ಬ್ರೇಕಿಂಗ್ ನ್ಯೂಸ್
22-12-20 02:22 pm Source: FILMIBEAT Shruthi Gk ಸಿನಿಮಾ
ಇತ್ತೀಚಿನ ದಿನಗಳಲ್ಲಿ ಪ್ಯಾನ್ ಇಂಡಿಯಾ ಸಿನಿಮಾಗಳು ಹೆಚ್ಚಾಗುತ್ತಿವೆ. ಕಲಾವಿದರು ಗಡಿಗೂ ಮೀರಿ ಖ್ಯಾತಿಗಳಿಸುವ ಜೊತೆಗೆ ಅಭಿಮಾನಿ ಬಳಗವನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ. ಕೇವಲ ಒಂದೇ ಭಾಷೆಗೆ ಸೀಮಿತವಾಗದೆ ಬೇರೆ ಬೇರೆ ಭಾಷೆಯಲ್ಲೂ ಮಿಂಚುವ ಮೂಲಕ ತನ್ನ ಖ್ಯಾತಿಯನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾ ಜೊತೆಗೆ ಕಲಾವಿದರು ಸಹ ಬೇರೆ ಬೇರೆ ಭಾಷೆಯಲ್ಲಿ ಸಿನಿಮಾ ಮಾಡುತ್ತಿದ್ದಾರೆ.
ಕನ್ನಡದ ಸಾಕಷ್ಟು ಕಲಾವಿದರು ಬೇರೆ ಭಾಷೆಯಲ್ಲಿ ಮಿಂಚುತ್ತಿದ್ದಾರೆ. ಈ ಸಾಲಿಗೆ ಈಗ ನಟ ನೀನಾಸಂ ಸತೀಶ್ ಸಹ ಸೇರ್ಪಡೆಗೊಂಡಿದ್ದಾರೆ. ಹೌದು, ನಟ ನೀನಾಸಂ ಸತೀಶ್ ತಮಿಳು ಸಿನಿಮಾರಂಗಕ್ಕೆ ಕಾಲಿಟ್ಟಿದ್ದಾರೆ. ಸತೀಶ್ ಕಾಲಿವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ ಎನ್ನುವ ವಿಚಾರ ಈಗಾಗಲೇ ಸದ್ದು ಮಾಡುತ್ತಿತ್ತು. ಆದರೆ ಹೆಚ್ಚಿನ ಮಾಹಿತಿ ಬಿಟ್ಟುಕೊಟ್ಟಿರಲಿಲ್ಲ.
ಇದೀಗ ತಮಿಳು ಸಿನಿಮಾರಂಗದ ಎಂಟ್ರಿಗೆ ಸಮಯ ನಿಗದಿಯಾಗಿದೆ. ಸತೀಶ್ ನಟಿಸುತ್ತಿರುವ ಚಿತ್ರಕ್ಕೆ 'ಪಗೆಮನುಕ್ಕು ಅರುಲ್ವಾಯ್' ಎಂದು ಶೀರ್ಷಿಕೆ ಇಡಲಾಗಿದ್ದು, ಚಿತ್ರಕ್ಕೆ ಅನೀಶ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅಂದಹಾಗೆ ಸತೀಶ್ ಮುಂದಿನ ವರ್ಷ ಜನವರಿಯಿಂದ ತಮಿಳು ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಲಿದ್ದಾರೆ.

ಸತೀಶ್ ಜೊತೆ ಚಿತ್ರದಲ್ಲಿ ಖ್ಯಾತ ನಟ ಸಸಿಕುಮಾರ್ ನಟಿಸುತ್ತಿದ್ದಾರೆ. ಸಸಿಕುಮಾರ್ ಮತ್ತು ಸತೀಶ್ ನಡುವೆ ನೇರ ಹಣಾಹಣಿ ಇರಲಿದೆಯಂತೆ. ಚಿತ್ರದ ಬಹುತೇಕ ಭಾಗ ಜೈಲಿನಲ್ಲೇ ಚಿತ್ರೀಕರಣವಾಗಲಿದೆ ಎನ್ನಲಾಗುತ್ತಿದೆ. ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿದ್ದು, ಸತೀಶ್ ಮುಂದಿನ ತಿಂಗಳಿಂದ ಎಂಟ್ರಿ ಕೊಡಲಿದ್ದಾರೆ. ಚಿತ್ರದಲ್ಲಿ ಸತೀಶ್ ಖೈದಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಈ ಪಾತ್ರಕ್ಕಾಗಿ ಸತೀಶ್ ಎಲ್ಲಾ ರೀತಿಯ ತಯಾರಿ ಮಾಡಿಕೊಂಡಿದ್ದಾರೆ. ಸತೀಶ್ ನೀನಾಸಂ ಸದ್ಯ ಕನ್ನಡದಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಪೆಟ್ರೊಮ್ಯಾಕ್ಸ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ದಸರಾ, ಮ್ಯಾಟ್ನಿ ಸಿನಿಮಾಗಳು ಸಾಲಿನಲ್ಲಿವೆ. ಇನ್ನೂ ಶ್ರದ್ಧಾ ಶ್ರೀನಾಥ್ ಜೊತೆ ನಟಿಸಿರುವ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm