ಬ್ರೇಕಿಂಗ್ ನ್ಯೂಸ್
19-12-20 01:08 pm Source: FILMIBEAT Bharath Kumar K ಸಿನಿಮಾ
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಸೂಪರ್ ಹಿಟ್ ಚಿತ್ರ ಬಾಜಿರಾವ್ ಮಸ್ತಾನಿ ತೆರೆಕಂಡ ಡಿಸೆಂಬರ್ 18ಕ್ಕೆ ಐದು ವರ್ಷ ಕಳೆದಿದೆ. ಬಾಲಿವುಡ್ ಇಂಡಸ್ಟ್ರಿಯಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದ ಸಿನಿಮಾಗೆ ಐದು ವರ್ಷ ಪೂರೈಸಿದ ಸಂದರ್ಭದಲ್ಲಿ ದೀಪಿಕಾ ಪಡುಕೋಣೆ ಸಂತಸ ಹಂಚಿಕೊಂಡಿದ್ದಾರೆ. ಬಾಜಿರಾವ್ ಮಸ್ತಾನಿ ಚಿತ್ರದ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಜೊತೆಗಿನ ಫೋಟೋ ಹಂಚಿಕೊಂಡಿರುವ ದೀಪಿಕಾ, ಮಸ್ತಾನಿಯ ವ್ಯಕ್ತಿತ್ವವನ್ನು ಹೊಗಳಿದ್ದಾರೆ. ಅಷ್ಟೇ ಅಲ್ಲ, ತಮ್ಮ ಇನ್ಸ್ಟಾಗ್ರಾಂನಲ್ಲಿ ಪ್ರೋಫೈಲ್ ಮಸ್ತಾನಿ ಫೋಟೋ ಮತ್ತು ಹೆಸರನ್ನು ಸಹ ಬದಲಾಯಿಸಿಕೊಂಡಿದ್ದಾರೆ.
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಬಾಜಿರಾವ್ ಮಸ್ತಾನಿ 2015ರ ಡಿಸೆಂಬರ್ 19 ರಂದು ಬಿಡುಗಡೆಯಾಗಿತ್ತು. ದೀಪಿಕಾ ಪಡುಕೋಣೆ, ರಣ್ವೀರ್ ಸಿಂಗ್, ಪ್ರಿಯಾಂಕಾ ಚೋಪ್ರಾ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದರು.
ಈ ಸಿನಿಮಾ ಬಿಡುಗಡೆ ವೇಳೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ದೀಪಿಕಾ ಪಡುಕೋಣೆ ''ಇದು ನನ್ನ ಜೀವನದಲ್ಲಿ ಅತ್ಯಂತ ಕಷ್ಟದ ಸಿನಿಮಾ'' ಎಂದು ಹೇಳಿಕೊಂಡಿದ್ದರು. ''ಬಾಜಿರಾವ್ ಮಸ್ತಾನಿ ನನ್ನ ವೃತ್ತಿ ಜೀವನದಲ್ಲಿ ಕಷ್ಟದ ಸಿನಿಮಾ. ನಾನು ಪ್ರಯತ್ನದ ಬಗ್ಗೆ ಮಾತನಾಡುವುದಿಲ್ಲ ಏಕಂದ್ರೆ ಅಂತಿಮವಾಗಿ ಅಭಿನಯ ಮುಖ್ಯವಾಗುತ್ತದೆ. ಬಾಜಿರಾವ್ ಮಸ್ತಾನಿ ಚಿತ್ರಕ್ಕೆ ಹೋಲಿಸಿಕೊಂಡರೆ ರಾಮ್ ಲೀಲಾ ಸುಲಭವಾಗಿತ್ತು'' ಎಂದು 2015ರ ಸಂದರ್ಶನವೊಂದರಲ್ಲಿ ಹೇಳಿದ್ದರು.

ಅಂದ್ಹಾಗೆ, ಬಾಜಿರಾವ್ ಮಸ್ತಾನಿ ಚಿತ್ರವನ್ನು ಆರಂಭದಲ್ಲಿ ಸಲ್ಮಾನ್ ಖಾನ್ ಮತ್ತು ಐಶ್ವರ್ಯ ರೈ ಅವರ ಜೊತೆ ಮಾಡಬೇಕೆಂದು ಸಂಜಯ್ ಲೀಲಾ ಬನ್ಸಾಲಿ ನಿರ್ಧರಿಸಿದ್ದರು. ಆದ್ರೆ, ಆಗಿನ ಸಮಯಕ್ಕೆ ಆದ ಕೆಲವು ಬದಲಾವಣೆಗಳಿಂದ ಅದು ಸಾಧ್ಯವಾಗಿಲ್ಲ.
ನಂತರ ರಾಣಿ ಮುಖರ್ಜಿ ಮತ್ತು ಕರೀನಾ ಅವರನ್ನು ಸಹ ಸಂಪರ್ಕಿಸಲಾಗಿತ್ತು. ಇದೆಲ್ಲದಕ್ಕೂ ಮುಂಚೆ ಅಜಯ್ ದೇವಗನ್, ಶಾರೂಖ್ಖಾನ್, ಹೃತಿಕ್ ರೋಷನ್, ಕತ್ರಿನಾ ಕೈಫ್ ಅವರ ಹೆಸರುಗಳು ಸಹ ಈ ಚಿತ್ರದಲ್ಲಿ ಕೇಳಿ ಬಂದಿತ್ತು. ಆದ್ರೆ, ಅಂತಿಮವಾಗಿ ರಣ್ವೀರ್ ಸಿಂಗ್, ದೀಪಿಕಾ ಪಡುಕೋಣೆ, ಪ್ರಿಯಾಂಕಾ ಚೋಪ್ರಾಗೆ ಈ ಅದೃಷ್ಟದ ಬಾಗಿಲು ತೆರೆಯಿತು.
This News Article is a Copy of FILMIBEAT
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 08:22 pm
HK News Staffer
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm