಈ ಜಾಹೀರಾತಿನ ಮೂಲಕ ಮತ್ತೆ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಲು ಸಿದ್ಧರಾಗಿದ್ದಾರೆ.

ಇನ್ನು ಈ ಕುರಿತು ಸಂತಸ ಹಂಚಿಕೊಂಡಿರುವ ನಟಿ ರಾಧಿಕಾ, ನಾಲ್ಕು ವರ್ಷದ ಬಳಿಕ ತನ್ನ ಸಹ ನಟನೊಂದಿಗೆ ಕಾರ್ಯ ಆರಂಭಿಸಿರುವುದು ಖುಷಿ ಮೂಡಿಸಿದೆ ಎಂದು ತಿಳಿಸಿದ್ದಾರೆ. ಮದುವೆಗೂ ಮೊದಲು ಇವರಿಬ್ಬರು 'ಮಿಸ್ಟರ್ ಅಂಡ್ ಮಿಸ್ಸೆಸ್ ರಾಮಚಾರಿ', 'ಸಂಜು ಸ್ಟ್ರೈಟ್ ಫಾರ್ವಡ್' ನಲ್ಲಿ ನಟಿಸಿದ್ದರು.
ಈಗಾಗಲೇ ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ತಮ್ಮ ಛಾಪು ಮೂಡಿಸುತ್ತಿರುವ ಈ ಜೋಡಿ ಈಗ ಜಾಹೀರಾತಿನ ಮೂಲಕ ಇನ್ನಷ್ಟು ಅಭಿಮಾನಿಗಳಿಗೆ ಆತ್ಮೀಯವಾಗುವ ಪ್ರಯತ್ನ ನಡೆಸಿದ್ದಾರೆ.
This News Article is a Copy of FILMIBEAT
02-02-26 04:06 pm
HK News Desk
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm