ಬ್ರೇಕಿಂಗ್ ನ್ಯೂಸ್
22-12-20 12:25 pm Source: FILMIBEAT Shruthi Gk ಸಿನಿಮಾ
ದಕ್ಷಿಣ ಭಾರತೀಯ ಸಿನಿಮಾರಂಗದ ಖ್ಯಾತ ನಟಿ ತಮನ್ನಾಗೆ ಇಂದು ಹುಟ್ಟುಹಬ್ಬದ ಸಂಭ್ರಮ. 31ನೇ ವಸಂತಕ್ಕೆ ಕಾಲಿಟ್ಟಿರುವ ನಟಿ ತಮನ್ನಾ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಚಿತ್ರೀಕರಣ ಸೆಟ್ ನಲ್ಲಿ ಕೇಕ್ ಕತ್ತರಿಸಿ ಜನ್ಮ ದಿನ ಆಚರಣೆ ಮಾಡಿಕೊಂಡಿರುವ ತಮನ್ನಾಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೆ ಹರಿದುಬರುತ್ತಿದೆ. ಸ್ನೇಹಿತರು, ಚಿತ್ರದ ಗಣ್ಯರು ಸಹ ವಿಶ್ ಮಾಡುತ್ತಿದ್ದಾರೆ. ತೆಲುಗು ಸಿನಿಮಾರಂಗದ ಖ್ಯಾತ ನಟಿಯರಾದ ಕಾಜಲ್ ಮತ್ತು ಸಮಂತಾ ಸೇರಿದಂತೆ ಅನೇಕ ನಟಿಮಣಿರು ಪ್ರೀತಿಯ ಸಂದೇಶ ಕಳುಹಿಸಿದ್ದಾರೆ. ತಮನ್ನಾ ತೆಲುಗು ಸಿನಿಮಾರಂಗದ ಖ್ಯಾತ ನಟಿಯರ ಜೊತೆ ಉತ್ತಮ ಸ್ನೇಹ ಬಾಂಧವ್ಯವಿಟ್ಟುಕೊಂಡಿದ್ದಾರೆ. ನಟಿಮಣಿಯರ ನಡುವೆ ಸ್ನೇಹಕ್ಕಿಂತ ಹೆಚ್ಚಾಗಿ ಪೈಪೋಟಿ, ಜಿದ್ದು ಎದ್ದು ಕಾಣುತ್ತಿರುತ್ತೆ. ಆದರೆ ತಮನ್ನಾ ಸಹನಟಿಯರ ಜೊತೆ ಉತ್ತಮ ಸ್ನೇಹದಿಂದ ಇದ್ದಾರೆ.
ಇತ್ತೀಚಿಗಷ್ಟೆ ಹಸೆ ಮಣೆ ಏರಿರುವ ನಟಿ ಕಾಜಲ್ ಅಗರ್ವಾಲ್ ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯ ತಿಳಿಸಿದ್ದಾರೆ. 'ಪ್ರೀತಿಯ ತಮ್ಮಿ ಹುಟ್ಟುಹಬ್ಬದ ಶುಭಾಶಯಗಳು. ಅದ್ಭುತವಾದ ದಿನ ನಿನ್ನದಾಗಲಿ. ಇನ್ನೂ ಉತ್ತಮವಾದ ಎಲ್ಲದು ಸಿಗಲಿ ಎಂದು ಆಶೀರ್ವಾದಿಸುತ್ತೇನೆ' ಎಂದು ಹೇಳಿದ್ದಾರೆ. ಕಾಜಲ್ ವಿಶ್ ಗೆ ಪ್ರತಿಕ್ರಿಯೆ ನೀಡಿರುವ ತಮನ್ನಾ ಧನ್ಯವಾದಗಳು ಕಾಜು ಎಂದು ಹೇಳಿದ್ದಾರೆ.

ತಮನ್ನಾಗೆ ಶುಭಾಶಯ ತಿಳಿಸಿದ ಶ್ರುತಿ ಹಾಸನ್
ಇನ್ನೂ ನಟಿ ಶ್ರುತಿ ಹಾಸನ್ ಸಹ ಗೆಳತಿ ತಮನ್ನಾಗೆ ಪ್ರೀತಿಯ ಸಂದೇಶ ಕಳುಹಿಸಿದ್ದಾರೆ. ತಮನ್ನಾ ಕಾಮನ್ ಡಿಪಿ ರಿಲೀಸ್ ಮಾಡಿ, 'ಈ ಡಿಪಿ ರಿಲೀಸ್ ಮಾಡಲು ತುಂಬಾ ಸಂತೋಷವಾಗುತ್ತಿದೆ. ಹುಟ್ಟುಹಬ್ಬದ ಶುಭಾಶಯಗಳು ಸ್ವೀಟ್ ಹಾರ್ಟ್' ಎಂದು ವಿಶ್ ಮಾಡಿದ್ದಾರೆ.
ಗೆಳತಿಗೆ ಸಮಂತಾ ವಿಶ್
ನನ್ನ ಪ್ರೀತಿಯ ಗೆಳತಿ ತಮನ್ನಾ ಅವರ ಕಾಮನ್ ಡಿಪಿ ರಿಲೀಸ್ ಮಾಡಲು ಹೆಮ್ಮೆಯಾಗುತ್ತೆ. ಹುಟ್ಟುಹಬ್ಬದ ಶುಭಾಶಯಗಳು. ಉತ್ತಮವಾದ ವರ್ಷ ನಿನ್ನದಾಗಲಿ. ಮುಂದಿನ ವರ್ಷ ರಿಲೀಸ್ ಆಗುವ ಎಲ್ಲಾ ಸಿನಿಮಾಗಳನ್ನು ನೋಡಲು ನಾವು ಉತ್ಸುಕರಾಗಿದ್ದೇವೆ ಎಂದು ಹೇಳಿದ್ದಾರೆ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
24-05-26 09:01 pm
HK News Staffer
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am