ಬ್ರೇಕಿಂಗ್ ನ್ಯೂಸ್
23-12-20 12:06 pm Source: FILMIBEAT Shruthi Gk ಸಿನಿಮಾ
ಸ್ಯಾಂಡಲ್ ವುಡ್ ಕೃಷ್ಣ ಎಂದೇ ಖ್ಯಾತಿಗಳಿಸಿರುವ ನಟ ಅಜಯ್ ರಾವ್. ಕೃಷ್ಣನ ಸರಣಿಯ ಸಿನಿಮಾ ಮೂಲಕ ಅಭಿಮಾನಿಗಳ ಮನಗೆದ್ದಿರುವ ನಟ ಅಜಯ್ ರಾವ್ ಇದೀಗ ಹೊಸ ಸಿನಿಮಾ ಅನೌನ್ಸ್ ಆಗಿದ್ದು, ಮತ್ತೆ ಕೃಷ್ಣನ ಅವತಾರ ಎತ್ತಲು ಸಜ್ಜಾಗಿದ್ದಾರಾ? ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಕೃಷ್ಣನ್ ಲವ್ ಸ್ಟೋರಿ ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ಕೃಷ್ಣ ಲೀಲಾ, ಕೃಷ್ಣ ರುಕ್ಕು, ಕೃಷ್ಣನ್ ಮ್ಯಾರೇಜ್ ಸ್ಟೋರಿ ಹೀಗೆ ಸಾಲು ಸಾಲು ಕೃಷ್ಣನ ಸರಣಿಗಳಲ್ಲಿ ಅಜಯ್ ರಾವ್ ನಟಿಸಿದ್ದಾರೆ. ಇದೀಗ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದು, ಚಿತ್ರಕ್ಕೆ ಶಶಾಂಕ್ ಕಥೆ ರಚಿಸಿದ್ದಾರೆ. ಶಶಾಂಕ್ ಮತ್ತು ಅಜಯ್ ರಾವ್ ಅವರದ್ದು ಹಿಟ್ ಜೋಡಿ. ಕೃಷ್ಣನ್ ಲವ್ ಸ್ಟೋರಿ ಮತ್ತು ಕೃಷ್ಣ ಲೀಲಾ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದು ಶಶಾಂಕ್. ಇದೀಗ ಮತ್ತೆ ಅಜಯ್ ರಾವ್ ಗೆ ಕಥೆ ಬರೆದಿದ್ದಾರೆ ಅಂದ್ಮೇಲೆ ಕೃಷ್ಣ ಸೀರಿಸ್ ಆಗಿರಲಿದೆ ಎನ್ನುವುದು ಚಿತ್ರಪ್ರಿಯರ ಲೆಕ್ಕಾಚಾರ.
ಅಂದಹಾಗೆ ಶಶಾಂಕ್ ಕಥೆ ಮಾತ್ರ ಬರೆದಿದ್ದಾರೆ. ನಿರ್ದೇಶನದ ಜವಾಬ್ದಾರಿಯನ್ನು ಬೇರೆಯವರಿಗೆ ವಹಿಸಿದ್ದಾರೆ. ಚಿತ್ರಕ್ಕೆ ಶಂಕರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಮೊದಲು ರಾಜಾ ಹುಲಿ, ಜಂಟಲ್ ಮ್ಯಾನ್ ಸೇರಿದಂತೆ ಸುಮಾರು 15ಕ್ಕೂ ಹೆಚ್ಚು ಸಿನಿಮಾಗಳಿಗೆ ಸಹನಿರ್ದೇಶಕರಾಗಿ ಕೆಲಸ ಮಾಡಿದ್ದ ಶಂಕರ್ ಇದೀಗ ಪೂರ್ಣ ಪ್ರಮಾಣದ ನಿರ್ದೇಶಕರಾಗಿ ಎಂಟ್ರಿ ಕೊಡುತ್ತಿದ್ದಾರೆ.

ನಿರ್ದೇಶಕ ಗುರುದೇಶಪಾಂಡೆ ಬ್ಯಾನರ್ ನಲ್ಲಿ ಸಿನಿಮಾ ಮೂಡಿಬರುತ್ತಿದೆ. ಹೊಸ ಸಿನಿಮಾ ಮುಹೂರ್ತ ಮುಂದಿನ ವರ್ಷ ಜನವರಿಯಲ್ಲಿ ನೆರವೇರಲಿದೆ. ಜನವರಿ 24ರಂದು ಮುಹೂರ್ತ ಮಾಡಿಕೊಳ್ಳುವ ಮೂಲಕ ಅಧಿಕೃತವಾಗಿ ಚಾಲನೆ ಸಿಗಲಿದೆ. ಇನ್ನು ಉಳಿದಂತೆ ಅಜಯ್ ರಾವ್ ಗೆ ನಾಯಕಿಯಾಗಿ ಟಾಪ್ ನಟಿಯೊಬ್ಬರು ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಯಾರು ಎನ್ನುವುದು ಬಹಿರಂಗವಾಗಿಲ್ಲ. ಸದ್ಯದಲ್ಲೇ ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿ ಹೊರಬೀಳಲಿದೆ.
This News Article is a Copy of FILMIBEAT
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm