ಬ್ರೇಕಿಂಗ್ ನ್ಯೂಸ್
22-12-20 02:22 pm Source: FILMIBEAT Shruthi Gk ಸಿನಿಮಾ
ಇತ್ತೀಚಿನ ದಿನಗಳಲ್ಲಿ ಪ್ಯಾನ್ ಇಂಡಿಯಾ ಸಿನಿಮಾಗಳು ಹೆಚ್ಚಾಗುತ್ತಿವೆ. ಕಲಾವಿದರು ಗಡಿಗೂ ಮೀರಿ ಖ್ಯಾತಿಗಳಿಸುವ ಜೊತೆಗೆ ಅಭಿಮಾನಿ ಬಳಗವನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ. ಕೇವಲ ಒಂದೇ ಭಾಷೆಗೆ ಸೀಮಿತವಾಗದೆ ಬೇರೆ ಬೇರೆ ಭಾಷೆಯಲ್ಲೂ ಮಿಂಚುವ ಮೂಲಕ ತನ್ನ ಖ್ಯಾತಿಯನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾ ಜೊತೆಗೆ ಕಲಾವಿದರು ಸಹ ಬೇರೆ ಬೇರೆ ಭಾಷೆಯಲ್ಲಿ ಸಿನಿಮಾ ಮಾಡುತ್ತಿದ್ದಾರೆ.
ಕನ್ನಡದ ಸಾಕಷ್ಟು ಕಲಾವಿದರು ಬೇರೆ ಭಾಷೆಯಲ್ಲಿ ಮಿಂಚುತ್ತಿದ್ದಾರೆ. ಈ ಸಾಲಿಗೆ ಈಗ ನಟ ನೀನಾಸಂ ಸತೀಶ್ ಸಹ ಸೇರ್ಪಡೆಗೊಂಡಿದ್ದಾರೆ. ಹೌದು, ನಟ ನೀನಾಸಂ ಸತೀಶ್ ತಮಿಳು ಸಿನಿಮಾರಂಗಕ್ಕೆ ಕಾಲಿಟ್ಟಿದ್ದಾರೆ. ಸತೀಶ್ ಕಾಲಿವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ ಎನ್ನುವ ವಿಚಾರ ಈಗಾಗಲೇ ಸದ್ದು ಮಾಡುತ್ತಿತ್ತು. ಆದರೆ ಹೆಚ್ಚಿನ ಮಾಹಿತಿ ಬಿಟ್ಟುಕೊಟ್ಟಿರಲಿಲ್ಲ.
ಇದೀಗ ತಮಿಳು ಸಿನಿಮಾರಂಗದ ಎಂಟ್ರಿಗೆ ಸಮಯ ನಿಗದಿಯಾಗಿದೆ. ಸತೀಶ್ ನಟಿಸುತ್ತಿರುವ ಚಿತ್ರಕ್ಕೆ 'ಪಗೆಮನುಕ್ಕು ಅರುಲ್ವಾಯ್' ಎಂದು ಶೀರ್ಷಿಕೆ ಇಡಲಾಗಿದ್ದು, ಚಿತ್ರಕ್ಕೆ ಅನೀಶ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅಂದಹಾಗೆ ಸತೀಶ್ ಮುಂದಿನ ವರ್ಷ ಜನವರಿಯಿಂದ ತಮಿಳು ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಲಿದ್ದಾರೆ.

ಸತೀಶ್ ಜೊತೆ ಚಿತ್ರದಲ್ಲಿ ಖ್ಯಾತ ನಟ ಸಸಿಕುಮಾರ್ ನಟಿಸುತ್ತಿದ್ದಾರೆ. ಸಸಿಕುಮಾರ್ ಮತ್ತು ಸತೀಶ್ ನಡುವೆ ನೇರ ಹಣಾಹಣಿ ಇರಲಿದೆಯಂತೆ. ಚಿತ್ರದ ಬಹುತೇಕ ಭಾಗ ಜೈಲಿನಲ್ಲೇ ಚಿತ್ರೀಕರಣವಾಗಲಿದೆ ಎನ್ನಲಾಗುತ್ತಿದೆ. ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿದ್ದು, ಸತೀಶ್ ಮುಂದಿನ ತಿಂಗಳಿಂದ ಎಂಟ್ರಿ ಕೊಡಲಿದ್ದಾರೆ. ಚಿತ್ರದಲ್ಲಿ ಸತೀಶ್ ಖೈದಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಈ ಪಾತ್ರಕ್ಕಾಗಿ ಸತೀಶ್ ಎಲ್ಲಾ ರೀತಿಯ ತಯಾರಿ ಮಾಡಿಕೊಂಡಿದ್ದಾರೆ. ಸತೀಶ್ ನೀನಾಸಂ ಸದ್ಯ ಕನ್ನಡದಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಪೆಟ್ರೊಮ್ಯಾಕ್ಸ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ದಸರಾ, ಮ್ಯಾಟ್ನಿ ಸಿನಿಮಾಗಳು ಸಾಲಿನಲ್ಲಿವೆ. ಇನ್ನೂ ಶ್ರದ್ಧಾ ಶ್ರೀನಾಥ್ ಜೊತೆ ನಟಿಸಿರುವ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ.
This News Article is a Copy of FILMIBEAT
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm