ಬ್ರೇಕಿಂಗ್ ನ್ಯೂಸ್
22-12-20 02:22 pm Source: FILMIBEAT Shruthi Gk ಸಿನಿಮಾ
ಇತ್ತೀಚಿನ ದಿನಗಳಲ್ಲಿ ಪ್ಯಾನ್ ಇಂಡಿಯಾ ಸಿನಿಮಾಗಳು ಹೆಚ್ಚಾಗುತ್ತಿವೆ. ಕಲಾವಿದರು ಗಡಿಗೂ ಮೀರಿ ಖ್ಯಾತಿಗಳಿಸುವ ಜೊತೆಗೆ ಅಭಿಮಾನಿ ಬಳಗವನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ. ಕೇವಲ ಒಂದೇ ಭಾಷೆಗೆ ಸೀಮಿತವಾಗದೆ ಬೇರೆ ಬೇರೆ ಭಾಷೆಯಲ್ಲೂ ಮಿಂಚುವ ಮೂಲಕ ತನ್ನ ಖ್ಯಾತಿಯನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾ ಜೊತೆಗೆ ಕಲಾವಿದರು ಸಹ ಬೇರೆ ಬೇರೆ ಭಾಷೆಯಲ್ಲಿ ಸಿನಿಮಾ ಮಾಡುತ್ತಿದ್ದಾರೆ.
ಕನ್ನಡದ ಸಾಕಷ್ಟು ಕಲಾವಿದರು ಬೇರೆ ಭಾಷೆಯಲ್ಲಿ ಮಿಂಚುತ್ತಿದ್ದಾರೆ. ಈ ಸಾಲಿಗೆ ಈಗ ನಟ ನೀನಾಸಂ ಸತೀಶ್ ಸಹ ಸೇರ್ಪಡೆಗೊಂಡಿದ್ದಾರೆ. ಹೌದು, ನಟ ನೀನಾಸಂ ಸತೀಶ್ ತಮಿಳು ಸಿನಿಮಾರಂಗಕ್ಕೆ ಕಾಲಿಟ್ಟಿದ್ದಾರೆ. ಸತೀಶ್ ಕಾಲಿವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ ಎನ್ನುವ ವಿಚಾರ ಈಗಾಗಲೇ ಸದ್ದು ಮಾಡುತ್ತಿತ್ತು. ಆದರೆ ಹೆಚ್ಚಿನ ಮಾಹಿತಿ ಬಿಟ್ಟುಕೊಟ್ಟಿರಲಿಲ್ಲ.
ಇದೀಗ ತಮಿಳು ಸಿನಿಮಾರಂಗದ ಎಂಟ್ರಿಗೆ ಸಮಯ ನಿಗದಿಯಾಗಿದೆ. ಸತೀಶ್ ನಟಿಸುತ್ತಿರುವ ಚಿತ್ರಕ್ಕೆ 'ಪಗೆಮನುಕ್ಕು ಅರುಲ್ವಾಯ್' ಎಂದು ಶೀರ್ಷಿಕೆ ಇಡಲಾಗಿದ್ದು, ಚಿತ್ರಕ್ಕೆ ಅನೀಶ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅಂದಹಾಗೆ ಸತೀಶ್ ಮುಂದಿನ ವರ್ಷ ಜನವರಿಯಿಂದ ತಮಿಳು ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಲಿದ್ದಾರೆ.
ಸತೀಶ್ ಜೊತೆ ಚಿತ್ರದಲ್ಲಿ ಖ್ಯಾತ ನಟ ಸಸಿಕುಮಾರ್ ನಟಿಸುತ್ತಿದ್ದಾರೆ. ಸಸಿಕುಮಾರ್ ಮತ್ತು ಸತೀಶ್ ನಡುವೆ ನೇರ ಹಣಾಹಣಿ ಇರಲಿದೆಯಂತೆ. ಚಿತ್ರದ ಬಹುತೇಕ ಭಾಗ ಜೈಲಿನಲ್ಲೇ ಚಿತ್ರೀಕರಣವಾಗಲಿದೆ ಎನ್ನಲಾಗುತ್ತಿದೆ. ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿದ್ದು, ಸತೀಶ್ ಮುಂದಿನ ತಿಂಗಳಿಂದ ಎಂಟ್ರಿ ಕೊಡಲಿದ್ದಾರೆ. ಚಿತ್ರದಲ್ಲಿ ಸತೀಶ್ ಖೈದಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಈ ಪಾತ್ರಕ್ಕಾಗಿ ಸತೀಶ್ ಎಲ್ಲಾ ರೀತಿಯ ತಯಾರಿ ಮಾಡಿಕೊಂಡಿದ್ದಾರೆ. ಸತೀಶ್ ನೀನಾಸಂ ಸದ್ಯ ಕನ್ನಡದಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಪೆಟ್ರೊಮ್ಯಾಕ್ಸ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ದಸರಾ, ಮ್ಯಾಟ್ನಿ ಸಿನಿಮಾಗಳು ಸಾಲಿನಲ್ಲಿವೆ. ಇನ್ನೂ ಶ್ರದ್ಧಾ ಶ್ರೀನಾಥ್ ಜೊತೆ ನಟಿಸಿರುವ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ.
This News Article is a Copy of FILMIBEAT
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm