ಬ್ರೇಕಿಂಗ್ ನ್ಯೂಸ್
22-12-20 02:22 pm Source: FILMIBEAT Shruthi Gk ಸಿನಿಮಾ
ಇತ್ತೀಚಿನ ದಿನಗಳಲ್ಲಿ ಪ್ಯಾನ್ ಇಂಡಿಯಾ ಸಿನಿಮಾಗಳು ಹೆಚ್ಚಾಗುತ್ತಿವೆ. ಕಲಾವಿದರು ಗಡಿಗೂ ಮೀರಿ ಖ್ಯಾತಿಗಳಿಸುವ ಜೊತೆಗೆ ಅಭಿಮಾನಿ ಬಳಗವನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ. ಕೇವಲ ಒಂದೇ ಭಾಷೆಗೆ ಸೀಮಿತವಾಗದೆ ಬೇರೆ ಬೇರೆ ಭಾಷೆಯಲ್ಲೂ ಮಿಂಚುವ ಮೂಲಕ ತನ್ನ ಖ್ಯಾತಿಯನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾ ಜೊತೆಗೆ ಕಲಾವಿದರು ಸಹ ಬೇರೆ ಬೇರೆ ಭಾಷೆಯಲ್ಲಿ ಸಿನಿಮಾ ಮಾಡುತ್ತಿದ್ದಾರೆ.
ಕನ್ನಡದ ಸಾಕಷ್ಟು ಕಲಾವಿದರು ಬೇರೆ ಭಾಷೆಯಲ್ಲಿ ಮಿಂಚುತ್ತಿದ್ದಾರೆ. ಈ ಸಾಲಿಗೆ ಈಗ ನಟ ನೀನಾಸಂ ಸತೀಶ್ ಸಹ ಸೇರ್ಪಡೆಗೊಂಡಿದ್ದಾರೆ. ಹೌದು, ನಟ ನೀನಾಸಂ ಸತೀಶ್ ತಮಿಳು ಸಿನಿಮಾರಂಗಕ್ಕೆ ಕಾಲಿಟ್ಟಿದ್ದಾರೆ. ಸತೀಶ್ ಕಾಲಿವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ ಎನ್ನುವ ವಿಚಾರ ಈಗಾಗಲೇ ಸದ್ದು ಮಾಡುತ್ತಿತ್ತು. ಆದರೆ ಹೆಚ್ಚಿನ ಮಾಹಿತಿ ಬಿಟ್ಟುಕೊಟ್ಟಿರಲಿಲ್ಲ.
ಇದೀಗ ತಮಿಳು ಸಿನಿಮಾರಂಗದ ಎಂಟ್ರಿಗೆ ಸಮಯ ನಿಗದಿಯಾಗಿದೆ. ಸತೀಶ್ ನಟಿಸುತ್ತಿರುವ ಚಿತ್ರಕ್ಕೆ 'ಪಗೆಮನುಕ್ಕು ಅರುಲ್ವಾಯ್' ಎಂದು ಶೀರ್ಷಿಕೆ ಇಡಲಾಗಿದ್ದು, ಚಿತ್ರಕ್ಕೆ ಅನೀಶ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅಂದಹಾಗೆ ಸತೀಶ್ ಮುಂದಿನ ವರ್ಷ ಜನವರಿಯಿಂದ ತಮಿಳು ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಲಿದ್ದಾರೆ.

ಸತೀಶ್ ಜೊತೆ ಚಿತ್ರದಲ್ಲಿ ಖ್ಯಾತ ನಟ ಸಸಿಕುಮಾರ್ ನಟಿಸುತ್ತಿದ್ದಾರೆ. ಸಸಿಕುಮಾರ್ ಮತ್ತು ಸತೀಶ್ ನಡುವೆ ನೇರ ಹಣಾಹಣಿ ಇರಲಿದೆಯಂತೆ. ಚಿತ್ರದ ಬಹುತೇಕ ಭಾಗ ಜೈಲಿನಲ್ಲೇ ಚಿತ್ರೀಕರಣವಾಗಲಿದೆ ಎನ್ನಲಾಗುತ್ತಿದೆ. ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿದ್ದು, ಸತೀಶ್ ಮುಂದಿನ ತಿಂಗಳಿಂದ ಎಂಟ್ರಿ ಕೊಡಲಿದ್ದಾರೆ. ಚಿತ್ರದಲ್ಲಿ ಸತೀಶ್ ಖೈದಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಈ ಪಾತ್ರಕ್ಕಾಗಿ ಸತೀಶ್ ಎಲ್ಲಾ ರೀತಿಯ ತಯಾರಿ ಮಾಡಿಕೊಂಡಿದ್ದಾರೆ. ಸತೀಶ್ ನೀನಾಸಂ ಸದ್ಯ ಕನ್ನಡದಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಪೆಟ್ರೊಮ್ಯಾಕ್ಸ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ದಸರಾ, ಮ್ಯಾಟ್ನಿ ಸಿನಿಮಾಗಳು ಸಾಲಿನಲ್ಲಿವೆ. ಇನ್ನೂ ಶ್ರದ್ಧಾ ಶ್ರೀನಾಥ್ ಜೊತೆ ನಟಿಸಿರುವ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ.
This News Article is a Copy of FILMIBEAT
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
24-05-26 09:01 pm
HK News Staffer
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am