ಬ್ರೇಕಿಂಗ್ ನ್ಯೂಸ್
19-12-20 01:08 pm Source: FILMIBEAT Bharath Kumar K ಸಿನಿಮಾ
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಸೂಪರ್ ಹಿಟ್ ಚಿತ್ರ ಬಾಜಿರಾವ್ ಮಸ್ತಾನಿ ತೆರೆಕಂಡ ಡಿಸೆಂಬರ್ 18ಕ್ಕೆ ಐದು ವರ್ಷ ಕಳೆದಿದೆ. ಬಾಲಿವುಡ್ ಇಂಡಸ್ಟ್ರಿಯಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದ ಸಿನಿಮಾಗೆ ಐದು ವರ್ಷ ಪೂರೈಸಿದ ಸಂದರ್ಭದಲ್ಲಿ ದೀಪಿಕಾ ಪಡುಕೋಣೆ ಸಂತಸ ಹಂಚಿಕೊಂಡಿದ್ದಾರೆ. ಬಾಜಿರಾವ್ ಮಸ್ತಾನಿ ಚಿತ್ರದ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಜೊತೆಗಿನ ಫೋಟೋ ಹಂಚಿಕೊಂಡಿರುವ ದೀಪಿಕಾ, ಮಸ್ತಾನಿಯ ವ್ಯಕ್ತಿತ್ವವನ್ನು ಹೊಗಳಿದ್ದಾರೆ. ಅಷ್ಟೇ ಅಲ್ಲ, ತಮ್ಮ ಇನ್ಸ್ಟಾಗ್ರಾಂನಲ್ಲಿ ಪ್ರೋಫೈಲ್ ಮಸ್ತಾನಿ ಫೋಟೋ ಮತ್ತು ಹೆಸರನ್ನು ಸಹ ಬದಲಾಯಿಸಿಕೊಂಡಿದ್ದಾರೆ.
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಬಾಜಿರಾವ್ ಮಸ್ತಾನಿ 2015ರ ಡಿಸೆಂಬರ್ 19 ರಂದು ಬಿಡುಗಡೆಯಾಗಿತ್ತು. ದೀಪಿಕಾ ಪಡುಕೋಣೆ, ರಣ್ವೀರ್ ಸಿಂಗ್, ಪ್ರಿಯಾಂಕಾ ಚೋಪ್ರಾ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದರು.
ಈ ಸಿನಿಮಾ ಬಿಡುಗಡೆ ವೇಳೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ದೀಪಿಕಾ ಪಡುಕೋಣೆ ''ಇದು ನನ್ನ ಜೀವನದಲ್ಲಿ ಅತ್ಯಂತ ಕಷ್ಟದ ಸಿನಿಮಾ'' ಎಂದು ಹೇಳಿಕೊಂಡಿದ್ದರು. ''ಬಾಜಿರಾವ್ ಮಸ್ತಾನಿ ನನ್ನ ವೃತ್ತಿ ಜೀವನದಲ್ಲಿ ಕಷ್ಟದ ಸಿನಿಮಾ. ನಾನು ಪ್ರಯತ್ನದ ಬಗ್ಗೆ ಮಾತನಾಡುವುದಿಲ್ಲ ಏಕಂದ್ರೆ ಅಂತಿಮವಾಗಿ ಅಭಿನಯ ಮುಖ್ಯವಾಗುತ್ತದೆ. ಬಾಜಿರಾವ್ ಮಸ್ತಾನಿ ಚಿತ್ರಕ್ಕೆ ಹೋಲಿಸಿಕೊಂಡರೆ ರಾಮ್ ಲೀಲಾ ಸುಲಭವಾಗಿತ್ತು'' ಎಂದು 2015ರ ಸಂದರ್ಶನವೊಂದರಲ್ಲಿ ಹೇಳಿದ್ದರು.

ಅಂದ್ಹಾಗೆ, ಬಾಜಿರಾವ್ ಮಸ್ತಾನಿ ಚಿತ್ರವನ್ನು ಆರಂಭದಲ್ಲಿ ಸಲ್ಮಾನ್ ಖಾನ್ ಮತ್ತು ಐಶ್ವರ್ಯ ರೈ ಅವರ ಜೊತೆ ಮಾಡಬೇಕೆಂದು ಸಂಜಯ್ ಲೀಲಾ ಬನ್ಸಾಲಿ ನಿರ್ಧರಿಸಿದ್ದರು. ಆದ್ರೆ, ಆಗಿನ ಸಮಯಕ್ಕೆ ಆದ ಕೆಲವು ಬದಲಾವಣೆಗಳಿಂದ ಅದು ಸಾಧ್ಯವಾಗಿಲ್ಲ.
ನಂತರ ರಾಣಿ ಮುಖರ್ಜಿ ಮತ್ತು ಕರೀನಾ ಅವರನ್ನು ಸಹ ಸಂಪರ್ಕಿಸಲಾಗಿತ್ತು. ಇದೆಲ್ಲದಕ್ಕೂ ಮುಂಚೆ ಅಜಯ್ ದೇವಗನ್, ಶಾರೂಖ್ಖಾನ್, ಹೃತಿಕ್ ರೋಷನ್, ಕತ್ರಿನಾ ಕೈಫ್ ಅವರ ಹೆಸರುಗಳು ಸಹ ಈ ಚಿತ್ರದಲ್ಲಿ ಕೇಳಿ ಬಂದಿತ್ತು. ಆದ್ರೆ, ಅಂತಿಮವಾಗಿ ರಣ್ವೀರ್ ಸಿಂಗ್, ದೀಪಿಕಾ ಪಡುಕೋಣೆ, ಪ್ರಿಯಾಂಕಾ ಚೋಪ್ರಾಗೆ ಈ ಅದೃಷ್ಟದ ಬಾಗಿಲು ತೆರೆಯಿತು.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm