ಬ್ರೇಕಿಂಗ್ ನ್ಯೂಸ್
19-12-20 01:08 pm Source: FILMIBEAT Bharath Kumar K ಸಿನಿಮಾ
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಸೂಪರ್ ಹಿಟ್ ಚಿತ್ರ ಬಾಜಿರಾವ್ ಮಸ್ತಾನಿ ತೆರೆಕಂಡ ಡಿಸೆಂಬರ್ 18ಕ್ಕೆ ಐದು ವರ್ಷ ಕಳೆದಿದೆ. ಬಾಲಿವುಡ್ ಇಂಡಸ್ಟ್ರಿಯಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದ ಸಿನಿಮಾಗೆ ಐದು ವರ್ಷ ಪೂರೈಸಿದ ಸಂದರ್ಭದಲ್ಲಿ ದೀಪಿಕಾ ಪಡುಕೋಣೆ ಸಂತಸ ಹಂಚಿಕೊಂಡಿದ್ದಾರೆ. ಬಾಜಿರಾವ್ ಮಸ್ತಾನಿ ಚಿತ್ರದ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಜೊತೆಗಿನ ಫೋಟೋ ಹಂಚಿಕೊಂಡಿರುವ ದೀಪಿಕಾ, ಮಸ್ತಾನಿಯ ವ್ಯಕ್ತಿತ್ವವನ್ನು ಹೊಗಳಿದ್ದಾರೆ. ಅಷ್ಟೇ ಅಲ್ಲ, ತಮ್ಮ ಇನ್ಸ್ಟಾಗ್ರಾಂನಲ್ಲಿ ಪ್ರೋಫೈಲ್ ಮಸ್ತಾನಿ ಫೋಟೋ ಮತ್ತು ಹೆಸರನ್ನು ಸಹ ಬದಲಾಯಿಸಿಕೊಂಡಿದ್ದಾರೆ.
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಬಾಜಿರಾವ್ ಮಸ್ತಾನಿ 2015ರ ಡಿಸೆಂಬರ್ 19 ರಂದು ಬಿಡುಗಡೆಯಾಗಿತ್ತು. ದೀಪಿಕಾ ಪಡುಕೋಣೆ, ರಣ್ವೀರ್ ಸಿಂಗ್, ಪ್ರಿಯಾಂಕಾ ಚೋಪ್ರಾ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದರು.
ಈ ಸಿನಿಮಾ ಬಿಡುಗಡೆ ವೇಳೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ದೀಪಿಕಾ ಪಡುಕೋಣೆ ''ಇದು ನನ್ನ ಜೀವನದಲ್ಲಿ ಅತ್ಯಂತ ಕಷ್ಟದ ಸಿನಿಮಾ'' ಎಂದು ಹೇಳಿಕೊಂಡಿದ್ದರು. ''ಬಾಜಿರಾವ್ ಮಸ್ತಾನಿ ನನ್ನ ವೃತ್ತಿ ಜೀವನದಲ್ಲಿ ಕಷ್ಟದ ಸಿನಿಮಾ. ನಾನು ಪ್ರಯತ್ನದ ಬಗ್ಗೆ ಮಾತನಾಡುವುದಿಲ್ಲ ಏಕಂದ್ರೆ ಅಂತಿಮವಾಗಿ ಅಭಿನಯ ಮುಖ್ಯವಾಗುತ್ತದೆ. ಬಾಜಿರಾವ್ ಮಸ್ತಾನಿ ಚಿತ್ರಕ್ಕೆ ಹೋಲಿಸಿಕೊಂಡರೆ ರಾಮ್ ಲೀಲಾ ಸುಲಭವಾಗಿತ್ತು'' ಎಂದು 2015ರ ಸಂದರ್ಶನವೊಂದರಲ್ಲಿ ಹೇಳಿದ್ದರು.

ಅಂದ್ಹಾಗೆ, ಬಾಜಿರಾವ್ ಮಸ್ತಾನಿ ಚಿತ್ರವನ್ನು ಆರಂಭದಲ್ಲಿ ಸಲ್ಮಾನ್ ಖಾನ್ ಮತ್ತು ಐಶ್ವರ್ಯ ರೈ ಅವರ ಜೊತೆ ಮಾಡಬೇಕೆಂದು ಸಂಜಯ್ ಲೀಲಾ ಬನ್ಸಾಲಿ ನಿರ್ಧರಿಸಿದ್ದರು. ಆದ್ರೆ, ಆಗಿನ ಸಮಯಕ್ಕೆ ಆದ ಕೆಲವು ಬದಲಾವಣೆಗಳಿಂದ ಅದು ಸಾಧ್ಯವಾಗಿಲ್ಲ.
ನಂತರ ರಾಣಿ ಮುಖರ್ಜಿ ಮತ್ತು ಕರೀನಾ ಅವರನ್ನು ಸಹ ಸಂಪರ್ಕಿಸಲಾಗಿತ್ತು. ಇದೆಲ್ಲದಕ್ಕೂ ಮುಂಚೆ ಅಜಯ್ ದೇವಗನ್, ಶಾರೂಖ್ಖಾನ್, ಹೃತಿಕ್ ರೋಷನ್, ಕತ್ರಿನಾ ಕೈಫ್ ಅವರ ಹೆಸರುಗಳು ಸಹ ಈ ಚಿತ್ರದಲ್ಲಿ ಕೇಳಿ ಬಂದಿತ್ತು. ಆದ್ರೆ, ಅಂತಿಮವಾಗಿ ರಣ್ವೀರ್ ಸಿಂಗ್, ದೀಪಿಕಾ ಪಡುಕೋಣೆ, ಪ್ರಿಯಾಂಕಾ ಚೋಪ್ರಾಗೆ ಈ ಅದೃಷ್ಟದ ಬಾಗಿಲು ತೆರೆಯಿತು.
This News Article is a Copy of FILMIBEAT
02-02-26 04:06 pm
HK News Desk
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm